• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೇಕ್ ಇನ್ ಇಂಡಿಯಾ ಯೋಜನೆಯಿಂದ ಭಾರತಕ್ಕೆ 1 ಲಕ್ಷ ಕೋಟಿ ರು. ಉಳಿತಾಯ! ಇದು ಮೋದಿ ಮೋಡಿ!

TNN Correspondent Posted On December 3, 2017


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಮೇಕ್ ಇನ್ ಇಂಡಿಯಾ ಯೋಜನೆಗೆ ಆರಂಭದಲ್ಲಿ ಸಹಜವಾಗಿಯೇ ಟೀಕೆಗಳು ವ್ಯಕ್ತವಾಗಿದ್ದವು. ಆದರೆ ಕೇಂದ್ರ ಸರ್ಕಾರದ ಈ ಯೋಜನೆ ಟೀಕೆಗಳನ್ನೂ ಮೆಟ್ಟಿನಿಂತಿದ್ದು, ಮೇಕ್ ಇನ್ ಇಂಡಿಯಾದಿಂದ ಭಾರತದ ರಕ್ಷಣಾ ಸಚಿವಾಲಯ 1 ಲಕ್ಷ ಕೋಟಿ ರೂಪಾಯಿಗಿಂತ ಅಧಿಕ ಹಣ ಉಳಿತಾಯವಾಗಿದೆ.

ಹೌದು, ಭಾರತದ ರಕ್ಷಣಾ ಸಂಶೋಧನೆ ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಕಳೆದ ಎರಡು ವರ್ಷಗಳಲ್ಲಿ ಸ್ಥಳೀಯ ಸಾಮಗ್ರಿ ಬಳಸಿ ಆರು ಯುದ್ಧ ವಿಮಾನ ಹಾಗೂ ಆ್ಯಂಟಿ ಟ್ಯಾಂಕ್ ಕ್ಷಿಪಣಿ ಯೋಜನೆ ಕೈಗೊಂಡಿದ್ದು, ಇದರಿಂದ ವಿದೇಶಗಳಿಂದ ಆಮದು ಮಾಡಿಕೊಂಡಿದ್ದರೆ ಭಾರತ 1 ಲಕ್ಷ ಕೋಟಿ ರೂಪಾಯಿ ಹೆಚ್ಚಿನ ಹಣ ವ್ಯಯಿಸಬೇಕಿತ್ತು. ಆದರೆ, ಭಾರತದಲ್ಲೇ ಉತ್ಪಾದನೆ ಮಾಡಲು ಮುಂದಾದ ಕಾರಣ ಇಷ್ಟು ಹಣ ಉಳಿತಾಯ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೆ, ನೌಕಾಪಡೆಗೆ ತಯಾರಿಸಿದ ಸಣ್ಣ ಶಸ್ತ್ರಾಸ್ತ್ರ, 20-25 ಕಿ.ಮೀ. ಹಾರುವ ಯುದ್ಧ ವಿಮಾನ, ಈಗ ಅಭಿವೃದ್ಧಿಪಡಿಸಲು ಒಪ್ಪಿಗೆ ಪಡೆದಿರುವ ಆಕಾಶ್ ಕ್ಷಿಪಣಿ, ಕಳೆದ ವಾರ ಯಶಸ್ವಿಯಾಗಿ ಉಡಾವಣೆಯಾದ ಆಕಾಶ್ ಎಸ್ 1 ಕ್ಷಿಪಣಿ ತಯಾರಿಕೆಯಿಂದಲೂ ಭಾರತಕ್ಕೆ ಹಣ ಉಳಿತಾಯವಾಗಿದೆ ಎಂದು ತಿಳಿದುಬಂದಿದೆ.

ಕಳೆದ ಎರಡು ವಾರಗಳ ಹಿಂದಷ್ಟೇ ಕೇಂದ್ರ ಸರ್ಕಾರ ರಾಫೆಲ್ ಶಸ್ತ್ರಾಸ್ತ್ರ ಖರೀದಿಯಲ್ಲೂ 12 ಸಾವಿರಕ್ಕೂ ಅಧಿಕ ಕೋಟಿ ರುಪಾಯಿ ಉಳಿಸಿತ್ತು. ಈಗ ಮೇಕ್ ಇನ್ ಇಂಡಿಯಾ ಯೋಜನೆಯಿಂದಲೂ ಹಣ ಉಳಿಸಿರುವುದು ಮೋದಿ ಅವರ ದೂರದೃಷ್ಟಿಗೆ ಹಿಡಿದ ಕನ್ನಡಿಯಾಗಿದೆ.

  • Share On Facebook
  • Tweet It


- Advertisement -


Trending Now
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
Tulunadu News June 29, 2022
Leave A Reply

  • Recent Posts

    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
  • Popular Posts

    • 1
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 2
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 3
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 4
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 5
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search