• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಣಿದ ಪಾಕಿಸ್ತಾನ, ಕುಲಭೂಷಣ್ ಜಾಧವ್ ಭೇಟಿಯಾಗಲು ಕುಟುಂಬಕ್ಕೆ ದಿನಾಂಕ ನಿಗದಿ

TNN Correspondent Posted On December 9, 2017
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಭಾರತ ಸರ್ಕಾರದ ನಿರಂತರ ಒತ್ತಡ, ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ಪ್ರಭಾವಕ್ಕೆ ಮಣಿದ ಪಾಕಿಸ್ತಾನ ಕೊನೆಗೂ ಕುಲಭೂಷಣ್ ಜಾಧವ್ ಭೇಟಿ ಮಾಡಲು ಕುಟುಂಬಕ್ಕೆ ಡಿ.25ರಂದು ಅವಕಾಶ ಮಾಡುವುದಾಗಿ ಸ್ಪಷ್ಟಪಡಿಸಿದೆ.

ಬೇಹುಗಾರಿಕೆ ಆರೋಪದಲ್ಲಿ ಬಂಧಿಸಿಟ್ಟಿರುವ ಭಾರತ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಡಿ.25ರಂದು ಭೇಟಿ ಮಾಡಿಸಲಾಗುವುದು ಎಂದು ಪಾಕಿಸ್ತಾನ ಭಾರತದ ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ನೀಡಿದೆ.

ಕುಲಭೂಷಣ್ ಜಾಧವ್ ಅವರ ಪತ್ನಿ ಹಾಗೂ ತಾಯಿಗೆ ಜಾಧವ್ ಅವರನ್ನು ಪಾಕಿಸ್ತಾನದಲ್ಲಿ ಭೇಟಿ ಮಾಡಿಸಲು ವೀಸಾ ನೀಡುವುದಾಗಿ ಪಾಕಿಸ್ತಾನ ಸರ್ಕಾರ ಒಪ್ಪಿಗೆ ನೀಡಿದೆ. ಈ ಕುರಿತು ಪಾಕಿಸ್ತಾನ ಸರ್ಕಾರ ಹಾಗೂ ಜಾಧವ್ ಅವರ ಹೆಂಡತಿ ಮತ್ತು ತಾಯಿ ಜತೆ ಮಾತನಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

ಅಲ್ಲದೆ ಪಾಕಿಸ್ತಾನದಲ್ಲಿ ಜಾಧವ್ ಕುಟುಂಬಸ್ಥರಿಗೆ ಸ್ವಾತಂತ್ರ್ಯ ಹಾಗೂ ಭದ್ರತೆ ಒದಗಿಸುವುದಾಗಿಯೂ ಪಾಕಿಸ್ತಾನ ತಿಳಿಸಿದೆ ಎಂದು ಸುಷ್ಮಾ ಸ್ವರಾಜ್ ಮಾಹಿತಿ ನೀಡಿದ್ದಾರೆ.

ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನ ಜಾಧವ್ ಅವರನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಆದರೆ ಭಾರತ ಸರ್ಕಾರ ಪ್ರಕರಣವನ್ನು ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ತಂದು, ಅಲ್ಲಿ ಸಮರ್ಥ ವಾದ ಮಂಡಿಸಿ, ಗಲ್ಲು ಶಿಕ್ಷೆಗೆ ತಡೆ ತಂದು ಪಾಕಿಸ್ತಾನಕ್ಕೆ ಪೆಟ್ಟು ನೀಡಿತ್ತು ಹಾಗೂ ಜಾಧವ್ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡುವಂತೆ ಪಾಕಿಸ್ತಾನದ ಮೇಲೆ ಒತ್ತಡ ಹೇರಿತ್ತು. ಇದಕ್ಕೆ ಮಣಿದಿದ್ದ  ಪಾಕಿಸ್ತಾನ ಭೇಟಿಗೆ ಅವಕಾಶ ನೀಡುವುದಾಗಿ ಒಪ್ಪಿತ್ತು, ಈಗ ದಿನಾಂಕ ನೀಡಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search