• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಪಿ ಪಾಕಿಸ್ತಾನದ ಸರ್ಕಾರಿ ಪೋಷಿತ ಭಯೋತ್ಪಾದನೆಯ ಕರಾಳ ಮುಖ ಎಳೆಎಳೆಯಾಗಿ ಬಿಚ್ಚಿಟ್ಟ ಉಗ್ರ

TNN Correspondent Posted On December 2, 2017
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನ ಸರ್ಕಾರದ ಭಯೋತ್ಪಾದನೆ ಕುರಿತು ನಿಲುವು ಮತ್ತೊಮ್ಮೆ ಸಾಬೀತಾಗಿದೆ.  ಪೊಲೀಸರು ಬಂಧಿಸಿರುವ ಜಮಾತ್ ಉದ್ ದವಾ ಉಗ್ರ ಸಂಘಟನೆಯ ಭಯೋತ್ಪಾದಕ ಮಹಮ್ಮದ ಅಮಿರ್ ಅಲಿಯಾಸ್ ಅಬು ಹಮಾಸ್ ತನಿಖೆ ವೇಳೆ ಪಾಕ್ ಗುಪ್ತಚರ ಸಂಸ್ಥೆ ಐಎಸ್ಐ ಭಯೋತ್ಪಾದಕರಿಗೆ ಪೋಷಣೆ ನೀಡುತ್ತಿದೆ ಎಂದು ಹೇಳಿದ್ದಾನೆ.

ಇತ್ತೀಚೆಗೆ ಕಾಶ್ಮೀರದ ಗಡಿಯಲ್ಲಿ ಅಕ್ರಮವಾಗಿ ನುಸುಳಿ ದುಷ್ಕೃತ್ಯಗಳನ್ನು ನಡೆಸಲು ಸಂಚು ಹೂಡಿದ್ದ ಮಹಮ್ಮದ್ ಅಮಿರ್ ನನ್ನು ಭಾರತೀಯ ಸೈನಿಕರು ಬಂಧಿಸಿ, ಎನ್ಐಎ ವಶಕ್ಕೆ ನೀಡಿದ್ದರು. ತನಿಖೆ ವೇಳೆ ಪಾಕಿಸ್ತಾನದ ಗುಪ್ತಚರ ಇಲಾಖೆ ಭಯೋತ್ಪಾದಕರಿಗೆ ಹೇಗೆ ಸಹಕಾರ ನೀಡುತ್ತಿದೆ ಎಂಬುದರ ಕುರಿತು ಎಳೆ ಎಳೆಯಾಗಿ ಮಾಹಿತಿ ನೀಡಿದ್ದಾನೆ.

‘ನಿರುದ್ಯೋಗಿಗಳು ಭಯೋತ್ಪಾದಕರಾಗುತ್ತಿದ್ದಾರೆ. ಭಯೋತ್ಪಾದನೆ ತರಬೇತಿ ಶಿಬಿರದಿಂದ ಹೊರಬರುವವರನ್ನು ಸೈನಿಕರಂತೆ ಬರುತ್ತಾರೆ. ಅವರು ಐಎಸ್ಐ ಎಜೆಂಟ್ ಗಳಾಗಿ ಭಯೋತ್ಪಾದನೆಗಾಗಿ ಸಂಚು ಮಾಡುತ್ತಾರೆ. ಅಲ್ಲದೇ ಐಎಸ್ಐ ಹೆಸರಲ್ಲಿ ಯುವಕರನ್ನು ಭಯೋತ್ಪಾದನೆ ಶಿಬಿರಗಳಿಗೆ ಸಾಗಿಸುವ ಕಾರ್ಯ ಮಾಡುತ್ತಾರೆ. ವಿಶೇಷವಾಗಿ ಕಾಶ್ಮೀರದ ಅಜಾದಿ ಹೆಸರಿ ದೃಶ್ಯಗಳನ್ನು ತೋರಿಸಿ, ನಮ್ಮ ಬಂದುಗಳು ಸಂಕಷ್ಟದಲ್ಲಿದ್ದಾರೆ ಅವರನ್ನು ರಕ್ಷಿಸಿ ಎಂದು ಪ್ರಚೋಧನೆ ನೀಡುತ್ತಾರೆ ಎಂಬ ಮಾಹಿತಿ ಮಹಮ್ಮದ್ ಅಮಿರ್ ನೀಡಿದ್ದಾನೆ.

