• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಕ್ಕಳಿಗೆ ಸೈನ್ಯ ಸೇರಲು ಆ ವೀರ ಯೋಧ ನೀಡಿದ ಸ್ಫೂರ್ತಿ ಎಂಥಾದ್ದು..!

TNN Correspondent Posted On December 9, 2017
0


0
Shares
  • Share On Facebook
  • Tweet It

ಚಂಡಿಗಡ್: ನಿಮ್ಮಲ್ಲಿ ಎಷ್ಟು ಜನ ಸೈನ್ಯಕ್ಕೆ ಸೇರಲು ಇಚ್ಚಿಸುತ್ತೀರಿ ಎಂದು ಕೇಳಿದ ವೀರ ಚಕ್ರ ಗೌರವ ಪಡೆದ ನಿವೃತ ಲೆಫ್ಟನೆಂಟ್ ಕರ್ನಲ್ ಹರ್ಬಂತ್ ಸಿಂಗ್ ಕಹ್ಲೋನ್ ಮೋಹಾಲಿಯ ಸರ್ಕಾರಿ ಶಾಲೆ ಮಕ್ಕಳಿಗೆ ಪ್ರಶ್ನಿಸಿದಾಗ ಬಂದ ಉತ್ತರ ನಿರಾಶಾದಾಯಕ. ನಾನು ಸೈನ್ಯಕ್ಕೆ ಸೇರುತ್ತೇನೆ ಎಂದು ಕೈ ಎತ್ತಿದ್ದ ಮಕ್ಕಳು ಕೇವಲ ಬೆರಳೆಣಿಕೆಯಷ್ಟು.

ಕೆಲ ಕ್ಷಣ ಕಾದ ನಂತರವೂ ಕೈ ಎತ್ತಿದ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಲೇ ಹೋಯಿತು. ಆಗಲೇ ನಿರ್ಧರಿಸಿದರೂ ಕರ್ನಲ್ ಹರ್ಬತ್ ಸಿಂಗ್ ಕಹ್ಲೋನ್. ಈ ಮಕ್ಕಳಿಗೆ ಸೈನ್ಯದ ಮಹತ್ವ ತಿಳಿಸಬೇಕು, ಇವರಲ್ಲಿ ಸೈನ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಹೊಗಲಾಡಿಬೇಕು, ಸೈನ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ನಿರ್ಧರಿಸಿದರು.

ಏನಾಯ್ತು? ಏಕೆ ಎಲ್ಲರೂ ಸೈನ್ಯಕ್ಕೆ ಸೇರಲು ಹಿಂಜರಿಯುತ್ತಿದ್ದೀರಿ?, ಹುತಾತ್ಮರಾಗಲು ಭಯವಿದೆಯೇ? ಸಾವು ಇಂದಲ್ಲ ನಾಳೆ ಬಂದೆ ಬರುವುದು ನಿಶ್ಚಿತ ಎಂದು ಕರ್ನಲ್ ಕಹ್ಲೋನ್ ಎಷ್ಟೇ ಕೇಳಿದರೂ, ಮಕ್ಕಳ ನಿರಾಶಾಯಕ ನಗು ಕಂಡಿತೆ ವಿನಾ ಸೂಕ್ತ ಬರಲಿಲ್ಲ.

ನಿಮಗೆ ಹುತಾತ್ಮರಾಗಲು ಭಯವೇ? ಸಾವು ಇಂದಲ್ಲ ನಾಳೆ ಬಂದೆ ಬರುತ್ತದೆ. ಯೋಧರಾಗಿ ನೀವು ಹುತಾತ್ಮರಾದರೇ ಇಡೀ ವಿಶ್ವ ನಿಮ್ಮನ್ನು ಸ್ಮರಣೆ ಮಾಡುತ್ತದೆ. ನಿಶ್ಚಿತವಾಗಿರುವ ಸಾವಿಗೆ ಅದೇಕೆ ನೀವು ಭಯಪಡಬೇಕು. ನೀವು ಇಂದು ನೆಮ್ಮದಿಯಿಂದ ನಿದ್ರೆ ಮಾಡುತ್ತಿದ್ದೀರಿ ಎಂದರೆ ಅಲ್ಲಿ ಯೋಧರು ನಿದ್ದೇ ಮಾಡದೇ ಗಡಿ ಕಾಯುತ್ತಿದ್ದಾರೇ ಎಂಬುದನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕು ಎಂದು ಹೇಳಿದರು.

ಪಾಲಕರು ತಮ್ಮ ಮಕ್ಕಳಿಗೆ ಸೈನ್ಯದ ಸ್ಫೂರ್ತಿದಾಯಕ ಕಥೆಗಳನ್ನು ಹೇಳಬೇಕು. ಕೇವಲ ಎಂಜಿನಿಯರ್, ಮೆಡಿಕಲ್ ಎನ್ನದೇ ಸೈನ್ಯಕ್ಕೆ ಮಕ್ಕಳನ್ನು ಸೇರಿಸಬೇಕು. ಪಾಲಕರ ನಿರಾಸಕ್ತಿಯೇ ಮಕ್ಕಳಿಗೆ ಸೈನ್ಯದ ಬಗ್ಗೆ ಇರುವ ಆಸಕ್ತಿ ಕಡಿಮೆಯಾಗಲು ಕಾರಣ. ಸೈನ್ಯದಲ್ಲಿ ಸೇರಿದವರು ವಿಶ್ವಮಟ್ಟದ ಕ್ರೀಡಾಕೂಟದಲ್ಲೂ ಭಾಗವಹಿಸಬಹುದು. ರಾಷ್ಟ್ರೀಯ ಸೈನಿಕ ಅಕಾಡೆಮಿ ಸೂಕ್ತ ಸೌಲಭ್ಯ ಒದಗಿಸುತ್ತದೆ ಎಂದು ಹೇಳಿದರು. ದೇಶದಲ್ಲಿ ಸೈನ್ಯದ ಬಗ್ಗೆ ಸ್ಫೂರ್ತಿ ತುಂಬುವವರೇ ಕಡಿಮೆ. ಸೈನ್ಯದ ಮಹತ್ವ ಸಾರುವ ಜಾಗೃತಿ ಕಾರ್ಯಕ್ರಮಗಳ ನಡೆಯಬೇಕು. ಇಲ್ಲಿದ್ದಿದ್ದರೇ ಪರಿಸ್ಥಿತಿ ತೀರಾ ವಿಭಿನ್ನವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search