• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಹಫೀಜ್ ಸಯೀದ್ ಬೆಂಬಲಿಸಿದ ಚೀನಾಕ್ಕೀಗ ಉಗ್ರ ದಾಳಿಯ ಭೀತಿ

TNN Correspondent Posted On December 9, 2017
0


0
Shares
  • Share On Facebook
  • Tweet It

ಬೀಜಿಂಗ್: ಮುಂಬೈ ದಾಳಿಯ ರೂವಾರಿ ಉಗ್ರ ಹಫೀಜ್ ಸಯೀದ್ ನನ್ನು ಜಾಗತಿಕ ಉಗ್ರರ ಪಟ್ಟಿಯಲ್ಲಿ ಸೇರಿಸಲು ವಿರೋಧಿಸಿದ್ದ ಚೀನಾವೇ ಇದೀಗ ತನ್ನ ನಾಗರೀಕರಿಗೆ ಉಗ್ರ ದಾಳಿಯ ಭೀತಿ ಇದೆ ಎಂದು ಎಚ್ಚರಿಕೆ ನೀಡಿದೆ.

ಚೀನಾ ಪಾಕಿಸ್ತಾನದ ಸಹಕಾರದಲ್ಲಿ 57 ಶತಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಂಡಿರುವ ಒನ್ ಬೆಲ್ಟ್ ಒನ್ ರೋಡ್ ಯೋಜನೆಯ ಕಾಮಗಾರಿಯಲ್ಲಿ ಭಾಗವಹಿಸಿರುವ ಚೀನಾ ಕಾರ್ಮಿಕರ ಮೇಲೆ ಭಯೋತ್ಪಾದಕರು ಉಗ್ರ ದಾಳಿಯನ್ನು ನಡೆಸುವ ಮೂನ್ಸೂಚನೆ ಇದ್ದು, ಎಚ್ಚರದಿಂದ ಇರಬೇಕು ಎಂದು ಸೂಚನೆ ನೀಡಿದೆ.

ಪಾಕಿಸ್ತಾನದಲ್ಲಿ ಚೀನಾ ಸರ್ಕಾರದ ನೇತೃತ್ವದಲ್ಲಿ ನಾನಾ ಕಂಪೆನಿಗಳು ಕೈಗೊಂಡಿರುವ ಯೋಜನೆಗಳ ಕಾಮಗಾರಿಯಲ್ಲಿ ಚೀನಾದ ಸಾವಿರಾರು ಕಾರ್ಮಿಕರು  ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಮೇಲೆ ದಾಳಿ ಮಾಡುವ ಭೀತಿ ಚೀನಾ ವಿದೇಶಾಂಗ ಇಲಾಖೆ ವ್ಯಕ್ತಪಡಿಸಿದೆ.

ಚೀನಾ ಕಾರ್ಮಿಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಪಾಕಿಸ್ತಾನ ಸರ್ಕಾರಕ್ಕೆ ಚೀನಾ ಮನವಿ ಮಾಡಿದೆ. ಕಾರ್ಮಿಕರು ತಮ್ಮ ಭದ್ರತೆಯ ಬಗ್ಗೆ ಎಚ್ಚರಿಕೆ ವಹಿಸಬೇಕು. ಯಾವುದೇ ದಾಳಿಯ, ಆತಂಕದ ಮುನ್ಸೂಚನೆ ದೊರೆತರೆ ಕೂಡಲೇ ಪಾಕ್ ಪೊಲೀಸರಿಗೆ, ಸೈನ್ಯಕ್ಕೆ ಅಥವಾ ಚೀನಾ ರಾಯಭಾರ ಕಚೇರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದೆ.

ಕಾರ್ಮಿಕರು ಆಂತರಿಕ ಭದ್ರತೆ ಹೆಚ್ಚಿಸಿಕೊಳ್ಳಬೇಕು, ಪ್ರವಾಸಗಳನ್ನು ಕಡಿಮೆ ಮಾಡಬೇಕು, ಹೊರಗಡೆ ಜಾಸ್ತಿ ತಿರುಗಾಡಬಾರದು, ಜನರು ಅತಿಯಾಗಿ ಸೇರುವ ಕಡೆ ಹೋಗಬಾರದು ಎಂದು ಚೀನಾ ಸಲಹೆಗಳನ್ನು ನೀಡಿದೆ.

 

ಇಸ್ಲಾಂ ಮೂಲಭೂತವಾದಿಗಳ ಹಿಂಸಾಚಾರ, ತಾಲಿಬಾನ್, ಅಲ್ ಕೈದಾ ಸೇರಿ ನಾನಾ ಸಂಘಟನೆಗಳು ವಿಧ್ವಂಸಕ ಚಟುವಟಿಕೆಗಳನ್ನು ನಡೆಸುವ ಮತ್ತು ಬಲೂಚಿಸ್ತಾನದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ತನ್ನ ಕಾರ್ಮಿಕರ ರಕ್ಷಣೆಯ ಆತಂಕವನ್ನು ಚೀನಾ ವ್ಯಕ್ತಪಡಿಸಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search