• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆ ಪೀರ್ ಬಾಬಾ 500 ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡಿದನೇ?

TNN Correspondent Posted On December 11, 2017
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮಿರದಲ್ಲಿ ಮದರಸಾವೊಂದರ ಮೇಲೆ ಪೊಲೀಸರು ದಾಳಿ ಮಾಡಿದ್ದು, ಮದರಸಾದಲ್ಲಿ ಇಸ್ಲಾಂ ಕುರಿತು ಬೋಧನೆ ಮಾಡುತ್ತಿದ್ದ ಪೀರ್ ಸಾಬ್ ಸುಮಾರು 500 ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡಿದ್ದಾನೆ ಎಂದು ಶಂಕಿಸಲಾಗಿದೆ.

ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆ ಖಾನ್ ಸಾಹೀಬ್ ಎಂಬಲ್ಲಿ ಕಳೆದ 18 ವರ್ಷಗಳಿಂದ ಮದರಸಾ ನಡೆಸುತ್ತಿದ್ದ ಪೀರ್ ಬಾಬಾ ಎಂದೇ ಖ್ಯಾತಿಯಾಗಿದ್ದ ಗುಲ್ಜಾರ್ ಅಹ್ಮದ್ ಎಂಬಾತ ಮಹಿಳೆಯರಿಗೆ ಧರ್ಮದ ಬೋಧನೆ ಹೆಸರಲ್ಲಿ ಸುಮಾರು 500 ಮಹಿಳೆಯರನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರ ಡಿಎಸ್ಪಿ ಬಷೀರ್ ಅಹಮ್ಮದ್ ನೇತೃತ್ವದ ಪೊಲೀಸ್ ತಂಡ ಮದರಸಾದ ಕಚೇರಿ, ಹಾಸ್ಟೆಲ್, ಶಾಲೆ ಮೇಲೆ ದಾಳಿ ನಡೆಸಿದ್ದು, ಲೈಂಗಿಕ ಉದ್ರೇಕ ನೀಡುವ ಮಾತ್ರೆ ಸೇರಿ ಹಲವು ವಸ್ತು ಸಿಕ್ಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಲದೆ ಹಲವು ಸಿಡಿ ಸಹ ದೊರೆತಿದ್ದು, ಮುಸ್ಲಿಂ ಮಹಿಳೆ, ಯುವತಿಯರನ್ನು ಧರ್ಮದ ಹೆಸರಲ್ಲಿ ಅತ್ಯಾಚಾರ ಎಸಗುತ್ತಿದ್ದ ಎಂದು ತಿಳಿದುಬಂದಿದೆ.

ಶಾಲೆಯ ಕೋಣೆಗಳಲ್ಲೇ ಮಲಗುವ ಕೋಣೆ ಪತ್ತೆಯಾಗಿದ್ದು, ಹರಿಯಾಣದ ಡೇರಾ ಸಚ್ಚಾದಲ್ಲಿ ಸಿಕ್ಕ ಹಲವು ವಸ್ತು, ಗುಹೆಗಳಿಗೆ ಹೋಲಿಕೆ ಮಾಡಲಾಗಿದೆ.

ಈ ಸ್ವಯಂಘೋಷಿತ ದೇವಮಾನವನ ಸಹಚರರಾದ ಅಬ್ದುಲ್ ಗನಿ, ಬಷೀರ್ ಅಹ್ಮದ್ ಮಿರ್ ಹಾಗೂ ಮಹಿಳಾ ಉದ್ಯೋಗಿಗಳಾದ ಶಕೀಲಾ ಬಾನೋ ಎಂಬುವವರು ಮಹಿಳೆಯರು ಹಾಗೂ ಯುವತಿಯರನ್ನು ಮದರಸಾಗಳಿಗೆ ಕರೆತರುವಲ್ಲಿ ಸಹಕರಿಸಿದ್ದರು ಎಂದು ತಿಳಿದುಬಂದಿದೆ. ಆದಾಗ್ಯೂ, ದೇವಮಾನವನನ್ನು ವಶಪಡಿಸಿಕೊಂಡಿದ್ದು, ನ್ಯಾಯಾಲಯಕ್ಕೆ ಪೀರ್ ಬಾಬಾ ವಿರುದ್ಧ ದಾಖಲೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search