• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೋಟ್ ಬ್ಯಾನ್ ಬಳಿಕ ಇ-ವಹಿವಾಟಿಗೆ ಉತ್ತೇಜನ, ಟೋಲ್ ಇ-ಪೇಮೆಂಟ್ ನಲ್ಲಿ ಏರಿಕೆ

TNN Correspondent Posted On December 6, 2017
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡ ನೋಟು ನಿಷೇಧ ನಿರ್ಧಾರದಿಂದ ದೇಶದಲ್ಲಿ ಇ-ವಹಿವಾಟು ಜಾಸ್ತಿಯಾಗಿದೆ ಎಂಬುದಕ್ಕೆ ಮತ್ತೊಂದು ನಿದರ್ಶನ ಲಭ್ಯವಾಗಿದೆ.

ಹೌದು, ನೋಟ್ ಬ್ಯಾನ್ ಬಳಿಕ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇ-ಟೋಲ್ ಪೇಮೆಂಟ್ (ಅಂತರ್ಜಾಲ ಸೇವೆ ಬಳಸಿ ಟೋಲ್ ಶುಲ್ಕ ಪಾವತಿ) ಮಾಡುವ ಪ್ರಮಾಣದಲ್ಲಿ 100 ಪಟ್ಟು ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಐಆರ್ ಬಿ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ನ ಅಧ್ಯಕ್ಷ ವಿರೇಂದ್ರ ಮೈಸ್ಕರ್ ಮಾಹಿತಿ ನೀಡಿದ್ದು, ಪ್ರಸಕ್ತ ವಿತ್ತೀಯ ವರ್ಷದ ಎರಡನೇ ತ್ರೈಮಾಸಿಕ ವರದಿಯಲ್ಲಿ 322 ಕೋಟಿ ರೂಪಾಯಿ ಟೋಲ್ ಸಂಗ್ರಹಿಸಿದ್ದು, ಅದರಲ್ಲಿ ಕೇವಲ 1.6 ಕೋಟಿ ರೂಪಾಯಿ ಮಾತ್ರ ಇ-ಪೇಮೆಂಟ್ ಮೂಲಕ ಪಾವತಿಸಲಾಗಿತ್ತು. ಆದರೆ ಈಗ ಮೂರನೇ ತ್ರೈಮಾಸಿಕ ವರದಿ ಬಿಡುಗಡೆಯಾಗಿದ್ದು ಇದು 100 ಪಟ್ಟು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಮೂರನೇ ತ್ರೈಮಾಸಿಕ ಹಣಕಾಸು ವರದಿ ಅನ್ವಯ 97 ಕೋಟಿ ರೂಪಾಯಿ ಹಣ ಬರೀ ಇ-ಪೇಮೆಂಟ್ ಮೂಲಕವೇ ಸಂಗ್ರಹವಾಗಿದ್ದು, ನೋಟ್ ಬ್ಯಾನ್ ಬಳಿಕ ದಿನೇದಿನೆ ಟೋಲ್ ಇ-ಪೇಮೆಂಟ್ ಪ್ರಮಾಣ ಜಾಸ್ತಿಯಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಹೀಗೆ ಟೋಲ್ ಶುಲ್ಕವನ್ನು ಇ-ಪೇಮೆಂಟ್ ಮೂಲಕ ಮಾಡುವುದರಿಂದ ಚಿಲ್ಲರೆ ಸಮಸ್ಯೆ, ಸಮಯದ ಉಳಿತಾಯ ಸಹ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಒಂದೇ ಒಂದು ನಿರ್ಧಾರದಿಂದ ಪ್ರಸ್ತುತ ಕಪ್ಪು ಹಣ ದಂಧೆಕೋರರಿಗೆ ಕಡಿವಾಣ, ತೆರಿಗೆದಾರರ ಹೆಚ್ಚಳ, ಕ್ಯಾಶ್ ಲೆಸ್ ವ್ಯವಹಾರಕ್ಕೆ ಉತ್ತೇಜನ ಸಿಗುತ್ತಿದೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search