• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಕ್ಕಳಿಗೆ ಸೈನ್ಯ ಸೇರಲು ಆ ವೀರ ಯೋಧ ನೀಡಿದ ಸ್ಫೂರ್ತಿ ಎಂಥಾದ್ದು..!

TNN Correspondent Posted On December 9, 2017
0


0
Shares
  • Share On Facebook
  • Tweet It

ಚಂಡಿಗಡ್: ನಿಮ್ಮಲ್ಲಿ ಎಷ್ಟು ಜನ ಸೈನ್ಯಕ್ಕೆ ಸೇರಲು ಇಚ್ಚಿಸುತ್ತೀರಿ ಎಂದು ಕೇಳಿದ ವೀರ ಚಕ್ರ ಗೌರವ ಪಡೆದ ನಿವೃತ ಲೆಫ್ಟನೆಂಟ್ ಕರ್ನಲ್ ಹರ್ಬಂತ್ ಸಿಂಗ್ ಕಹ್ಲೋನ್ ಮೋಹಾಲಿಯ ಸರ್ಕಾರಿ ಶಾಲೆ ಮಕ್ಕಳಿಗೆ ಪ್ರಶ್ನಿಸಿದಾಗ ಬಂದ ಉತ್ತರ ನಿರಾಶಾದಾಯಕ. ನಾನು ಸೈನ್ಯಕ್ಕೆ ಸೇರುತ್ತೇನೆ ಎಂದು ಕೈ ಎತ್ತಿದ್ದ ಮಕ್ಕಳು ಕೇವಲ ಬೆರಳೆಣಿಕೆಯಷ್ಟು.

ಕೆಲ ಕ್ಷಣ ಕಾದ ನಂತರವೂ ಕೈ ಎತ್ತಿದ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಲೇ ಹೋಯಿತು. ಆಗಲೇ ನಿರ್ಧರಿಸಿದರೂ ಕರ್ನಲ್ ಹರ್ಬತ್ ಸಿಂಗ್ ಕಹ್ಲೋನ್. ಈ ಮಕ್ಕಳಿಗೆ ಸೈನ್ಯದ ಮಹತ್ವ ತಿಳಿಸಬೇಕು, ಇವರಲ್ಲಿ ಸೈನ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಹೊಗಲಾಡಿಬೇಕು, ಸೈನ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ನಿರ್ಧರಿಸಿದರು.

ಏನಾಯ್ತು? ಏಕೆ ಎಲ್ಲರೂ ಸೈನ್ಯಕ್ಕೆ ಸೇರಲು ಹಿಂಜರಿಯುತ್ತಿದ್ದೀರಿ?, ಹುತಾತ್ಮರಾಗಲು ಭಯವಿದೆಯೇ? ಸಾವು ಇಂದಲ್ಲ ನಾಳೆ ಬಂದೆ ಬರುವುದು ನಿಶ್ಚಿತ ಎಂದು ಕರ್ನಲ್ ಕಹ್ಲೋನ್ ಎಷ್ಟೇ ಕೇಳಿದರೂ, ಮಕ್ಕಳ ನಿರಾಶಾಯಕ ನಗು ಕಂಡಿತೆ ವಿನಾ ಸೂಕ್ತ ಬರಲಿಲ್ಲ.

ನಿಮಗೆ ಹುತಾತ್ಮರಾಗಲು ಭಯವೇ? ಸಾವು ಇಂದಲ್ಲ ನಾಳೆ ಬಂದೆ ಬರುತ್ತದೆ. ಯೋಧರಾಗಿ ನೀವು ಹುತಾತ್ಮರಾದರೇ ಇಡೀ ವಿಶ್ವ ನಿಮ್ಮನ್ನು ಸ್ಮರಣೆ ಮಾಡುತ್ತದೆ. ನಿಶ್ಚಿತವಾಗಿರುವ ಸಾವಿಗೆ ಅದೇಕೆ ನೀವು ಭಯಪಡಬೇಕು. ನೀವು ಇಂದು ನೆಮ್ಮದಿಯಿಂದ ನಿದ್ರೆ ಮಾಡುತ್ತಿದ್ದೀರಿ ಎಂದರೆ ಅಲ್ಲಿ ಯೋಧರು ನಿದ್ದೇ ಮಾಡದೇ ಗಡಿ ಕಾಯುತ್ತಿದ್ದಾರೇ ಎಂಬುದನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕು ಎಂದು ಹೇಳಿದರು.

ಪಾಲಕರು ತಮ್ಮ ಮಕ್ಕಳಿಗೆ ಸೈನ್ಯದ ಸ್ಫೂರ್ತಿದಾಯಕ ಕಥೆಗಳನ್ನು ಹೇಳಬೇಕು. ಕೇವಲ ಎಂಜಿನಿಯರ್, ಮೆಡಿಕಲ್ ಎನ್ನದೇ ಸೈನ್ಯಕ್ಕೆ ಮಕ್ಕಳನ್ನು ಸೇರಿಸಬೇಕು. ಪಾಲಕರ ನಿರಾಸಕ್ತಿಯೇ ಮಕ್ಕಳಿಗೆ ಸೈನ್ಯದ ಬಗ್ಗೆ ಇರುವ ಆಸಕ್ತಿ ಕಡಿಮೆಯಾಗಲು ಕಾರಣ. ಸೈನ್ಯದಲ್ಲಿ ಸೇರಿದವರು ವಿಶ್ವಮಟ್ಟದ ಕ್ರೀಡಾಕೂಟದಲ್ಲೂ ಭಾಗವಹಿಸಬಹುದು. ರಾಷ್ಟ್ರೀಯ ಸೈನಿಕ ಅಕಾಡೆಮಿ ಸೂಕ್ತ ಸೌಲಭ್ಯ ಒದಗಿಸುತ್ತದೆ ಎಂದು ಹೇಳಿದರು. ದೇಶದಲ್ಲಿ ಸೈನ್ಯದ ಬಗ್ಗೆ ಸ್ಫೂರ್ತಿ ತುಂಬುವವರೇ ಕಡಿಮೆ. ಸೈನ್ಯದ ಮಹತ್ವ ಸಾರುವ ಜಾಗೃತಿ ಕಾರ್ಯಕ್ರಮಗಳ ನಡೆಯಬೇಕು. ಇಲ್ಲಿದ್ದಿದ್ದರೇ ಪರಿಸ್ಥಿತಿ ತೀರಾ ವಿಭಿನ್ನವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search