• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್ಸೇಕೆ ಟೀಕಿಸುತ್ತದೆ ಎಂಬುದಕ್ಕೆ ಮೋದಿ ಅವರು ನೀಡಿದ ಕಾರಣವೇನು ಗೊತ್ತೆ?

TNN Correspondent Posted On December 8, 2017


  • Share On Facebook
  • Tweet It

ಗಾಂಧಿನಗರ: ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್, ಮೋದಿ “ನೀಚ” ಎಂದು ಹೇಳಿಕೆ ನೀಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ  ಅವರು ಸ್ಪಷ್ಟನೆ ನೀಡಿದ್ದು, ಕಾಂಗ್ರೆಸ್ಸೇಕೆ ನನ್ನ ವಿರುದ್ಧ ಹೀನ ಪದ ಬಳಸುತ್ತದೆ ಎಂಬುದಕ್ಕೆ ಕಾರಣ ನೀಡಿದ್ದಾರೆ.

ಗುಜರಾತಿನ ಸಬರ್ ಕಾಂಥ ಎಂಬಲ್ಲಿ ಆಯೋಜಿಸಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, “ನಾನು ಹಿಂದುಳಿದ ಜಾತಿಯಲ್ಲಿ ಜನಿಸಿದವ ಎಂಬ ಒಂದೇ ಕಾರಣಕ್ಕೆ ಕಾಂಗ್ರೆಸ್ಸಿಗರು ನನ್ನ ವಿರುದ್ಧ ಕೀಳು ಪದ ಬಳಸುತ್ತಾರೆ” ಎಂದು ಹೇಳಿದ್ದಾರೆ.

ಅವರು ನೀಚ ಎಂಬ ಪದ ಬಳಸಲು ಕಾರಣವೇನು ಗೊತ್ತೆ? ನಾನು ಹಿಂದುಳಿದ ಜಾತಿಯಲ್ಲಿ ಜನಿಸಿದ್ದೇನೆ ಎಂಬ ಕಾರಣಕ್ಕಾಗಿ, ನಾನೊಂದು ಬಡ ಕುಟುಂಬದಲ್ಲಿ ಜನಸಿದ್ದೇನೆ ಎಂದು, ಬಡ ಕುಟುಂಬದಲ್ಲಿ ಹುಟ್ಟಿದರೂ ಅವರಿಗೆ ಸೆಡ್ಡು ಹೊಡೆದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ನನ್ನ ವಿರುದ್ಧ ಇಂಥ ಹೇಳಿಕೆ ನೀಡುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಎಂಥಾ ಭಾಷೆ ಬಳಸಬೇಕು ಎಂಬುದೇ ಗೊತ್ತಿಲ್ಲ. ನನ್ನ ವಿರುದ್ಧ ಕಾಂಗ್ರೆಸ್ಸಿಗರು ಎಂಥ ಕೀಳುಮಟ್ಟದ ಭಾಷೆ ಬಳಸಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಆದರೆ ಸಭ್ಯ ಭಾಷೆ ಬಳಸಬೇಕು ಎಂಬುದು ಕಾಂಗ್ರೆಸ್ಸಿಗರಿಗೆ ಗೊತ್ತಿದೆಯೇ? ನನಗೆ ಕೆಟ್ಟ ಪದ ಬಳಸಲು ನಾನಾವ ತಪ್ಪು ಮಾಡಿದ್ದೇನೆ? ದೇಶದ ಜನ ನನ್ನ ಮೇಲೆ ನಂಬಿಕೆ ಇಟ್ಟಿದ್ದೇ, ನಾನವರ ನಂಬಿಕೆ ಗಳಿಸಿದ್ದೇ ತಪ್ಪಾ ಎಂದು ಮೋದಿ ಪ್ರಶ್ನಿಸಿದ್ದಾರೆ.

ಎಡೆಬಿಡದೆ, ಹಗಲು ರಾತ್ರಿ ಎನ್ನದೆ ಕಾಂಗ್ರೆಸ್ ನನ್ನನ್ನು ತೆಗಳಿದೆ. ಆದರೂ ನಾನು ಸುಮ್ಮನೆ ಇರಲು ಕಾರಣ, ನನ್ನ ಪ್ರಾಮುಖ್ಯ ಕೆಲಸ ಹಾಗೂ ದೇಶದ ಅಭಿವೃದ್ಧಿಯಾಗಿದೆ ಎಂದಿದ್ದಾರೆ.

ನರೇಂದ್ರ ಮೋದಿ “ನೀಚ  ಆದ್ಮಿ” ಎಂದು ಕಾಂಗ್ರೆಸ್ ಮುಖಂಡ ಹೇಳಿಕೆ ನೀಡಿದ್ದು ದೊಡ್ಡ ವಿವಾದವಾಗಿದೆ. ಅಲ್ಲದೆ ಕಾಂಗ್ರೆಸ್ ಅಯ್ಯರ್ ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search