• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮತ್ತದೇ ಹಳೆ ರಾಗ, ಗುಜರಾತ್ ಚುನಾವಣೆಗೆ ಮುಂಚೆಯೇ ಕೆಟ್ಟಿತೇ ಕಾಂಗ್ರೆಸ್ ಮತ ಯಂತ್ರ?

ರವಿ ಶೆಣೈ ಕಾರ್ಕಳ Posted On December 10, 2017
0


0
Shares
  • Share On Facebook
  • Tweet It

ಗುಜರಾತ್ ಚುನಾವಣೆಗೆ ಶನಿವಾರ ಮೊದಲ ಹಂತದ ಚುನಾವಣೆ ಮುಗಿದಿದೆ. ಚುನಾವಣೆ ಆಯೋಗ ತನ್ನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಶೇ.68 ರಷ್ಟು ಮತದಾನವಾಗಿದೆ. ಆದರೆ ಕಾಂಗ್ರೆಸ್  ಮುಖಂಡರು ತಮ್ಮ ಹಳೆ ವರಸೆ ಮುಂದುವರಿಸಿದ್ದಾರೆ. ಮತಯಂತ್ರದಲ್ಲಿ ದೋಷವಿದೆ, ಅದರಲ್ಲಿ ಬ್ಲೂಟೂತ್ ಅಳವಡಿಸಿ ಯಾವುದೇ ಪಕ್ಷಕ್ಕೆ ಮತ ನೀಡಿದರೂ ಕೇವಲ ಬಿಜೆಪಿ ಮತ ಹೋಗುವಂತೆ ಷಡ್ಯಂತ್ರ ಮಾಡಲಾಗಿದೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ.

ಹೀಗೆ ತನ್ನ ‘ಕೈ’ಯಲ್ಲಿ ಗುಜರಾತ್ ಚುನಾವಣೆಯಲ್ಲಿ ಗೆಲುವು ಸಾಧಿಸಲು ಆಗುವುದಿಲ್ಲ ಎಂಬುದನ್ನು ಕಾಂಗ್ರೆಸ್ ಚುನಾವಣೆಗೆ ಮುಂಚೆಯೇ ಭವಿಷ್ಯ ನುಡಿದಿದೆ. ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಮೇಲೆ ಕಾಂಗ್ರೆಸ್ ಮಾಡಿರುವ ಆರೋಪ ಕೈ ಪಾಳಯಕ್ಕೆ ಸೋಲಿನ ಸುಳಿವು ಏನಾದ್ರೂ ದೊರಕಿದೆಯಾ ಎಂಬ ಅನುಮಾನ ಮೂಡಿದೆ.

ಯುದ್ಧಕ್ಕೆ ಮುಂಚೆಯೇ ಕಾಂಗ್ರೆಸ್ ಶಸ್ತ್ರತ್ಯಾಗ ಮಾಡಿದಂತಾಗಿದೆ. ಸದಾ ಬಿಜೆಪಿಯ ಬಾಯಿಗೆ ಸಿಲುಕಿ ಒದ್ದಾಡುವ ಕಾಂಗ್ರೆಸ್ ಹಲವು ಎಡವಟ್ಟುಗಳನ್ನು ಮಾಡಿಕೊಂಡಿದೆ. ಕಾಂಗ್ರೆಸ್ ಮುಖಂಡ ಮಣಿಶಂಕರ ಅಯ್ಯರ ಮೋದಿ ಅವರನ್ನು ನೀಚ ವ್ಯಕ್ತಿ ಎಂದು ಹೀಯಾಳಿಸಿದರೇ, ಇನ್ನೊಬ್ಬ ಮುಖಂಡ ಸಲ್ಮಾನ್ ನಿಜಾಮಿ ಮೋದಿ ತನ್ನ ತಂದೆ ಯಾರು ಎಂದು ಕೇಳಿದ್ದಾನೆ. ಇದು ಕಾಂಗ್ರೆಸ್ ಗೆ ತಿರುಗುಬಾಣವಾಗಿದಲ್ಲದೇ, ಬಿಜೆಪಿ ಕೈಪಡೆಯ ಮೇಲೆ ದಾಳಿ ಮಾಡಲು ಪ್ರಬಲ ಅಸ್ತ್ರ ಒದಗಿದೆ.

ಒಂದೇ ಎರಡೇ ಕಾಂಗ್ರೆಸ್ ಮಾಡಿಕೊಂಡಿರುವ ಎಡವಟ್ಟುಗಳು ಅವೆಲ್ಲವನ್ನು ಬಿಟ್ಟು ಕೂಸು ಹುಟ್ಟುವ ಮುನ್ನವೇ ಗಂಡೋ ಹೆಣ್ಣೋ ಎಂದು ನಿರ್ಧರಿಸಿ, ಜಾರಿಕೊಳ್ಳಲು ಕಾಂಗ್ರೆಸ್ ಮತಯಂತ್ರಗಳ ಮೇಲೆ ದೂರು ನೀಡುತ್ತಿದೆ. ಆದರೆ ಅದಕ್ಕೆ ತಕ್ಕ ಉತ್ತರವನ್ನು ನೀಡಿರುವ ಚುನಾವಣೆ ಆಯೋಗ ‘ಮತಯಂತ್ರದಲ್ಲಿ ಗೋಲ್ ಮಾಲ್ ಮಾಡಲಾಗಿದೆ ಎಂಬುದು ಆಧಾರರಹಿತ ಆರೋಪ ಎಂದು ಘೋಷಿಸಿದೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಗುಜರಾತ್ ಚುನಾವಣೆ ಎದುರಿಸುತ್ತಿರುವ ಕಾಂಗ್ರೆಸ್ ಗೆ ಪಕ್ಷ ಮತ್ತು ರಾಹುಲ್ ಅಸ್ತಿತ್ವ ಎರಡು ಮುಖ್ಯ. ರಾಹುಲ್ ಗಾಂಧಿ ಮರ್ಯಾದೆ ಉಳಿಸಬೇಕು ಮತ್ತು ಪಕ್ಷದ ಅಸ್ತಿತ್ವ ಉಳಿಸಬೇಕು. ಇದೆ ಮತಯಂತ್ರಗಳನಿಟ್ಟುಕೊಂಡೇ ಪಂಜಾಬ್ ನಲ್ಲಿ ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ಗೆ ಇದೀಗ ಅದೆ ಮತಯಂತ್ರ ಮತ್ತು ಆಯೋಗದ ಮೇಲೆ ವಿಶ್ವಾಸ ಉಳಿದಿಲ್ಲವಲ್ಲ. ಈ ಇಬ್ಬಂದಿತನ ಜನರಿಗೆ ಅರ್ಥವಾಗದೇ ಇರದೇ?. ಏನಾದರೂ ಸರಿಯೇ ಎಂದು ಇದೀಗ ಚುನಾವಣೆ ಆಯೋಗದ ಮೇಲೆ ಗೂಭೆ ಕೂರಿಸಲು ಹೋದರೆ ಜನರೇನು ಮೂರ್ಖರೆ?. ಇವರ ಹುಚ್ಚು, ಮೊಂಡು ವಾದಗಳನ್ನು ಒಪ್ಪಲು.

 

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
ರವಿ ಶೆಣೈ ಕಾರ್ಕಳ January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
ರವಿ ಶೆಣೈ ಕಾರ್ಕಳ January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search