• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಹಫೀಜ್ ಸಯೀದ್ ಬೆಂಬಲಿಸಿದ ಚೀನಾಕ್ಕೀಗ ಉಗ್ರ ದಾಳಿಯ ಭೀತಿ

TNN Correspondent Posted On December 9, 2017
0


0
Shares
  • Share On Facebook
  • Tweet It

ಬೀಜಿಂಗ್: ಮುಂಬೈ ದಾಳಿಯ ರೂವಾರಿ ಉಗ್ರ ಹಫೀಜ್ ಸಯೀದ್ ನನ್ನು ಜಾಗತಿಕ ಉಗ್ರರ ಪಟ್ಟಿಯಲ್ಲಿ ಸೇರಿಸಲು ವಿರೋಧಿಸಿದ್ದ ಚೀನಾವೇ ಇದೀಗ ತನ್ನ ನಾಗರೀಕರಿಗೆ ಉಗ್ರ ದಾಳಿಯ ಭೀತಿ ಇದೆ ಎಂದು ಎಚ್ಚರಿಕೆ ನೀಡಿದೆ.

ಚೀನಾ ಪಾಕಿಸ್ತಾನದ ಸಹಕಾರದಲ್ಲಿ 57 ಶತಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಂಡಿರುವ ಒನ್ ಬೆಲ್ಟ್ ಒನ್ ರೋಡ್ ಯೋಜನೆಯ ಕಾಮಗಾರಿಯಲ್ಲಿ ಭಾಗವಹಿಸಿರುವ ಚೀನಾ ಕಾರ್ಮಿಕರ ಮೇಲೆ ಭಯೋತ್ಪಾದಕರು ಉಗ್ರ ದಾಳಿಯನ್ನು ನಡೆಸುವ ಮೂನ್ಸೂಚನೆ ಇದ್ದು, ಎಚ್ಚರದಿಂದ ಇರಬೇಕು ಎಂದು ಸೂಚನೆ ನೀಡಿದೆ.

ಪಾಕಿಸ್ತಾನದಲ್ಲಿ ಚೀನಾ ಸರ್ಕಾರದ ನೇತೃತ್ವದಲ್ಲಿ ನಾನಾ ಕಂಪೆನಿಗಳು ಕೈಗೊಂಡಿರುವ ಯೋಜನೆಗಳ ಕಾಮಗಾರಿಯಲ್ಲಿ ಚೀನಾದ ಸಾವಿರಾರು ಕಾರ್ಮಿಕರು  ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಮೇಲೆ ದಾಳಿ ಮಾಡುವ ಭೀತಿ ಚೀನಾ ವಿದೇಶಾಂಗ ಇಲಾಖೆ ವ್ಯಕ್ತಪಡಿಸಿದೆ.

ಚೀನಾ ಕಾರ್ಮಿಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಪಾಕಿಸ್ತಾನ ಸರ್ಕಾರಕ್ಕೆ ಚೀನಾ ಮನವಿ ಮಾಡಿದೆ. ಕಾರ್ಮಿಕರು ತಮ್ಮ ಭದ್ರತೆಯ ಬಗ್ಗೆ ಎಚ್ಚರಿಕೆ ವಹಿಸಬೇಕು. ಯಾವುದೇ ದಾಳಿಯ, ಆತಂಕದ ಮುನ್ಸೂಚನೆ ದೊರೆತರೆ ಕೂಡಲೇ ಪಾಕ್ ಪೊಲೀಸರಿಗೆ, ಸೈನ್ಯಕ್ಕೆ ಅಥವಾ ಚೀನಾ ರಾಯಭಾರ ಕಚೇರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದೆ.

ಕಾರ್ಮಿಕರು ಆಂತರಿಕ ಭದ್ರತೆ ಹೆಚ್ಚಿಸಿಕೊಳ್ಳಬೇಕು, ಪ್ರವಾಸಗಳನ್ನು ಕಡಿಮೆ ಮಾಡಬೇಕು, ಹೊರಗಡೆ ಜಾಸ್ತಿ ತಿರುಗಾಡಬಾರದು, ಜನರು ಅತಿಯಾಗಿ ಸೇರುವ ಕಡೆ ಹೋಗಬಾರದು ಎಂದು ಚೀನಾ ಸಲಹೆಗಳನ್ನು ನೀಡಿದೆ.

 

ಇಸ್ಲಾಂ ಮೂಲಭೂತವಾದಿಗಳ ಹಿಂಸಾಚಾರ, ತಾಲಿಬಾನ್, ಅಲ್ ಕೈದಾ ಸೇರಿ ನಾನಾ ಸಂಘಟನೆಗಳು ವಿಧ್ವಂಸಕ ಚಟುವಟಿಕೆಗಳನ್ನು ನಡೆಸುವ ಮತ್ತು ಬಲೂಚಿಸ್ತಾನದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ತನ್ನ ಕಾರ್ಮಿಕರ ರಕ್ಷಣೆಯ ಆತಂಕವನ್ನು ಚೀನಾ ವ್ಯಕ್ತಪಡಿಸಿದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search