• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಿಪಿಇಸಿ ಯೋಜನೆ ಅನ್ವಯ ಪಾಕಿಸ್ತಾನಕ್ಕೆ ಹಣ ನೀಡಲ್ಲ ಎಂದ ಚೀನಾ, ಪಾಕಿಸ್ತಾನಕ್ಕೆ ಹಿನ್ನಡೆ

TNN Correspondent Posted On December 6, 2017


  • Share On Facebook
  • Tweet It

ಬೀಜಿಂಗ್: ಡೈಮರ್ ಭಾಷಾ ಅಣೆಕಟ್ಟು ಯೋಜನೆಗೆ ಚೀನಾ ನೀಡಲು ಮುಂದಾಗಿದ್ದ 14 ಬಿಲಿಯನ್ ಡಾಲರ್ ಹಣ ತಿರಸ್ಕರಿಸಿ ಉದ್ಧಟತನ ಮೆರೆದಿದ್ದ ಪಾಕಿಸ್ತಾನಕ್ಕೆ ಚೀನಾ ಸರಿಯಾಗಿಯೇ ತಪರಾಕಿ ನೀಡಿದ್ದು, ಚೀನಾ-ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ ಯೋಜನೆಯಡಿಯಲ್ಲಿ ಅನುದಾನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಚೀನಾ-ಪಾಕಿಸ್ತಾನ ಗಡಿಯಲ್ಲಿ ಸಿಪಿಇಸಿ ಅನ್ವಯ ಸುಮಾರು 60 ಶತಕೋಟಿ ಡಾಲರ್ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಪಾಕಿಸ್ತಾನ ಚೀನಾ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅನುದಾನ ನೀಡುವುದಿಲ್ಲ ಎಂದು ತಿಳಿಸಿದೆ. ಇದು ಪಾಕಿಸ್ತಾನಕ್ಕೆ ಮುಖಭಂಗವಾದಂತಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲೂ ಹಿನ್ನಡೆಯಾದಂತಾಗಿದೆ.

ಪಾಕಿಸ್ತಾನಕ್ಕೆ ರಸ್ತೆ ನಿರ್ಮಾಣ ಕಾಮಗಾರಿಗೆ ಒಪ್ಪಂದದಂತೆ ಚೀನಾ ಒಂದು ಲಕ್ಷ ಕೋಟಿ ರೂಪಾಯಿ ನೀಡಬೇಕಿತ್ತು. ಕಳೆದ ತಿಂಗಳು ನೀಡುವುದಾಗಿಯೂ ತಿಳಿಸಿತ್ತು. ಆದರೆ ಕಾಮಗಾರಿಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅನುದಾನ ನೀಡದಿರಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಚೀನಾದ ಈ ನಿರ್ಧಾರದಿಂದ ಪಾಕಿಸ್ತಾನ “ಚಿಂತಾಕ್ರಾಂತ”ವಾಗಿದೆ ಎಂದು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದೆ.

ಇದರಿಂದ ಸುಮಾರು 210 ಕಿಮೀವರೆಗೆ (ಡೇರಾ ಇಸ್ಲಾಯಿಲ್ ಖಾನ್-ಝೋಬ್ ರಸ್ತೆ) ರಸ್ತೆ ನಿರ್ಮಿಸಲು ಯೋಜನೆ ರೂಪಿಸಿದ ಪಾಕಿಸ್ತಾನಕ್ಕೆ ಈಗ ಕಾಮಗಾರಿ ನಡೆಸುವುದೇ ಚಿಂತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ತಿಂಗಳು ಡೈಮರ್ ಭಾಷಾ ಅಣೆಕಟ್ಟು ನಿರ್ಮಾಣ ಮಾಡಲು ಚೀನಾ ಪಾಕಿಸ್ತಾನಕ್ಕೆ 14 ಬಿಲಿಯನ್ ಡಾಲರ್ ನೀಡಲು ಮನಸ್ಸು ಮಾಡಿತ್ತು. ಆದರೆ ಸೊಕ್ಕು ತೋರಿಸಿದ್ದ ಪಾಕಿಸ್ತಾನ, ಸ್ವಂತ ಹಣದಿಂದಲೇ ಡ್ಯಾಂ ನಿರ್ಮಿಸುವುದಾಗಿ ಹೇಳಿತ್ತು. ಆದರೆ ಈಗ ಚೀನಾ ಸಿಪಿಇಸಿ ಯೋಜನೆ ಹಣಕ್ಕೂ ತಾತ್ಕಾಲಿಕ ತಡೆಯೊಡ್ಡಿದ್ದು, ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿದೆ.

  • Share On Facebook
  • Tweet It


- Advertisement -


Trending Now
ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
Tulunadu News May 27, 2023
ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
Tulunadu News May 25, 2023
Leave A Reply

  • Recent Posts

    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
    • ಕಾಂಗ್ರೆಸ್ ಬಾಯಿಗೆ ಬಂದ ತುತ್ತನ್ನು ಮೈಮೇಲೆ ಚೆಲ್ಲಿಕೊಂಡಿದೆ!!
    • ಕಾಂಗ್ರೆಸ್ಸಿಗರೇ ಕ್ಯಾಲ್ಕುಲೇಟರ್ ನಲ್ಲಿ ಲೆಕ್ಕ ಹಾಕಿ ಘೋಷಣೆ ಕೂಗಿ!!
  • Popular Posts

    • 1
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 2
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search