• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಹಫೀಜ್ ಸಯೀದ್ ಬೆಂಬಲಿಸಿದ ಚೀನಾಕ್ಕೀಗ ಉಗ್ರ ದಾಳಿಯ ಭೀತಿ

TNN Correspondent Posted On December 9, 2017
0


0
Shares
  • Share On Facebook
  • Tweet It

ಬೀಜಿಂಗ್: ಮುಂಬೈ ದಾಳಿಯ ರೂವಾರಿ ಉಗ್ರ ಹಫೀಜ್ ಸಯೀದ್ ನನ್ನು ಜಾಗತಿಕ ಉಗ್ರರ ಪಟ್ಟಿಯಲ್ಲಿ ಸೇರಿಸಲು ವಿರೋಧಿಸಿದ್ದ ಚೀನಾವೇ ಇದೀಗ ತನ್ನ ನಾಗರೀಕರಿಗೆ ಉಗ್ರ ದಾಳಿಯ ಭೀತಿ ಇದೆ ಎಂದು ಎಚ್ಚರಿಕೆ ನೀಡಿದೆ.

ಚೀನಾ ಪಾಕಿಸ್ತಾನದ ಸಹಕಾರದಲ್ಲಿ 57 ಶತಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಂಡಿರುವ ಒನ್ ಬೆಲ್ಟ್ ಒನ್ ರೋಡ್ ಯೋಜನೆಯ ಕಾಮಗಾರಿಯಲ್ಲಿ ಭಾಗವಹಿಸಿರುವ ಚೀನಾ ಕಾರ್ಮಿಕರ ಮೇಲೆ ಭಯೋತ್ಪಾದಕರು ಉಗ್ರ ದಾಳಿಯನ್ನು ನಡೆಸುವ ಮೂನ್ಸೂಚನೆ ಇದ್ದು, ಎಚ್ಚರದಿಂದ ಇರಬೇಕು ಎಂದು ಸೂಚನೆ ನೀಡಿದೆ.

ಪಾಕಿಸ್ತಾನದಲ್ಲಿ ಚೀನಾ ಸರ್ಕಾರದ ನೇತೃತ್ವದಲ್ಲಿ ನಾನಾ ಕಂಪೆನಿಗಳು ಕೈಗೊಂಡಿರುವ ಯೋಜನೆಗಳ ಕಾಮಗಾರಿಯಲ್ಲಿ ಚೀನಾದ ಸಾವಿರಾರು ಕಾರ್ಮಿಕರು  ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಮೇಲೆ ದಾಳಿ ಮಾಡುವ ಭೀತಿ ಚೀನಾ ವಿದೇಶಾಂಗ ಇಲಾಖೆ ವ್ಯಕ್ತಪಡಿಸಿದೆ.

ಚೀನಾ ಕಾರ್ಮಿಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಪಾಕಿಸ್ತಾನ ಸರ್ಕಾರಕ್ಕೆ ಚೀನಾ ಮನವಿ ಮಾಡಿದೆ. ಕಾರ್ಮಿಕರು ತಮ್ಮ ಭದ್ರತೆಯ ಬಗ್ಗೆ ಎಚ್ಚರಿಕೆ ವಹಿಸಬೇಕು. ಯಾವುದೇ ದಾಳಿಯ, ಆತಂಕದ ಮುನ್ಸೂಚನೆ ದೊರೆತರೆ ಕೂಡಲೇ ಪಾಕ್ ಪೊಲೀಸರಿಗೆ, ಸೈನ್ಯಕ್ಕೆ ಅಥವಾ ಚೀನಾ ರಾಯಭಾರ ಕಚೇರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದೆ.

ಕಾರ್ಮಿಕರು ಆಂತರಿಕ ಭದ್ರತೆ ಹೆಚ್ಚಿಸಿಕೊಳ್ಳಬೇಕು, ಪ್ರವಾಸಗಳನ್ನು ಕಡಿಮೆ ಮಾಡಬೇಕು, ಹೊರಗಡೆ ಜಾಸ್ತಿ ತಿರುಗಾಡಬಾರದು, ಜನರು ಅತಿಯಾಗಿ ಸೇರುವ ಕಡೆ ಹೋಗಬಾರದು ಎಂದು ಚೀನಾ ಸಲಹೆಗಳನ್ನು ನೀಡಿದೆ.

 

ಇಸ್ಲಾಂ ಮೂಲಭೂತವಾದಿಗಳ ಹಿಂಸಾಚಾರ, ತಾಲಿಬಾನ್, ಅಲ್ ಕೈದಾ ಸೇರಿ ನಾನಾ ಸಂಘಟನೆಗಳು ವಿಧ್ವಂಸಕ ಚಟುವಟಿಕೆಗಳನ್ನು ನಡೆಸುವ ಮತ್ತು ಬಲೂಚಿಸ್ತಾನದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ತನ್ನ ಕಾರ್ಮಿಕರ ರಕ್ಷಣೆಯ ಆತಂಕವನ್ನು ಚೀನಾ ವ್ಯಕ್ತಪಡಿಸಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search