• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉ.ಪ್ರ. ಸ್ಥಳೀಯ ಚುನಾವಣೆ: ಬಿಎಸ್ ಪಿಗೆ ಮುಖಭಂಗ, ಕಾಂಗ್ರೆಸ್ಸಿಗೆ ಅಮೇಥಿ ಸೇರಿ ಬಹುತೇಕ ಕಡೆ ಗರ್ವಭಂಗ!

TNN Correspondent Posted On December 2, 2017
0


0
Shares
  • Share On Facebook
  • Tweet It

ಲಖನೌ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಶತಾಯ-ಗತಾಯ ಗೆಲ್ಲಲು ಪಣತೊಟ್ಟಿರುವ ಕಾಂಗ್ರೆಸ್ಸಿಗೆ ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತೀವ್ರ ಹಿನ್ನಡೆಯಾಗಿದೆ. ಅತ್ತ ಸ್ಥಳೀಯವಾಗಿ ಪ್ರಬಲವಾಗಿದ್ದ ಬಿಎಸ್ ಪಿ ಗತಿಯೂ ಹೇಳತೀರದಾಗಿದೆ.

ಮಹಾನಗರ ಪಾಲಿಕೆ ಮೇಯರ್ ಸ್ಥಾನದ 16 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 14 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದರೆ, ಬಿಎಸ್ ಪಿ ಕೇವಲ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿತು. ಕಾಂಗ್ರೆಸ್ ಸೊನ್ನೆ ಸುತ್ತುವ ಮೂಲಕ ಭಾರಿ ಹಿನ್ನಡೆ ಅನುಭವಿಸಿತು.

ಅದರಲ್ಲೂ ಕಾಂಗ್ರೆಸ್ಸಿನ ಭದ್ರಕೋಟೆ, ರಾಹುಲ್ ಗಾಂಧಿಯವರ ಲೋಕಸಭೆ ಕ್ಷೇತ್ರ ಅಮೇಥಿಯಲ್ಲೇ ಕಾಂಗ್ರೆಸ್ ಮಣ್ಣು ಮುಕ್ಕಿದ್ದು, ರಾಹುಲ್ ಗಾಂಧಿ ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಅಲ್ಲದೆ 198 ನಗರಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲೂ ಬಿಜೆಪಿಯೇ ಜಯಭೇರಿ ಬಾರಿಸಿದ್ದು, 79 ಸ್ಥಾನಗಳಲ್ಲಿ ಬಿಜೆಪಿ, 41 ಬಿಎಸ್ ಪಿ, 47 ಎಸ್ಪಿ, ಕಾಂಗ್ರೆಸ್ ಕೇವಲ 11 ಹಾಗೂ ಇತರರು 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಯೋಗಿ ಆದಿತ್ಯನಾಥ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಬಳಿಕ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಗೆಲುವು ಹೊಸ ಹುರುಪು ತಂದಿದೆ.

ಬಿಜೆಪಿ ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ, ಇದು ಅಭಿವೃದ್ಧಿಗೆ ಸಂದ ಜಯವಾಗಿದ್ದು, ಕಾರ್ಯಕರ್ತರಿಗೆ ಗೆಲುವು ಅರ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಬಿಜೆಪಿಗೆ ಈ ಗೆಲುವು ಸಿಹಿ ತಂದರೆ, ಸ್ಥಳೀಯವಾಗಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮುಕ್ತವಾಗಿದ್ದು, ರಾಹುಲ್ ಗಾಂಧಿಯವರನ್ನು ಚಿಂತೆಗೀಡು ಮಾಡಿರುವುದಂತೂ ಸುಳ್ಳಲ್ಲ.

 

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search