• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉ.ಪ್ರ. ಸ್ಥಳೀಯ ಚುನಾವಣೆ: ಬಿಎಸ್ ಪಿಗೆ ಮುಖಭಂಗ, ಕಾಂಗ್ರೆಸ್ಸಿಗೆ ಅಮೇಥಿ ಸೇರಿ ಬಹುತೇಕ ಕಡೆ ಗರ್ವಭಂಗ!

TNN Correspondent Posted On December 2, 2017
0


0
Shares
  • Share On Facebook
  • Tweet It

ಲಖನೌ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಶತಾಯ-ಗತಾಯ ಗೆಲ್ಲಲು ಪಣತೊಟ್ಟಿರುವ ಕಾಂಗ್ರೆಸ್ಸಿಗೆ ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತೀವ್ರ ಹಿನ್ನಡೆಯಾಗಿದೆ. ಅತ್ತ ಸ್ಥಳೀಯವಾಗಿ ಪ್ರಬಲವಾಗಿದ್ದ ಬಿಎಸ್ ಪಿ ಗತಿಯೂ ಹೇಳತೀರದಾಗಿದೆ.

ಮಹಾನಗರ ಪಾಲಿಕೆ ಮೇಯರ್ ಸ್ಥಾನದ 16 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 14 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದರೆ, ಬಿಎಸ್ ಪಿ ಕೇವಲ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿತು. ಕಾಂಗ್ರೆಸ್ ಸೊನ್ನೆ ಸುತ್ತುವ ಮೂಲಕ ಭಾರಿ ಹಿನ್ನಡೆ ಅನುಭವಿಸಿತು.

ಅದರಲ್ಲೂ ಕಾಂಗ್ರೆಸ್ಸಿನ ಭದ್ರಕೋಟೆ, ರಾಹುಲ್ ಗಾಂಧಿಯವರ ಲೋಕಸಭೆ ಕ್ಷೇತ್ರ ಅಮೇಥಿಯಲ್ಲೇ ಕಾಂಗ್ರೆಸ್ ಮಣ್ಣು ಮುಕ್ಕಿದ್ದು, ರಾಹುಲ್ ಗಾಂಧಿ ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಅಲ್ಲದೆ 198 ನಗರಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲೂ ಬಿಜೆಪಿಯೇ ಜಯಭೇರಿ ಬಾರಿಸಿದ್ದು, 79 ಸ್ಥಾನಗಳಲ್ಲಿ ಬಿಜೆಪಿ, 41 ಬಿಎಸ್ ಪಿ, 47 ಎಸ್ಪಿ, ಕಾಂಗ್ರೆಸ್ ಕೇವಲ 11 ಹಾಗೂ ಇತರರು 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಯೋಗಿ ಆದಿತ್ಯನಾಥ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಬಳಿಕ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಗೆಲುವು ಹೊಸ ಹುರುಪು ತಂದಿದೆ.

ಬಿಜೆಪಿ ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ, ಇದು ಅಭಿವೃದ್ಧಿಗೆ ಸಂದ ಜಯವಾಗಿದ್ದು, ಕಾರ್ಯಕರ್ತರಿಗೆ ಗೆಲುವು ಅರ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಬಿಜೆಪಿಗೆ ಈ ಗೆಲುವು ಸಿಹಿ ತಂದರೆ, ಸ್ಥಳೀಯವಾಗಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮುಕ್ತವಾಗಿದ್ದು, ರಾಹುಲ್ ಗಾಂಧಿಯವರನ್ನು ಚಿಂತೆಗೀಡು ಮಾಡಿರುವುದಂತೂ ಸುಳ್ಳಲ್ಲ.

 

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search