• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಕ್ಕಳಿಗೆ ಸೈನ್ಯ ಸೇರಲು ಆ ವೀರ ಯೋಧ ನೀಡಿದ ಸ್ಫೂರ್ತಿ ಎಂಥಾದ್ದು..!

TNN Correspondent Posted On December 9, 2017
0


0
Shares
  • Share On Facebook
  • Tweet It

ಚಂಡಿಗಡ್: ನಿಮ್ಮಲ್ಲಿ ಎಷ್ಟು ಜನ ಸೈನ್ಯಕ್ಕೆ ಸೇರಲು ಇಚ್ಚಿಸುತ್ತೀರಿ ಎಂದು ಕೇಳಿದ ವೀರ ಚಕ್ರ ಗೌರವ ಪಡೆದ ನಿವೃತ ಲೆಫ್ಟನೆಂಟ್ ಕರ್ನಲ್ ಹರ್ಬಂತ್ ಸಿಂಗ್ ಕಹ್ಲೋನ್ ಮೋಹಾಲಿಯ ಸರ್ಕಾರಿ ಶಾಲೆ ಮಕ್ಕಳಿಗೆ ಪ್ರಶ್ನಿಸಿದಾಗ ಬಂದ ಉತ್ತರ ನಿರಾಶಾದಾಯಕ. ನಾನು ಸೈನ್ಯಕ್ಕೆ ಸೇರುತ್ತೇನೆ ಎಂದು ಕೈ ಎತ್ತಿದ್ದ ಮಕ್ಕಳು ಕೇವಲ ಬೆರಳೆಣಿಕೆಯಷ್ಟು.

ಕೆಲ ಕ್ಷಣ ಕಾದ ನಂತರವೂ ಕೈ ಎತ್ತಿದ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಲೇ ಹೋಯಿತು. ಆಗಲೇ ನಿರ್ಧರಿಸಿದರೂ ಕರ್ನಲ್ ಹರ್ಬತ್ ಸಿಂಗ್ ಕಹ್ಲೋನ್. ಈ ಮಕ್ಕಳಿಗೆ ಸೈನ್ಯದ ಮಹತ್ವ ತಿಳಿಸಬೇಕು, ಇವರಲ್ಲಿ ಸೈನ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಹೊಗಲಾಡಿಬೇಕು, ಸೈನ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ನಿರ್ಧರಿಸಿದರು.

ಏನಾಯ್ತು? ಏಕೆ ಎಲ್ಲರೂ ಸೈನ್ಯಕ್ಕೆ ಸೇರಲು ಹಿಂಜರಿಯುತ್ತಿದ್ದೀರಿ?, ಹುತಾತ್ಮರಾಗಲು ಭಯವಿದೆಯೇ? ಸಾವು ಇಂದಲ್ಲ ನಾಳೆ ಬಂದೆ ಬರುವುದು ನಿಶ್ಚಿತ ಎಂದು ಕರ್ನಲ್ ಕಹ್ಲೋನ್ ಎಷ್ಟೇ ಕೇಳಿದರೂ, ಮಕ್ಕಳ ನಿರಾಶಾಯಕ ನಗು ಕಂಡಿತೆ ವಿನಾ ಸೂಕ್ತ ಬರಲಿಲ್ಲ.

ನಿಮಗೆ ಹುತಾತ್ಮರಾಗಲು ಭಯವೇ? ಸಾವು ಇಂದಲ್ಲ ನಾಳೆ ಬಂದೆ ಬರುತ್ತದೆ. ಯೋಧರಾಗಿ ನೀವು ಹುತಾತ್ಮರಾದರೇ ಇಡೀ ವಿಶ್ವ ನಿಮ್ಮನ್ನು ಸ್ಮರಣೆ ಮಾಡುತ್ತದೆ. ನಿಶ್ಚಿತವಾಗಿರುವ ಸಾವಿಗೆ ಅದೇಕೆ ನೀವು ಭಯಪಡಬೇಕು. ನೀವು ಇಂದು ನೆಮ್ಮದಿಯಿಂದ ನಿದ್ರೆ ಮಾಡುತ್ತಿದ್ದೀರಿ ಎಂದರೆ ಅಲ್ಲಿ ಯೋಧರು ನಿದ್ದೇ ಮಾಡದೇ ಗಡಿ ಕಾಯುತ್ತಿದ್ದಾರೇ ಎಂಬುದನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕು ಎಂದು ಹೇಳಿದರು.

ಪಾಲಕರು ತಮ್ಮ ಮಕ್ಕಳಿಗೆ ಸೈನ್ಯದ ಸ್ಫೂರ್ತಿದಾಯಕ ಕಥೆಗಳನ್ನು ಹೇಳಬೇಕು. ಕೇವಲ ಎಂಜಿನಿಯರ್, ಮೆಡಿಕಲ್ ಎನ್ನದೇ ಸೈನ್ಯಕ್ಕೆ ಮಕ್ಕಳನ್ನು ಸೇರಿಸಬೇಕು. ಪಾಲಕರ ನಿರಾಸಕ್ತಿಯೇ ಮಕ್ಕಳಿಗೆ ಸೈನ್ಯದ ಬಗ್ಗೆ ಇರುವ ಆಸಕ್ತಿ ಕಡಿಮೆಯಾಗಲು ಕಾರಣ. ಸೈನ್ಯದಲ್ಲಿ ಸೇರಿದವರು ವಿಶ್ವಮಟ್ಟದ ಕ್ರೀಡಾಕೂಟದಲ್ಲೂ ಭಾಗವಹಿಸಬಹುದು. ರಾಷ್ಟ್ರೀಯ ಸೈನಿಕ ಅಕಾಡೆಮಿ ಸೂಕ್ತ ಸೌಲಭ್ಯ ಒದಗಿಸುತ್ತದೆ ಎಂದು ಹೇಳಿದರು. ದೇಶದಲ್ಲಿ ಸೈನ್ಯದ ಬಗ್ಗೆ ಸ್ಫೂರ್ತಿ ತುಂಬುವವರೇ ಕಡಿಮೆ. ಸೈನ್ಯದ ಮಹತ್ವ ಸಾರುವ ಜಾಗೃತಿ ಕಾರ್ಯಕ್ರಮಗಳ ನಡೆಯಬೇಕು. ಇಲ್ಲಿದ್ದಿದ್ದರೇ ಪರಿಸ್ಥಿತಿ ತೀರಾ ವಿಭಿನ್ನವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search