• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೀತಿ ಸಂಹಿತೆ ಉಲ್ಲಂಘಿಸಿದ ಹಾರ್ದಿಕ್ ಪಟೇಲ್ ವಿರುದ್ಧ ಎಫ್ಐಆರ್!

TNN Correspondent Posted On December 2, 2017
0


0
Shares
  • Share On Facebook
  • Tweet It

ಗಾಂಧಿನಗರ: ಚುನಾವಣೆಯಲ್ಲಿ ಗೆದ್ದರೆ ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಒಪ್ಪಿಕೊಂಡ ಬಳಿಕ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಬೆಂಬಲಿಸಿರುವ ಪಿಎಎಎಸ್ ಮುಖ್ಯಸ್ಥ ಹಾರ್ದಿಕ್ ಪಟೇಲ್ ವಿರುದ್ಧ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ನವೆಂಬರ್ 29ರಂದು ರಾಜ್ ಕೋಟ್ ನಲ್ಲಿ ರ್ಯಾಲಿ ನಡೆಸಲು ಜಿಲ್ಲಾಡಳಿತ ನಿರಾಕರಿಸಿದ್ದರೂ, ರ್ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಹಾರ್ದಿಕ್ ಪಟೇಲ್ ಹಾಗೂ ಬೆಂಬಲಿಗ ತುಷಾರ್ ನಂದಾನಿ ವಿರುದ್ಧ ಮಾಳವೀಯ ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ನಗರದ 8,9,10ನೇ ವಾರ್ಡಿನಲ್ಲಿ ಪಟೇಲ್ ಸಮುದಾಯದವರೆಲ್ಲರನ್ನೂ ಸೇರಿಸಿ ಸಭೆ ನಡೆಸಲು ಅನುಮತಿ ಕೋರಿ ನಂದಾನಿ ಮನವಿ ಸಲ್ಲಿಸಿದ್ದರು. ಅದೇ ದಿನ, ಅದೇ ಸ್ಥಳದಲ್ಲಿ ಮಹಾ ಕ್ರಾಂತಿ ರ್ಯಾಲಿ ನಡೆಸಲು ಅನುಮತೀ ನೀಡುವಂತೆ ಪಿಎಎಎಸ್ ಮನವಿ ಸಲ್ಲಿಸಿತ್ತು. ಆದರೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಎರಡೂ ಮನವಿ ತಿರಸ್ಕರಿಸಲಾಗಿತ್ತು ಎಂದು ಚುನಾವಣೆ ಅಧಿಕಾರಿ ಪಿ.ಆರ್.ಜಾನಿ ತಿಳಿಸಿದ್ದಾರೆ.

ಆದರೂ ಹಾರ್ದಿಕ್ ಪಟೇಲ್ ನೇತೃತ್ವದಲ್ಲಿ ಸುಮಾರು 15 ಸಾವಿರ ಜನರನ್ನು ಸೇರಿಸಿ ರ್ಯಾಲಿ ಮಾಡಲಾಗಿದೆ. ಹಾಗಾಗಿ ಕೇಸ್ ದಾಖಲಿಸಲು ಅನುಮತಿ ನೀಡಲಾಗಿದೆ ಎಂದು ವಿವರಿಸಿದ್ದಾರೆ.

ಹಾರ್ದಿಕ್ ಪಟೇಲ್ ಸೇರಿ ಹಲವರ ವಿರುದ್ಧ ಭಾರತೀಯ ದಂಡ ಸಂಹಿತೆ 143 (ಕಾನೂನಾತ್ಮಕವಲ್ಲದ ಸಭೆ) ಹಾಗೂ 188 (ಸರ್ಕಾರದ ನಿಯಮ ಉಲ್ಲಂಘನೆ) ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search