• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥ ಕೋಮುವಾದಿ ಎನ್ನುವವರು ಈ ಸುದ್ದಿ ಓದಿ!

TNN Correspondent Posted On December 10, 2017
0


0
Shares
  • Share On Facebook
  • Tweet It

ಲಖನೌ: ಯೋಗಿ ಆದಿತ್ಯನಾಥ, ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಎನ್ನುತ್ತಲೇ ಕೋಮುವಾದಿಗಳು, ಮುಸ್ಲಿಂ ವಿರೋಧಿಗಳೇ ಎಂದು ಬೊಬ್ಬೆ ಹಾಕುತ್ತಾರೆ ಹಾಗೂ ಹಾಗೆಯೇ ಬಿಂಬಿಸುತ್ತಾರೆ. ಆದರೆ ಮೋದಿ ಹಾಗೂ ಆದಿತ್ಯನಾಥರು ಮುಸ್ಲಿಮರ ಏಳಿಗೆಗೆ ಮಾಡುವ ಕಾರ್ಯಗಳನ್ನು ಮಾತ್ರ ಯಾರೂ ಶ್ಲಾಘಿಸುವುದಿಲ್ಲ, ಮೆಚ್ಚುಗೆಯ ಮಾತನಾಡುವುದಿಲ್ಲ.

ಆದರೂ ಯೋಗಿ ಆದಿತ್ಯನಾಥರು ಉತ್ತರ ಪ್ರದೇಶದಲ್ಲಿ ಮದರಸಾಗಳನ್ನು ಆಧುನೀಕರಣಗೊಳಿಸಲು ಮುಂದಾಗಿದ್ದು, ಇದರಿಂದ ಲಕ್ಷಾಂತರ ಮುಸ್ಲಿಮರು ಮದರಸಾಗಳಲ್ಲಿ ಗುಣಮಟ್ಟದ ಹಾಗೂ ಆಧುನಿಕ ಶಿಕ್ಷಣ ಪಡೆಯಲಿದ್ದಾರೆ.

ಹೌದು, ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ರಾಜ್ಯದ 8 ಸಾವಿರಕ್ಕೂ ಅಧಿಕ ಮದರಸಾಗಳನ್ನು ಆಧುನೀಕರಣಗೊಳಿಸಲು ತೀರ್ಮಾನಿಸಿದೆ. ಈ ಕುರಿತು ಉತ್ತರ ಪ್ರದೇಶದ ಮದರಸಾ ಮಂಡಳಿಗೆ ಸೂಚನೆ ನೀಡಲಾಗಿದೆ.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಆನ್ ಲೈನ್ ಪೋರ್ಟಲ್ ನಲ್ಲಿ 16,705 ಮದರಸಾಗಳು ನೋಂದಣಿಯಾಗಿದ್ದು, ಇವುಗಳಲ್ಲಿ 8,184 ಮದರಸಾಗಳ ಆಧುನೀಕರಣಕ್ಕಾಗಿ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಲು ನಿರ್ಧರಿಸಿದೆ.

ಕೇಂದ್ರದ ಅನುದಾನ ಲಭ್ಯವಾದರೆ ಮದರಸಾಗಳಲ್ಲಿ ಆಧುನಿಕ ಶಿಕ್ಷಣ, ತಾಂತ್ರಿಕ ಕೌಶಲ ಸೇರಿ ಹಲವು ಚಟುವಟಿಕೆಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಉತ್ತರಪ್ರದೇಶದಲ್ಲಿ ನೋಂದಣಿಯಾದ 16 ಸಾವಿರ ಮದರಸಾಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಒಟ್ಟಿನಲ್ಲಿ ಮದರಸಾಗಳ ಆಧುನೀಕರಣದಿಂದ ಮುಸ್ಲಿಂ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲಿದ್ದು, ಮುಸ್ಲಿಮರ ಸಬಲೀಕರಣಕ್ಕೆ ಸಹಕಾರಿಯಾಗಲಿದೆ ಎಂದೇ ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search