• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯೋಗ ಶಿಕ್ಷಕಿಗೆ ಫತ್ವಾ ಹೊರಡಿಸಲಾಯ್ತು, ಕಲ್ಲು ತೂರಿದರು, ಈಗ ಜೀವ ಬೆದರಿಕೆ!

TNN Correspondent Posted On December 6, 2017


  • Share On Facebook
  • Tweet It

ರಾಂಚಿ: ಜಾರ್ಖಂಡ್ ನ ರಾಂಚಿಯಲ್ಲಿ ಯೋಗ ಕಲಿಸುತ್ತಿದ್ದ ಶಿಕ್ಷಕಿಗೆ ದಿನೇದಿನೇ ಅಭದ್ರತೆ ಕಾಡುತ್ತಿದ್ದು, ಫತ್ವಾ ಹೊರಡಿಸಿದ ಬಳಿಕ, ಅವರ ಮನೆ ಮೇಲ್ಲೆ ಕಲ್ಲು ತೂರಿ ಉದ್ಧಟತನ ಮೆರೆದ ಬಳಿಕ, ಈಗ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ.

ಹೌದು, ರಾಫಿಯಾ ನಾಜ್ ಎಂಬ ಮುಸ್ಲಿಂ ಯೋಗ ಶಿಕ್ಷಕಿಗೆ ಕಳೆದ ನವೆಂಬರ್ ನಲ್ಲಿ ಫತ್ವಾ ಹೊರಡಿಸಿದ್ದಲ್ಲದೆ, ಅವರ ಮನೆಗೆ ಕಲ್ಲು ಎಸೆದಿದ್ದರು. ಈಗ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.

ರಾಫಿಯಾ ರಾಂಚಿಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನನ್ನನ್ನು ಆರೆಸ್ಸೆಸ್ ಏಜೆಂಟ್ ಎಂಬ ರೀತಿ ನೋಡುತ್ತಿದ್ದಾರೆ. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಾಗಾಗಿ ಜಿಲ್ಲಾಡಳಿತ ನನಗೆ ಹಾಗೂ ನನ್ನ ಕುಟುಂಬಸ್ಥರಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಸಹ ರಾಫಿಯಾ ಮನವಿ ಮಾಡಿದ್ದಾರೆ.

ರಾಂಚಿಯ ದೊರಾಂಡ ಪ್ರದೇಶದಲ್ಲಿ ವಾಸವಿರುವ ರಾಫಿಯಾ ನಾಜ್ ಯೋಗ ಕಲಿಸಿ ಜೀವನ ಸಾಗಿಸುತ್ತಿದ್ದಾರೆ. ಕಳೆದ ತಿಂಗಳು ಇದನ್ನು ಖಂಡಿಸಿ ಮುಸ್ಲಿಂ ಮೂಲಭೂತವಾದಿ ಧರ್ಮಗುರು ಒಬ್ಬರು ಫತ್ವಾ ಹೊರಡಿಸಿದ್ದರು. ಅವರ ಮನೆ ಮೇಲೆ ಕಲ್ಲೆಸೆಯಲಾಗಿತ್ತು.

ಆದರೂ ನಾನು ಯೋಗ ಕಲಿಸುವುದನ್ನು ನಿಲ್ಲಿಸುವುದಿಲ್ಲ. ಇದರಲ್ಲಿ ಯಾವ ಧಾರ್ಮಿಕ ಅಂಶಗಳೂ ಇಲ್ಲ. ಯೋಗ ಕಲಿಯುವುದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ರಾಫಿಯಾ ತಿಳಿಸಿದ್ದರು.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search