• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನ ದುರ್ಬಲ ಸರ್ಕಾರ ಎಂದು ಅಮೆರಿಕ ಟೀಕಿಸಿದ್ದೇಕೆ?

TNN Correspondent Posted On December 2, 2017
0


0
Shares
  • Share On Facebook
  • Tweet It

ವಾಷಿಂಗ್ಟನ್: ಜಮಾತ್ ಉದ್ ದವಾ ಮುಖ್ಯಸ್ಥ, ಉಗ್ರ ಹಫೀಜ್ ಸಯೀದ್ ಬಿಡುಗಡೆಗೊಳಿಸಿ, ಬಳಿಕ ಅಮೆರಿಕದ ಒತ್ತಾಯದಿಂದ ಆತನನ್ನು ಮರು ಗೃಹಬಂಧನಕ್ಕೆ ಒಳಪಡಿಸಿದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗಕ್ಕೊಳಗಾಗಿದ್ದ ಪಾಕಿಸ್ತಾನಕ್ಕೆ ಮತ್ತೊಂದು ಪೆಟ್ಟು ಬಿದ್ದಿದ್ದು, “ಪಾಕಿಸ್ತಾನ ದುರ್ಬಲ ಸರ್ಕಾರ” ಎಂದು ಅಮೆರಿಕ ಟೀಕಿಸಿದೆ.

ಪಾಕಿಸ್ತಾನದಲ್ಲಿ ಸಚಿವರೊಬ್ಬರ ತಲೆದಂಡಕ್ಕೆ ಒತ್ತಾಯಿಸಿ ಮುಸ್ಲಿಂ ಮೂಲಭೂತವಾದಿಗಳು ನಡೆಸಿದ ಪ್ರತಿಭಟನೆ ಹತ್ತಿಕ್ಕುವಲ್ಲಿ ವಿಫಲವಾದ ಸರ್ಕಾರ ಹಾಗೂ ಸಂಧಾನ ಮಾಡುವಲ್ಲಿ ಹಿನ್ನಡೆ ಅನುಭವಿಸಿದ ಸೇನೆಯ ನಡೆಯನ್ನು ಅಮೆರಿಕ ತಜ್ಞರು ತೀವ್ರವಾಗಿ ಟೀಕಿಸಿದ್ದು, ಪಾಕಿಸ್ತಾನ ತನ್ನ ದೇಶದ ಮೇಲೆ ಹಿಡಿತ ಸಾಧಿಸುವಲ್ಲಿ ವಿಫಲವಾಗಿದೆ ಎಂದು ವಿಶ್ಲೇಷಿಸಿದ್ದಾರೆ.

ಇದು ಮತ್ತೆ ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದರಿಂದ ಮತ್ತೆ ಮುಜುಗರಕ್ಕೀಡಾದಂತಾಗಿದೆ.

ಇಸ್ಲಾಮಿಕ್ ಮೂಲಭೂತವಾದಿಗಳು ಪ್ರತಿಭಟನೆ ನಡೆಸುತ್ತಿರುವ ವೇಳೆ ಪಾಕಿಸ್ತಾನ ಸರ್ಕಾರ ಕೈಗೊಂಡ ಪ್ರತಿ ನಿರ್ಧಾರಗಳು ಉಗ್ರವಾದಿಗಳಿಗೆ ಪ್ರೋತ್ಸಾಹ ನೀಡುವಂತಿದ್ದು, ಪ್ರಸ್ತುತ ಪಾಕಿಸ್ತಾನದಲ್ಲಿ ಪರಿಸ್ಥಿತಿ ಆತಂಕದಿಂದ ಕೂಡಿದೆ ಎಂದು ಟ್ರಂಪ್ ಸರ್ಕಾರದ ತಜ್ಞರು ಟೀಕಿಸಿದ್ದಾರೆ.

ಚುನಾವಣೆ ಕಾಯಿದೆಗೆ ತಿದ್ದುಪಡಿ ತಂದು ಪ್ರತಿಜ್ಞಾ ವಿಧಿ ಬದಲಾಯಿಸಿದ್ದ ಕಾನೂನು ಸಚಿವ ಜಾಹೀದ್ ಹಮೀದ್ ನಡೆ ಖಂಡಿಸಿದ್ದಲ್ಲದೇ, ಧರ್ಮನಿಂದನೆ ಆರೋಪದಲ್ಲಿ ಆತನ ವಜಾಕ್ಕಾಗಿ ಆಗ್ರಹಿಸಿ ಸಾವಿರಾರು ಮುಸ್ಲಿಮರು ಇಸ್ಲಾಮಾಬಾದ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಗಲಾಟೆಯಲ್ಲಿ ಸುಮಾರು 6 ಜನ ಮೃತಪಟ್ಟಿದ್ದರು. ಬಳಿಕ ಕಾನೂನು ಸಚಿವ ರಾಜೀನಾಮೆ ನೀಡಿದ್ದರು.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search