ಭಯೋತ್ಪಾದಕ ತರಬೇತಿ ಶಿಬಿರದಿಂದ ಹೊರಬಂದವರಿಗೆ ಜಿಪಿಎಸ್, ವೈರ್ ಲೆಸ್ ಮೊಬೈಲ್ ಮೂಲಕ ಸೂಚನೆ, ಸಂದೇಶಗಳನ್ನು ನೀಡುತ್ತದೆ. ಆ ಮೂಲಕ ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಆಘಾತಕಾರಿ ಮಾಹಿತಿ ತನಿಖಾಧಿಕಾರಿಗಳ ಎದುರು ಬಾಯಿ ಬಿಟ್ಟಿದ್ದಾನೆ.

ಮುಂಬೈ ದಾಳಿ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಮತ್ತು ಜಾಕಿ ಉರ್ ರೆಹೆಮಾನ್ ಲಕ್ವಿ ಅವರಿಗೆ ಪಾಕಿಸ್ತಾನದ ಗುಪ್ತಚರ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತಿದೆ. ನಾನು 2014ರಲ್ಲಿ ಎಲ್ಇ ಟಿ ಸೇರಿದ್ದೆ. ಹಫೀಜ್ ಸಯೀದ್ ನೇತೃತ್ವದ ಶಿಬಿರದಲ್ಲೇ ತರಬೇತಿ ಪಡೆದಿದ್ದೇನೆ. ಇನ್ನು ಹಲವು ಯುವಕರು ಅಲ್ಲಿ ತರಬೇತಿ ಪಡೆದಿದ್ದಾರೆ ಎಂದು ಕ್ಯಾಮೆರಾದ ಎದುರೇ ಬಾಯಿ ಬಿಟ್ಟಿದ್ದಾನೆ.

ಎಲ್ ಇಟಿ ತರಬೇತಿ ಮುಗಿಸಿ ಹೊರಬಂದು ಸಣ್ಣ ಉದ್ಯಮ ಆರಂಭಿಸಲು ಉದ್ದೇಶಿಸಿದ್ದೆ. ಆದರೆ ಎಲ್ ಇಟಿಯವರು ಮತ್ತೆ ನನ್ನನ್ನು ಅವರ ಮೋಹ ಜಾಲಕ್ಕೆ ಸಿಲುಕಿಸಿದ್ದರು. ನಂತರ ಮುಂದಿನ ಹಂತದ ತರಬೇತಿಯಾದ ಡೈರಾ ಈ ಆಮ್ ಗೆ ಕಳುಹಿಸಿದ್ದರು. ಅಲ್ಲಿ ನಾಲ್ಕು ತಿಂಗಳು ಎಕೆ 47 ಗನ್, ಪಿಸ್ತೋಲ್, ಗ್ರೈನೆಡ್ ಲಾಂಚರ್ ಬಳಕೆ, ಅರಣ್ಯದಲ್ಲಿ ಯುದ್ಧ  ಹೇಗೆ ಮಾಡಬೇಕು ಎಂಬುದರ ಕುರಿತು ತರಬೇತಿ ಪಡೆದಿದ್ದೇ ಎಂದು ತರಬೇತಿ ಪಡೆದಿದ್ದೇನೆ ಎಂದು ಬಾಯಿ ಬಿಟ್ಟಿದ್ದಾನೆ.

ಈ ಎಲ್ಲ ಚಟುವಟಿಕೆಗಳಿಗೆ ಪಾಕಿಸ್ತಾನ ಸರ್ಕಾರ ಪರೋಕ್ಷ ಮತ್ತು ಪ್ರತ್ಯಕ್ಷವಾಗಿ ಸಹಕಾರ ನೀಡುತ್ತಿದೆ. ಪಾಕಿಸ್ತಾನ ಸೈನ್ಯವು ಭಾರತವನ್ನು ಎದುರಿಸಲು ಭಯೋತ್ಪಾದಕರ ಸಹಾಯವನ್ನು ಗಡಿಯಲ್ಲಿ ಪಡೆಯುತ್ತದೆ. ಅದಕ್ಕಾಗಿಯೇ ಭಾರತಕ್ಕೆ ನುಸುಳಲು ಉಗ್ರರಿಗೆ ಅನುಕೂಲಕರ ವಾತಾವರಣ ಇದೆ ಎಂದು ತಿಳಿಸಿದ್ದಾನೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search