• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2018ರಲ್ಲಿ ಚಂದ್ರಯಾನ-2 : ಐತಿಹಾಸಿಕ ಸಾಹಸಕ್ಕೆ ಮುಂದಾದ ಇಸ್ರೊ

TNN Correspondent Posted On December 4, 2017
0


0
Shares
  • Share On Facebook
  • Tweet It

ದೆಹಲಿ: ಹೊಸ ಆವಿಷ್ಕಾರಗಳ ಮೂಲಕ, ತಂತ್ರಜ್ಞಾನದಲ್ಲೇ ಭಾರತದ ತಾಕತ್ತನ್ನು ನೂರು ಉಪಗ್ರಹಗಳನ್ನು ಏಕಕಾಲಕ್ಕೆ ಕಕ್ಷೆಗೆ ಸೇರಿಸಿದ ಇಸ್ರೊ ಇದೀಗ ಮತ್ತೊಂದು ಐತಿಹಾಸಿಕ ಕಾರ್ಯಕ್ಕೆ ಮುಂದಾಗಿದೆ.

ಸುಮಾರು 3290 ಕೆ.ಜಿ. ತೂಕದ ರಾಕೆಟ್‌ ಚಂದ್ರನತ್ತ ಇಸ್ರೊ ಕಳುಹಿಸಲಿದೆ. ಚಂದ್ರಯಾನ -2 ಯೋಜನೆಗಾಗಿ ಇಸ್ರೊ ಸುಮಾರು 600 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ.

10 ವರ್ಷಗಳ ಹಿಂದೆ 2008ರಲ್ಲಿ ಮೊದಲ ಚಂದ್ರಯಾನ ನಡೆಸಲಾಗಿತ್ತು. ಇದೀಗ ಮತ್ತೊಮ್ಮೆ ಇಸ್ರೊ ಚಂದ್ರನತ್ತ ಮುಖ ಮಾಡಿದ್ದು ಚಂದ್ರಯಾನ -2 ಯೋಜನೆಗೆ ಸಿದ್ಧತೆ ನಡೆಸಿದೆ. ಚಂದ್ರನ ಮೇಲ್ಮೈ ಲಕ್ಷಣಗಳನ್ನು ಸೂಕ್ಷ್ಮವಾಗಿ ಅಧ್ಯಯನ ನಡೆಸುವ ಉದ್ದೇಶ ಹೊಂದಿದೆ. ನಿರ್ಧಾರದಂತೆ ಎಲ್ಲವೂ ನಡೆದರೆ 2018ರ ಮಾರ್ಚನಲ್ಲಿ ಇಸ್ರೊ ಚಂದ್ರನ ಮೇಲೆ ಮಾನವರಹಿತ ವಾಹನ ಇಳಿಸಲಿದೆ.

ಒಂದು ಚಂದ್ರನ ಮೇಲ್ಮೈ ಮೇಲೆ ಓಡಾಡುವ ಚಕ್ರವಿರುವ ಮಾನವರಹಿತ ವಾಹನ (ರೋವರ್‌), ಒಂದು ಚಂದ್ರನ ಮೇಲ್ಮೈ ಕಕ್ಷೆಯಲ್ಲಿ ಸುತ್ತುವ ಗಗನನೌಕೆ (ಆರ್ಬಿಟರ್‌) ಮತ್ತು ರೋವರ್, ಆರ್ಬಿಟರ್ ಇಳಿಸಲು ನೆರವಾಗುವ ಲ್ಯಾಂಡರ್ ಚಂದ್ರನತ್ತ ರಾಕೆಟ್ ಮೂಲಕ ಕಳುಹಿಸಲಿದೆ. 14 ಭೂ ದಿನಗಳಲ್ಲಿ ಯಾನ ಅಂತ್ಯವಾಗಲಿದೆ.

ಸೂರ್ಯನತ್ತಲೂ ಸಾಗಲಿದೆ ಭಾರತದ ರಾಕೇಟ್: ಚಂದ್ರಯಾನವಷ್ಟೇ ಅಲ್ಲ ಸೂರ್ಯನತ್ತವು ಇಸ್ರೊ ಗುರಿಯಿಟ್ಟಿದ್ದು 2019ಕ್ಕೆ ಸೂರ್ಯಯಾನ ಕೈಗೊಳ್ಳುವ ಗುರಿ ಹೊಂದಿದೆ. ಸೂರ್ಯನತ್ತ ಸಾಗುವ ಯೋಜನೆಗೆ ಆದಿತ್ಯ ಎಲ್‌-1 ಎಂದು ನಾಮಕರಣವೂ ಮಾಡಿದೆ.

ಹೀಗೆ ಕೆಲಸ ಮಾಡುತ್ತೆ

ಚಂದ್ರನ ಮೇಲೆ ಕೆಲವು ರಾಸಾಯನಿಕ ಪರೀಕ್ಷೆಗಳನ್ನು ಇದು ಮಾಡುತ್ತದೆ. ಅಲ್ಲದೇ ಮೇಲ್ಮೈನ 3ಡಿ ಮ್ಯಾಪ್‌ ಸೆರೆಹಿಡಿಯುತ್ತದೆ. ರೋವರ್‌ ಚಂದ್ರನ ಒಳಾಂಗಣವನ್ನು ಅಧ್ಯಯನ ಮಾಡಲಿದೆ. 6 ಚಕ್ರಗಳ ರೋವರ್‌ ವಾಹನ ಸೆಮಿ-ಆಟಾನಮಸ್‌ ಮೋಡ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೆ ಮಾಹಿತಿಗಳನ್ನು ಭೂಮಿಗೆ ಕಳುಹಿಸುತ್ತದೆ. ಭೂಮಿಯಿಂದಲೇ ರೋವರ್ ನಿಯಂತ್ರಿಸುವ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ವಿಫಲವಾಗಿತ್ತು ಚಂದ್ರಯಾನ

2008ರ ಅಕ್ಟೋಬರ್‌ನಲ್ಲಿ ಇಸ್ರೊ ಚಂದ್ರಯಾನ ಕೈಗೊಂಡಿತ್ತು. 5 ಅಡಿ ಉದ್ದ ಮತ್ತು 5 ಅಡಿ ಅಗಲದ ಚೌಕಾಕೃತಿಯ ಉಪಗ್ರಹ ಚಂದ್ರನ ಕುಳಿಯೊಂದರಲ್ಲಿ ದ್ರವರೂಪದ ಮ್ಯಾಗ್ಮಾವನ್ನು (ಮ್ಯಾಗ್ಮಾಟಿಕ್‌ವಾಟರ್‌) ಗುರುತಿಸಿತ್ತು. ಆದರೆ, ಒಂದೇ ತಿಂಗಳಲ್ಲಿ ಉಪಗ್ರಹ ಪತನಗೊಂಡಿತ್ತು.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search