• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾಗಳಿಗೆ ಉಗ್ರರ ಬೆಂಬಲ, ಭಾರತಕ್ಕೆ ಕಾದಿದೆ ಆಪತ್ತು

TNN Correspondent Posted On December 11, 2017
0


0
Shares
  • Share On Facebook
  • Tweet It

ದೆಹಲಿ: ದುಬೈ ಮತ್ತು ಪಾಕಿಸ್ತಾನದಲ್ಲಿರುವ ರೋಹಿಂಗ್ಯಾ ಮುಸ್ಲಿಮರ ಮುಖಂಡರು ವಿಶ್ವಾದ್ಯಂತ ಇರುವ ರೋಹಿಂಗ್ಯಾಗಳಿಗೆ ಸಹಾಯ ಮಾಡಲು ಲಷ್ಕರ್ ಈ ತಯ್ಯಬಾ, ಜಮಾತ್ ಉದ್ ದಾವಾ ಸಂಘಟನೆಗಳೊಂದಿಗೆ ಕೈ ಜೋಡಿಸಿದ್ದಾರೆ. ಈ ಸಂಘಟನೆಗಳ ಮೂಲಕ ಪಾಕಿಸ್ತಾನ ಮತ್ತು ದುಬೈನಲ್ಲಿ ಹಣ ಸಂಗ್ರಹಿಸಿ ಸಹಾಯ ಮಾಡಲು ಉದ್ದೇಶಿಸಿದ್ದಾರೆ. ಆದರೆ ಈ ನಿರ್ಧಾರದಿಂದ ಭಾರತಕ್ಕೆ ಆಪತ್ತು ಎದುರಾಗುವ ಸಂಭವವಿದೆ. ಭಯೋತ್ಪಾದಕ ಸಂಘಟನೆಗಳೊಂದಿಗೆ ಕೈ ಜೋಡಿಸಿರುವ ರೋಹಿಂಗ್ಯಾಗಳು ಭಾರತದಲ್ಲಿ ವಿಶೇಷವಾಗಿ ಕಣಿವೆ ರಾಜ್ಯ ಕಾಶ್ಮೀರದಲ್ಲಿ ವಿದ್ವಂಸಕ ಕೃತ್ಯ ನಡೆಸುವ ಆತಂಕ ಎದುರಾಗಿದೆ.

ಇತ್ತೀಚೆಗೆ ಪಾಕಿಸ್ತಾನದಲ್ಲಿ ನಡೆದ ಸೆಮಿನಾರ್ ನಲ್ಲಿ ಭಾಗವಹಿಸಿದ್ದ ದುಬೈನ್ ರೋಹಿಂಗ್ಯಾ ಸಂಘದ ಮುಖ್ಯಸ್ಥ  ಫರ್ದೂಸ್ ಶೇಕ್ ಭಯೋತ್ಪಾದಕ ಸಂಘಟನೆ ಜಮಾತ್ ಉದ್ ದಾವಾದ ಮುಖಂಡನನ್ನು ಭೇಟಿ ಮಾಡಿ, ರೋಹಿಂಗ್ಯಾ ಟಾಸ್ಕ್ ಫೋರ್ಸ್ ರಚಿಸುವ ಕುರಿತು ಚರ್ಚೆ ನಡೆಸಿದ್ದಾರೆ. ಅಲ್ಲದೆ ರೋಹಿಂಗ್ಯಾ ಮುಸ್ಲಿಮರಿಗಾಗಿ ವೈದ್ಯಕೀಯ, ಆಹಾರ ಸೇವೆ ಒದಗಿಸಲು ಹಣ ಸಂಗ್ರಹಿಸುವುದು ಮತ್ತು ರೋಹಿಂಗ್ಯಾಗಳನ್ನು ಅವರ ಮೂಲ ನೆಲೆಗಳಿಗೆ ಕಳುಹಿಸಲು ಚಿಂತನೆ ನಡೆಸಲಾಗಿದೆ.

ಆದರೆ ಉಗ್ರ ಸಂಘಟನೆಗಳೊಂದಿಗೆ ಕೈ ಜೋಡಿಸಿರುವ ರೋಹಿಂಗ್ಯಾ ಮುಸ್ಲಿಂ ಮುಖಂಡರ ಈ ನಿರ್ಧಾರದಿಂದ ಭಾರತದ ಕಾಶ್ಮೀರ ಸೇರಿ ಹಲವು ಕಡೆ ಆಂತರಿಕ ಭದ್ರತೆ ಸಮಸ್ಯೆ ಎದುರಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆಗಳು ಆತಂಕ ವ್ಯಕ್ತಪಡಿಸಿವೆ. ಇತ್ತೀಚೆಗೆ ಕಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ‘ರೋಹಿಂಗ್ಯಾಗಳು ದೇಶದ ಆಂತರಿಕ ಭದ್ರತೆಗೆ ಅಪಾಯ ಉಂಟು ಮಾಡುವ ಸಂಭವಿದೆ. ಅಕ್ರಮ ನುಸುಳುಕೋರರನ್ನು ತಡೆಯಬೇಕು ಎಂದು ಹೇಳಿದ್ದರು.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search