• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥ ಕೋಮುವಾದಿ ಎನ್ನುವವರು ಈ ಸುದ್ದಿ ಓದಿ!

TNN Correspondent Posted On December 10, 2017
0


0
Shares
  • Share On Facebook
  • Tweet It

ಲಖನೌ: ಯೋಗಿ ಆದಿತ್ಯನಾಥ, ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಎನ್ನುತ್ತಲೇ ಕೋಮುವಾದಿಗಳು, ಮುಸ್ಲಿಂ ವಿರೋಧಿಗಳೇ ಎಂದು ಬೊಬ್ಬೆ ಹಾಕುತ್ತಾರೆ ಹಾಗೂ ಹಾಗೆಯೇ ಬಿಂಬಿಸುತ್ತಾರೆ. ಆದರೆ ಮೋದಿ ಹಾಗೂ ಆದಿತ್ಯನಾಥರು ಮುಸ್ಲಿಮರ ಏಳಿಗೆಗೆ ಮಾಡುವ ಕಾರ್ಯಗಳನ್ನು ಮಾತ್ರ ಯಾರೂ ಶ್ಲಾಘಿಸುವುದಿಲ್ಲ, ಮೆಚ್ಚುಗೆಯ ಮಾತನಾಡುವುದಿಲ್ಲ.

ಆದರೂ ಯೋಗಿ ಆದಿತ್ಯನಾಥರು ಉತ್ತರ ಪ್ರದೇಶದಲ್ಲಿ ಮದರಸಾಗಳನ್ನು ಆಧುನೀಕರಣಗೊಳಿಸಲು ಮುಂದಾಗಿದ್ದು, ಇದರಿಂದ ಲಕ್ಷಾಂತರ ಮುಸ್ಲಿಮರು ಮದರಸಾಗಳಲ್ಲಿ ಗುಣಮಟ್ಟದ ಹಾಗೂ ಆಧುನಿಕ ಶಿಕ್ಷಣ ಪಡೆಯಲಿದ್ದಾರೆ.

ಹೌದು, ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ರಾಜ್ಯದ 8 ಸಾವಿರಕ್ಕೂ ಅಧಿಕ ಮದರಸಾಗಳನ್ನು ಆಧುನೀಕರಣಗೊಳಿಸಲು ತೀರ್ಮಾನಿಸಿದೆ. ಈ ಕುರಿತು ಉತ್ತರ ಪ್ರದೇಶದ ಮದರಸಾ ಮಂಡಳಿಗೆ ಸೂಚನೆ ನೀಡಲಾಗಿದೆ.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಆನ್ ಲೈನ್ ಪೋರ್ಟಲ್ ನಲ್ಲಿ 16,705 ಮದರಸಾಗಳು ನೋಂದಣಿಯಾಗಿದ್ದು, ಇವುಗಳಲ್ಲಿ 8,184 ಮದರಸಾಗಳ ಆಧುನೀಕರಣಕ್ಕಾಗಿ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಲು ನಿರ್ಧರಿಸಿದೆ.

ಕೇಂದ್ರದ ಅನುದಾನ ಲಭ್ಯವಾದರೆ ಮದರಸಾಗಳಲ್ಲಿ ಆಧುನಿಕ ಶಿಕ್ಷಣ, ತಾಂತ್ರಿಕ ಕೌಶಲ ಸೇರಿ ಹಲವು ಚಟುವಟಿಕೆಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಉತ್ತರಪ್ರದೇಶದಲ್ಲಿ ನೋಂದಣಿಯಾದ 16 ಸಾವಿರ ಮದರಸಾಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಒಟ್ಟಿನಲ್ಲಿ ಮದರಸಾಗಳ ಆಧುನೀಕರಣದಿಂದ ಮುಸ್ಲಿಂ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲಿದ್ದು, ಮುಸ್ಲಿಮರ ಸಬಲೀಕರಣಕ್ಕೆ ಸಹಕಾರಿಯಾಗಲಿದೆ ಎಂದೇ ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search