• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸೇಕೆ ಟೀಕಿಸುತ್ತದೆ ಎಂಬುದಕ್ಕೆ ಮೋದಿ ಅವರು ನೀಡಿದ ಕಾರಣವೇನು ಗೊತ್ತೆ?

TNN Correspondent Posted On December 8, 2017
0


0
Shares
  • Share On Facebook
  • Tweet It

ಗಾಂಧಿನಗರ: ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್, ಮೋದಿ “ನೀಚ” ಎಂದು ಹೇಳಿಕೆ ನೀಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ  ಅವರು ಸ್ಪಷ್ಟನೆ ನೀಡಿದ್ದು, ಕಾಂಗ್ರೆಸ್ಸೇಕೆ ನನ್ನ ವಿರುದ್ಧ ಹೀನ ಪದ ಬಳಸುತ್ತದೆ ಎಂಬುದಕ್ಕೆ ಕಾರಣ ನೀಡಿದ್ದಾರೆ.

ಗುಜರಾತಿನ ಸಬರ್ ಕಾಂಥ ಎಂಬಲ್ಲಿ ಆಯೋಜಿಸಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, “ನಾನು ಹಿಂದುಳಿದ ಜಾತಿಯಲ್ಲಿ ಜನಿಸಿದವ ಎಂಬ ಒಂದೇ ಕಾರಣಕ್ಕೆ ಕಾಂಗ್ರೆಸ್ಸಿಗರು ನನ್ನ ವಿರುದ್ಧ ಕೀಳು ಪದ ಬಳಸುತ್ತಾರೆ” ಎಂದು ಹೇಳಿದ್ದಾರೆ.

ಅವರು ನೀಚ ಎಂಬ ಪದ ಬಳಸಲು ಕಾರಣವೇನು ಗೊತ್ತೆ? ನಾನು ಹಿಂದುಳಿದ ಜಾತಿಯಲ್ಲಿ ಜನಿಸಿದ್ದೇನೆ ಎಂಬ ಕಾರಣಕ್ಕಾಗಿ, ನಾನೊಂದು ಬಡ ಕುಟುಂಬದಲ್ಲಿ ಜನಸಿದ್ದೇನೆ ಎಂದು, ಬಡ ಕುಟುಂಬದಲ್ಲಿ ಹುಟ್ಟಿದರೂ ಅವರಿಗೆ ಸೆಡ್ಡು ಹೊಡೆದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ನನ್ನ ವಿರುದ್ಧ ಇಂಥ ಹೇಳಿಕೆ ನೀಡುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಎಂಥಾ ಭಾಷೆ ಬಳಸಬೇಕು ಎಂಬುದೇ ಗೊತ್ತಿಲ್ಲ. ನನ್ನ ವಿರುದ್ಧ ಕಾಂಗ್ರೆಸ್ಸಿಗರು ಎಂಥ ಕೀಳುಮಟ್ಟದ ಭಾಷೆ ಬಳಸಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಆದರೆ ಸಭ್ಯ ಭಾಷೆ ಬಳಸಬೇಕು ಎಂಬುದು ಕಾಂಗ್ರೆಸ್ಸಿಗರಿಗೆ ಗೊತ್ತಿದೆಯೇ? ನನಗೆ ಕೆಟ್ಟ ಪದ ಬಳಸಲು ನಾನಾವ ತಪ್ಪು ಮಾಡಿದ್ದೇನೆ? ದೇಶದ ಜನ ನನ್ನ ಮೇಲೆ ನಂಬಿಕೆ ಇಟ್ಟಿದ್ದೇ, ನಾನವರ ನಂಬಿಕೆ ಗಳಿಸಿದ್ದೇ ತಪ್ಪಾ ಎಂದು ಮೋದಿ ಪ್ರಶ್ನಿಸಿದ್ದಾರೆ.

ಎಡೆಬಿಡದೆ, ಹಗಲು ರಾತ್ರಿ ಎನ್ನದೆ ಕಾಂಗ್ರೆಸ್ ನನ್ನನ್ನು ತೆಗಳಿದೆ. ಆದರೂ ನಾನು ಸುಮ್ಮನೆ ಇರಲು ಕಾರಣ, ನನ್ನ ಪ್ರಾಮುಖ್ಯ ಕೆಲಸ ಹಾಗೂ ದೇಶದ ಅಭಿವೃದ್ಧಿಯಾಗಿದೆ ಎಂದಿದ್ದಾರೆ.

ನರೇಂದ್ರ ಮೋದಿ “ನೀಚ  ಆದ್ಮಿ” ಎಂದು ಕಾಂಗ್ರೆಸ್ ಮುಖಂಡ ಹೇಳಿಕೆ ನೀಡಿದ್ದು ದೊಡ್ಡ ವಿವಾದವಾಗಿದೆ. ಅಲ್ಲದೆ ಕಾಂಗ್ರೆಸ್ ಅಯ್ಯರ್ ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search