• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉ.ಪ್ರ. ಸ್ಥಳೀಯ ಚುನಾವಣೆ: ಬಿಎಸ್ ಪಿಗೆ ಮುಖಭಂಗ, ಕಾಂಗ್ರೆಸ್ಸಿಗೆ ಅಮೇಥಿ ಸೇರಿ ಬಹುತೇಕ ಕಡೆ ಗರ್ವಭಂಗ!

TNN Correspondent Posted On December 2, 2017
0


0
Shares
  • Share On Facebook
  • Tweet It

ಲಖನೌ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಶತಾಯ-ಗತಾಯ ಗೆಲ್ಲಲು ಪಣತೊಟ್ಟಿರುವ ಕಾಂಗ್ರೆಸ್ಸಿಗೆ ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತೀವ್ರ ಹಿನ್ನಡೆಯಾಗಿದೆ. ಅತ್ತ ಸ್ಥಳೀಯವಾಗಿ ಪ್ರಬಲವಾಗಿದ್ದ ಬಿಎಸ್ ಪಿ ಗತಿಯೂ ಹೇಳತೀರದಾಗಿದೆ.

ಮಹಾನಗರ ಪಾಲಿಕೆ ಮೇಯರ್ ಸ್ಥಾನದ 16 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 14 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದರೆ, ಬಿಎಸ್ ಪಿ ಕೇವಲ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿತು. ಕಾಂಗ್ರೆಸ್ ಸೊನ್ನೆ ಸುತ್ತುವ ಮೂಲಕ ಭಾರಿ ಹಿನ್ನಡೆ ಅನುಭವಿಸಿತು.

ಅದರಲ್ಲೂ ಕಾಂಗ್ರೆಸ್ಸಿನ ಭದ್ರಕೋಟೆ, ರಾಹುಲ್ ಗಾಂಧಿಯವರ ಲೋಕಸಭೆ ಕ್ಷೇತ್ರ ಅಮೇಥಿಯಲ್ಲೇ ಕಾಂಗ್ರೆಸ್ ಮಣ್ಣು ಮುಕ್ಕಿದ್ದು, ರಾಹುಲ್ ಗಾಂಧಿ ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಅಲ್ಲದೆ 198 ನಗರಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲೂ ಬಿಜೆಪಿಯೇ ಜಯಭೇರಿ ಬಾರಿಸಿದ್ದು, 79 ಸ್ಥಾನಗಳಲ್ಲಿ ಬಿಜೆಪಿ, 41 ಬಿಎಸ್ ಪಿ, 47 ಎಸ್ಪಿ, ಕಾಂಗ್ರೆಸ್ ಕೇವಲ 11 ಹಾಗೂ ಇತರರು 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಯೋಗಿ ಆದಿತ್ಯನಾಥ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಬಳಿಕ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಗೆಲುವು ಹೊಸ ಹುರುಪು ತಂದಿದೆ.

ಬಿಜೆಪಿ ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ, ಇದು ಅಭಿವೃದ್ಧಿಗೆ ಸಂದ ಜಯವಾಗಿದ್ದು, ಕಾರ್ಯಕರ್ತರಿಗೆ ಗೆಲುವು ಅರ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಬಿಜೆಪಿಗೆ ಈ ಗೆಲುವು ಸಿಹಿ ತಂದರೆ, ಸ್ಥಳೀಯವಾಗಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮುಕ್ತವಾಗಿದ್ದು, ರಾಹುಲ್ ಗಾಂಧಿಯವರನ್ನು ಚಿಂತೆಗೀಡು ಮಾಡಿರುವುದಂತೂ ಸುಳ್ಳಲ್ಲ.

 

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search