• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆ ಪೀರ್ ಬಾಬಾ 500 ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡಿದನೇ?

TNN Correspondent Posted On December 11, 2017
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮಿರದಲ್ಲಿ ಮದರಸಾವೊಂದರ ಮೇಲೆ ಪೊಲೀಸರು ದಾಳಿ ಮಾಡಿದ್ದು, ಮದರಸಾದಲ್ಲಿ ಇಸ್ಲಾಂ ಕುರಿತು ಬೋಧನೆ ಮಾಡುತ್ತಿದ್ದ ಪೀರ್ ಸಾಬ್ ಸುಮಾರು 500 ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡಿದ್ದಾನೆ ಎಂದು ಶಂಕಿಸಲಾಗಿದೆ.

ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆ ಖಾನ್ ಸಾಹೀಬ್ ಎಂಬಲ್ಲಿ ಕಳೆದ 18 ವರ್ಷಗಳಿಂದ ಮದರಸಾ ನಡೆಸುತ್ತಿದ್ದ ಪೀರ್ ಬಾಬಾ ಎಂದೇ ಖ್ಯಾತಿಯಾಗಿದ್ದ ಗುಲ್ಜಾರ್ ಅಹ್ಮದ್ ಎಂಬಾತ ಮಹಿಳೆಯರಿಗೆ ಧರ್ಮದ ಬೋಧನೆ ಹೆಸರಲ್ಲಿ ಸುಮಾರು 500 ಮಹಿಳೆಯರನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರ ಡಿಎಸ್ಪಿ ಬಷೀರ್ ಅಹಮ್ಮದ್ ನೇತೃತ್ವದ ಪೊಲೀಸ್ ತಂಡ ಮದರಸಾದ ಕಚೇರಿ, ಹಾಸ್ಟೆಲ್, ಶಾಲೆ ಮೇಲೆ ದಾಳಿ ನಡೆಸಿದ್ದು, ಲೈಂಗಿಕ ಉದ್ರೇಕ ನೀಡುವ ಮಾತ್ರೆ ಸೇರಿ ಹಲವು ವಸ್ತು ಸಿಕ್ಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಲದೆ ಹಲವು ಸಿಡಿ ಸಹ ದೊರೆತಿದ್ದು, ಮುಸ್ಲಿಂ ಮಹಿಳೆ, ಯುವತಿಯರನ್ನು ಧರ್ಮದ ಹೆಸರಲ್ಲಿ ಅತ್ಯಾಚಾರ ಎಸಗುತ್ತಿದ್ದ ಎಂದು ತಿಳಿದುಬಂದಿದೆ.

ಶಾಲೆಯ ಕೋಣೆಗಳಲ್ಲೇ ಮಲಗುವ ಕೋಣೆ ಪತ್ತೆಯಾಗಿದ್ದು, ಹರಿಯಾಣದ ಡೇರಾ ಸಚ್ಚಾದಲ್ಲಿ ಸಿಕ್ಕ ಹಲವು ವಸ್ತು, ಗುಹೆಗಳಿಗೆ ಹೋಲಿಕೆ ಮಾಡಲಾಗಿದೆ.

ಈ ಸ್ವಯಂಘೋಷಿತ ದೇವಮಾನವನ ಸಹಚರರಾದ ಅಬ್ದುಲ್ ಗನಿ, ಬಷೀರ್ ಅಹ್ಮದ್ ಮಿರ್ ಹಾಗೂ ಮಹಿಳಾ ಉದ್ಯೋಗಿಗಳಾದ ಶಕೀಲಾ ಬಾನೋ ಎಂಬುವವರು ಮಹಿಳೆಯರು ಹಾಗೂ ಯುವತಿಯರನ್ನು ಮದರಸಾಗಳಿಗೆ ಕರೆತರುವಲ್ಲಿ ಸಹಕರಿಸಿದ್ದರು ಎಂದು ತಿಳಿದುಬಂದಿದೆ. ಆದಾಗ್ಯೂ, ದೇವಮಾನವನನ್ನು ವಶಪಡಿಸಿಕೊಂಡಿದ್ದು, ನ್ಯಾಯಾಲಯಕ್ಕೆ ಪೀರ್ ಬಾಬಾ ವಿರುದ್ಧ ದಾಖಲೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search