• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ಪ್ರತಾಪ್ ಸಿಂಹ ಅವರೇಕೆ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದು ಗೊತ್ತಾ?

TNN Correspondent Posted On December 4, 2017
0


0
Shares
  • Share On Facebook
  • Tweet It

 ರವಿ ಡಿ. ಚನ್ನಣ್ಣನವರ್…

ಈ ಹೆಸರು ಕೇಳುತ್ತಲೇ ಒಂದಷ್ಟು ಸ್ಫೂರ್ತಿಯ ಮಾತುಗಳು ಕೇಳಿ ಬರುತ್ತವೆ. ಖಡಕ್ ಅಧಿಕಾರಿ, ಜನರ ನಡುವಿರುವ ಅಧಿಕಾರಿ ಎಂಬ ಹೆಸರು ಕೇಳಿಬರುತ್ತದೆ. ಅದಕ್ಕೊಂದಿಷ್ಟು ಸತ್ಯ, ನಿಷ್ಠೆ, ಪ್ರಮಾಣಿಕತೆ ಎಂಬ ಪದಗಳ ಜೋಡಣೆಯಾಗುತ್ತದೆ.

ಆದರೆ ಇಂಥ ರವಿ ಡಿ. ಚನ್ನಣ್ಣನವರ್ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಗಲಾಟೆಯಲ್ಲಿ, ಅದರಲ್ಲೂ ಸಂಸದ ಪ್ರತಾಪ್ ಸಿಂಹ ಬಂಧನದ ಪ್ರಕರಣದಲ್ಲಿ ಎಡವಿದರೇ?

ಇಂಥಾದ್ದೊಂದು ಪ್ರಶ್ನೆಯನ್ನು ಸ್ವತಃ ಪ್ರತಾಪ್ ಸಿಂಹರೇ ಹುಟ್ಟು ಹಾಕಿದ್ದಾರೆ. ಹನುಮ ಜಯಂತಿ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಲಾಠಿ ಚಾರ್ಜ್ ಮಾಡಿದ, ಬಂಧಿಸಿದ ಬಳಿಕ “ಆಳುವವರ ಆಣತಿ ಮೀರುವಹಾಗಿಲ್ಲ ಅಲ್ವಾ ಸಾರ್?! ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಆಳುವ ಪಕ್ಷದ ಆಳುಗಳು ಎನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿರುವ ಅಣ್ಣಾಮಲೈ, ಸರ್ಕಾರವನ್ನು ಎದುರು ಹಾಕಿಕೊಂಡ ಡಿಐಜಿ ರೂಪ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ, ಭಾಷಣ ನಿಲ್ಲಿಸಿ” ಎಂದು ಪರೋಕ್ಷವಾಗಿ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದಾರೆ.

ಅಷ್ಟಕ್ಕೂ ಹುಣಸೂರಿನಲ್ಲಿ ನಡೆದ ಹನುಮ ಜಯಂತಿಯಲ್ಲಿ ಶಾಂತಿಯುತವಾಗಿ ಪೊಲೀಸರು ಭದ್ರತೆ ಒದಗಿಸಬಹುದಿತ್ತು, ಹನುಮನ ಭಕ್ತರನ್ನು ಮನವೊಲಿಸಿ ಮೆರವಣಿಗೆಗೆ ಅವಕಾಶ ಕೊಡಬಹುದಿತ್ತು. ಅದು ಬಿಟ್ಟು ಏಕಾ ಏಕಿ ಲಾಠಿ ಚಾರ್ಜ್ ಮಾಡಿದ, ಜನರನ್ನು ಬಂಧಿಸಿ ಜಯಂತಿಯನ್ನೇ ನಿಲ್ಲಿಸಿದ, ಪ್ರತಾಪ್ ಸಿಂಹರನ್ನೂ ಬಂಧಿಸಿದ, ಪ್ರತಾಪ್ ಸಿಂಹ ಅವರು ಪ್ರಿವೆಂಟ್ ಆರ್ಡರ್ ತೋರಿಸಿದಾಗ ಬ್ಯಾ ಬ್ಯಾ ಎಂದ ಪೊಲೀಸರ ವರ್ತನೆಯನ್ನು ನೋಡಿದರೆ ಪ್ರತಾಪ್ ಸಿಂಹ ಎತ್ತಿರುವ ಪ್ರಶ್ನೆಗಳಲ್ಲಿ ಉರುಳಿದೆ ಎನಿಸುತ್ತದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search