• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ಪ್ರತಾಪ್ ಸಿಂಹ ಅವರೇಕೆ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದು ಗೊತ್ತಾ?

TNN Correspondent Posted On December 4, 2017
0


0
Shares
  • Share On Facebook
  • Tweet It

 ರವಿ ಡಿ. ಚನ್ನಣ್ಣನವರ್…

ಈ ಹೆಸರು ಕೇಳುತ್ತಲೇ ಒಂದಷ್ಟು ಸ್ಫೂರ್ತಿಯ ಮಾತುಗಳು ಕೇಳಿ ಬರುತ್ತವೆ. ಖಡಕ್ ಅಧಿಕಾರಿ, ಜನರ ನಡುವಿರುವ ಅಧಿಕಾರಿ ಎಂಬ ಹೆಸರು ಕೇಳಿಬರುತ್ತದೆ. ಅದಕ್ಕೊಂದಿಷ್ಟು ಸತ್ಯ, ನಿಷ್ಠೆ, ಪ್ರಮಾಣಿಕತೆ ಎಂಬ ಪದಗಳ ಜೋಡಣೆಯಾಗುತ್ತದೆ.

ಆದರೆ ಇಂಥ ರವಿ ಡಿ. ಚನ್ನಣ್ಣನವರ್ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಗಲಾಟೆಯಲ್ಲಿ, ಅದರಲ್ಲೂ ಸಂಸದ ಪ್ರತಾಪ್ ಸಿಂಹ ಬಂಧನದ ಪ್ರಕರಣದಲ್ಲಿ ಎಡವಿದರೇ?

ಇಂಥಾದ್ದೊಂದು ಪ್ರಶ್ನೆಯನ್ನು ಸ್ವತಃ ಪ್ರತಾಪ್ ಸಿಂಹರೇ ಹುಟ್ಟು ಹಾಕಿದ್ದಾರೆ. ಹನುಮ ಜಯಂತಿ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಲಾಠಿ ಚಾರ್ಜ್ ಮಾಡಿದ, ಬಂಧಿಸಿದ ಬಳಿಕ “ಆಳುವವರ ಆಣತಿ ಮೀರುವಹಾಗಿಲ್ಲ ಅಲ್ವಾ ಸಾರ್?! ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಆಳುವ ಪಕ್ಷದ ಆಳುಗಳು ಎನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿರುವ ಅಣ್ಣಾಮಲೈ, ಸರ್ಕಾರವನ್ನು ಎದುರು ಹಾಕಿಕೊಂಡ ಡಿಐಜಿ ರೂಪ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ, ಭಾಷಣ ನಿಲ್ಲಿಸಿ” ಎಂದು ಪರೋಕ್ಷವಾಗಿ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದಾರೆ.

ಅಷ್ಟಕ್ಕೂ ಹುಣಸೂರಿನಲ್ಲಿ ನಡೆದ ಹನುಮ ಜಯಂತಿಯಲ್ಲಿ ಶಾಂತಿಯುತವಾಗಿ ಪೊಲೀಸರು ಭದ್ರತೆ ಒದಗಿಸಬಹುದಿತ್ತು, ಹನುಮನ ಭಕ್ತರನ್ನು ಮನವೊಲಿಸಿ ಮೆರವಣಿಗೆಗೆ ಅವಕಾಶ ಕೊಡಬಹುದಿತ್ತು. ಅದು ಬಿಟ್ಟು ಏಕಾ ಏಕಿ ಲಾಠಿ ಚಾರ್ಜ್ ಮಾಡಿದ, ಜನರನ್ನು ಬಂಧಿಸಿ ಜಯಂತಿಯನ್ನೇ ನಿಲ್ಲಿಸಿದ, ಪ್ರತಾಪ್ ಸಿಂಹರನ್ನೂ ಬಂಧಿಸಿದ, ಪ್ರತಾಪ್ ಸಿಂಹ ಅವರು ಪ್ರಿವೆಂಟ್ ಆರ್ಡರ್ ತೋರಿಸಿದಾಗ ಬ್ಯಾ ಬ್ಯಾ ಎಂದ ಪೊಲೀಸರ ವರ್ತನೆಯನ್ನು ನೋಡಿದರೆ ಪ್ರತಾಪ್ ಸಿಂಹ ಎತ್ತಿರುವ ಪ್ರಶ್ನೆಗಳಲ್ಲಿ ಉರುಳಿದೆ ಎನಿಸುತ್ತದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search