• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್ಸೇಕೆ ಟೀಕಿಸುತ್ತದೆ ಎಂಬುದಕ್ಕೆ ಮೋದಿ ಅವರು ನೀಡಿದ ಕಾರಣವೇನು ಗೊತ್ತೆ?

TNN Correspondent Posted On December 8, 2017


  • Share On Facebook
  • Tweet It

ಗಾಂಧಿನಗರ: ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್, ಮೋದಿ “ನೀಚ” ಎಂದು ಹೇಳಿಕೆ ನೀಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ  ಅವರು ಸ್ಪಷ್ಟನೆ ನೀಡಿದ್ದು, ಕಾಂಗ್ರೆಸ್ಸೇಕೆ ನನ್ನ ವಿರುದ್ಧ ಹೀನ ಪದ ಬಳಸುತ್ತದೆ ಎಂಬುದಕ್ಕೆ ಕಾರಣ ನೀಡಿದ್ದಾರೆ.

ಗುಜರಾತಿನ ಸಬರ್ ಕಾಂಥ ಎಂಬಲ್ಲಿ ಆಯೋಜಿಸಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, “ನಾನು ಹಿಂದುಳಿದ ಜಾತಿಯಲ್ಲಿ ಜನಿಸಿದವ ಎಂಬ ಒಂದೇ ಕಾರಣಕ್ಕೆ ಕಾಂಗ್ರೆಸ್ಸಿಗರು ನನ್ನ ವಿರುದ್ಧ ಕೀಳು ಪದ ಬಳಸುತ್ತಾರೆ” ಎಂದು ಹೇಳಿದ್ದಾರೆ.

ಅವರು ನೀಚ ಎಂಬ ಪದ ಬಳಸಲು ಕಾರಣವೇನು ಗೊತ್ತೆ? ನಾನು ಹಿಂದುಳಿದ ಜಾತಿಯಲ್ಲಿ ಜನಿಸಿದ್ದೇನೆ ಎಂಬ ಕಾರಣಕ್ಕಾಗಿ, ನಾನೊಂದು ಬಡ ಕುಟುಂಬದಲ್ಲಿ ಜನಸಿದ್ದೇನೆ ಎಂದು, ಬಡ ಕುಟುಂಬದಲ್ಲಿ ಹುಟ್ಟಿದರೂ ಅವರಿಗೆ ಸೆಡ್ಡು ಹೊಡೆದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ನನ್ನ ವಿರುದ್ಧ ಇಂಥ ಹೇಳಿಕೆ ನೀಡುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಎಂಥಾ ಭಾಷೆ ಬಳಸಬೇಕು ಎಂಬುದೇ ಗೊತ್ತಿಲ್ಲ. ನನ್ನ ವಿರುದ್ಧ ಕಾಂಗ್ರೆಸ್ಸಿಗರು ಎಂಥ ಕೀಳುಮಟ್ಟದ ಭಾಷೆ ಬಳಸಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಆದರೆ ಸಭ್ಯ ಭಾಷೆ ಬಳಸಬೇಕು ಎಂಬುದು ಕಾಂಗ್ರೆಸ್ಸಿಗರಿಗೆ ಗೊತ್ತಿದೆಯೇ? ನನಗೆ ಕೆಟ್ಟ ಪದ ಬಳಸಲು ನಾನಾವ ತಪ್ಪು ಮಾಡಿದ್ದೇನೆ? ದೇಶದ ಜನ ನನ್ನ ಮೇಲೆ ನಂಬಿಕೆ ಇಟ್ಟಿದ್ದೇ, ನಾನವರ ನಂಬಿಕೆ ಗಳಿಸಿದ್ದೇ ತಪ್ಪಾ ಎಂದು ಮೋದಿ ಪ್ರಶ್ನಿಸಿದ್ದಾರೆ.

ಎಡೆಬಿಡದೆ, ಹಗಲು ರಾತ್ರಿ ಎನ್ನದೆ ಕಾಂಗ್ರೆಸ್ ನನ್ನನ್ನು ತೆಗಳಿದೆ. ಆದರೂ ನಾನು ಸುಮ್ಮನೆ ಇರಲು ಕಾರಣ, ನನ್ನ ಪ್ರಾಮುಖ್ಯ ಕೆಲಸ ಹಾಗೂ ದೇಶದ ಅಭಿವೃದ್ಧಿಯಾಗಿದೆ ಎಂದಿದ್ದಾರೆ.

ನರೇಂದ್ರ ಮೋದಿ “ನೀಚ  ಆದ್ಮಿ” ಎಂದು ಕಾಂಗ್ರೆಸ್ ಮುಖಂಡ ಹೇಳಿಕೆ ನೀಡಿದ್ದು ದೊಡ್ಡ ವಿವಾದವಾಗಿದೆ. ಅಲ್ಲದೆ ಕಾಂಗ್ರೆಸ್ ಅಯ್ಯರ್ ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿದೆ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search