• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುಜರಾತ್ ಚುನಾವಣೆ ಗೆಲ್ಲಿಸಲು ಪಣ, 6 ದಿನದಲ್ಲಿ 31 ಸಭೆ, ರ್ಯಾಲಿ ನಡೆಸಲಿರುವ ಪ್ರಧಾನಿ!

TNN Correspondent Posted On December 3, 2017
0


0
Shares
  • Share On Facebook
  • Tweet It

ಗಾಂಧಿನಗರ: ಇತ್ತೀಚೆಗಷ್ಟೇ ಉತ್ತರ ಪ್ರದೇಶ ಸ್ಥಳೀಯ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ ಬಳಿಕ ಪ್ರಧಾನಿ ಮೋದಿ ಅವರ ವಿಶ್ವಾಸ ದುಪ್ಪಟ್ಟಾಗಿದ್ದು, ಗುಜರಾತ್ ಚುನಾವಣೆಯಲ್ಲೂ ಮೋಡಿ ಮಾಡಲು ಭಾನುವಾರದಿಂದ ಮೋದಿ ಸಾಲು, ಸಾಲು ರ್ಯಾಲಿ, ಸಭೆ ನಡೆಸಲಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ ಮೋದಿ ಅವರು ಭಾನುವಾರ ಗುಜರಾತಿನಲ್ಲಿ ಹಲವು ರ್ಯಾಲಿ, ಸಭೆ ನಡೆಸಲಿದ್ದು, ಬಿರುಸಿನ ಪ್ರಚಾರ ಕೈಗೊಳ್ಳಲಿದ್ದಾರೆ. ಮುಂದಿನ ಆರು ದಿನಗಳಲ್ಲಿ ಪ್ರಧಾನಿ 31 ರ್ಯಾಲಿ ಹಾಗೂ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬಿರುಸಿನ ಪ್ರಚಾರದ ಭಾಗವಾಗಿ ಭಾನುವಾರ ಮೋದಿ ಅವರು ಬರೂಚ್ ಹಾಗೂ ಸುರೇಂದ್ರ ನಗರದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಲಿದ್ದು, ಅಪಾರ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ ಸೋಮವಾರ ಬರೋಬ್ಬರಿ 7 ರ್ಯಾಲಿ ಹಾಗೂ ಸಭೆಗಳಲ್ಲಿ ಮಾತನಾಡಲಿದ್ದಾರೆ.

ಜತೆಗೆ ಭಾನುವಾರವೇ, ಸೌರಾಷ್ಟ್ರ, ರಾಜ್ ಕೋಟ್ ಗೆ ಭೇಟಿ ನೀಡಲಿದ್ದು, ಇದಕ್ಕೂ ಮೊದಲು ಅಹಮದಾಬಾದ್ ನಲ್ಲಿ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದಾರೆ. ಸೋಮವಾರ ಧರಂಪುರ, ಭಾವ್ ನಗರ, ಜುನಾಗಡ್, ಜಮನಗರದಲ್ಲಿ “ವಿಕಾಸ್ ರ್ಯಾಲಿ”ಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ಸಹ ಸೌರಾಷ್ಟ್ರದ ಹಲವು ಭಾಗಗಳಲ್ಲಿ ರ್ಯಾಲಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಆದಾಗ್ಯೂ ಗುಜರಾತ್ ಪ್ರಧಾನಿ ಮೋದಿ ಅವರ ತವರು ರಾಜ್ಯವಾಗಿದ್ದು, ಡಿ.14 ಹಾಗೂ 19ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಪಕ್ಷವನ್ನು ಗೆಲ್ಲಿಸಲು ಮೋದಿ ಪಣ ತೊಟ್ಟಿದ್ದಾರೆ. ಕಳೆದ 22 ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದು, ಚುನಾವಣೆ ಪೂರ್ವ ಸಮೀಕ್ಷೆಗಳಲ್ಲಿ ಈ ಬಾರಿಯೂ ಬಿಜೆಪಿಯೇ ಗೆಲ್ಲಲಿದೆ ಎಂದು ಹೇಳಲಾಗಿದೆ.

0
Shares
  • Share On Facebook
  • Tweet It




Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search