• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಅಮರನಾಥ ಯಾತ್ರಿಕರ ಮೇಲೆ ದಾಳಿ ಮಾಡಿದ್ದ ಮೂವರು ಎಲ್ಇಟಿ ಉಗ್ರರ ಸಂಹಾರ!

TNN Correspondent Posted On December 5, 2017
0


0
Shares
  • Share On Facebook
  • Tweet It

ಶ್ರೀನಗರ: ಕಳೆದ ವಾರವಷ್ಟೇ ಕಾಶ್ಮೀರದಲ್ಲಿ ವರ್ಷದಲ್ಲೇ 200 ಉಗ್ರರನ್ನು ಸದೆಬಡಿದ ಕೀರ್ತಿ ಪತಾಕೆ ಹಾರಿಸಿದ್ದ ಭಾರತೀಯ ಸೈನಿಕರು ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿಸಿದ್ದು, ಮಂಗಳವಾರ ಬೆಳಗ್ಗೆ ಮತ್ತೆ ಮೂವರನ್ನು ಹೊಡೆದುರುಳಿಸಿದ್ದಾರೆ.

ಕಳೆದ ಜುಲೈನಲ್ಲಿ ಅಮರನಾಥ ಯಾತ್ರಿಕರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ ಎನ್ನಲಾದ ಮೂವರು ಲಷ್ಕರೆ ತಯ್ಯಬಾ ಉಗ್ರರನ್ನು ದಕ್ಷಿಣ ಕಾಶ್ಮೀರದಲ್ಲಿ ಎನ್ ಕೌಂಟರ್ ಮಾಡಿ ಬಿಸಾಕಿದ್ದಾರೆ. ದಾಳಿ ವೇಳೆ ಪರಾರಿಯಾಗಲು ಯತ್ನಿಸಿದ ಉಗ್ರನೊಬ್ಬನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಾಜಿ ಗಂದ್ ಎಂಬಲ್ಲಿ ಸೋಮವಾರ ಮಧ್ಯಾಹ್ನವೇ ಉಗ್ರರು ದಾಳಿ ಮಾಡಿದ್ದು, ಒಬ್ಬ ಯೋಧ ಹುತಾತ್ಮರಾಗಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಪ್ರತಿದಾಳಿ ನಡೆಸಿದ್ದು, ಮಂಗಳವಾರ ಬೆಳಗಿನ ಜಾವ 2 ಗಂಟೆಗೆ ಎನ್ ಕೌಂಟರ್ ಮುಗಿದ್ದು, ಅಷ್ಟೊತ್ತಿಗಾಗಲೇ ಮೂವರನ್ನು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಮೃತರನ್ನು ಸ್ಥಳೀಯ ಉಗ್ರ ಯವರ್ ಬಸೀರ್, ವಿದೇಶಿ ಉಗ್ರರಾದ ಅಬು ಫಾರ್ಖನ್ ಹಾಗೂ ಅಬು ಮಾವಿಯಾ ಎಂದು ಗುರುತಿಸಲಾಗಿದ್ದು, ಇವರು ಜುಲೈ 10ರಂದು ಅಮರನಾಥ ಯಾತ್ರಿಕರ ಮೇಲೆ ದಾಳಿ ಮಾಡಿ 19 ಯಾತ್ರಿಕರನ್ನು ಕೊಂದ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search