• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಗಳ ಹಣ ಪಿಎಫ್ ಐ ಮೂಲಕ ಜಿಗ್ನೇಶ್ ಕರ್ನಾಟಕಕ್ಕೆ ತರುತ್ತಾರಾ?

Naresh Shenoy Posted On December 11, 2017
0


0
Shares
  • Share On Facebook
  • Tweet It

ಗೌರಿ ಲಂಕೇಶ್ ಆಪ್ತರಾಗಿದ್ದ ಜಿಗ್ನೇಶ್ ಮೇವಾನಿ ಗುಜರಾತಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಮಾಧ್ಯಮದ ಮೂಲಕ ಎಲ್ಲರಿಗೂ ಗೊತ್ತಿರುವ ವಿಷಯ. ಉತ್ತರ ಗುಜರಾತಿನ ವಡಗಾಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಜಿಗ್ನೇಶ್ ಗೆ ಯಾವುದೇ ರೀತಿಯಲ್ಲಿ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಅಲ್ಲಿ ನಿಲ್ಲಿಸಿಲ್ಲ. ಈ ಮೂಲಕ ಬಹಿರಂಗವಾಗಿ ಜಿಗ್ನೇಶ್ ಅಭ್ಯರ್ಥಿತನವನ್ನು ಬೆಂಬಲಿಸಿದೆ. ಅದರೊಂದಿಗೆ ಆಮ್ ಆದ್ಮಿ ಪಕ್ಷ ಕೂಡ ತಾನು ಅಲ್ಲಿ ಅಭ್ಯರ್ಥಿಯನ್ನು ನಿಲ್ಲಿಸಲ್ಲ ಎಂದು ಹೇಳುವ ಮೂಲಕ ಜಿಗ್ನೇಶ್ ಗೆ ಬೆಂಬಲ ಘೋಷಿಸಿದೆ. ಜಿಗ್ನೆಶ್ ತಾನು ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಸಾಮಾಜಿಕ ತಾಣಗಳ ಮೂಲಕ ಹೇಳಿಕೊಂಡಾಗ ಚುನಾವಣಾ ಫಂಡ್ ಎಲ್ಲಿಂದ ಒಟ್ಟುಮಾಡುತ್ತಾರೆ ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಹರಿದಾಡಿತ್ತು. ಅದಕ್ಕೆ ಕಳೆದ ವಾರ ಉತ್ತರ ಸಿಕ್ಕಿದೆ.

ಜಿಗ್ನೇಶ್ ಮೇವಾನಿ ಯಾರ ಆರ್ಥಿಕ ಬೆಂಬಲದೊಂದಿಗೆ ಚುನಾವಣೆಯ ಕಣದಲ್ಲಿ ಓಡಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ಫೋಟೋ ಸಹಿತ ಸುದ್ದಿ ಮಾಡಿದೆ. ಅದರಲ್ಲಿ ಭಾರತದ ದೇಶದ್ರೋಹಿ ಸಂಘಟನೆ ಎಂದೇ ಕುಖ್ಯಾತಿ ಪಡೆದಿರುವ ಪಿಎಫ್ ಐನ ನಾಯಕರೊಂದಿಗೆ ಜಿಗ್ನೇಶ್ ಮೇವಾನಿ ಆತ್ಮೀಯ ಸಂಬಂಧ ಇಟ್ಟುಕೊಂಡಿರುವುದು ಫೋಟೋ ಮೂಲಕ ಜಗಜಾಹೀರಗೊಂಡಿದೆ. ಜಿಗ್ನೇಶ್ ಮೇವಾನಿಗೆ ಚುನಾವಣೆಗೆ ಸ್ಪರ್ಧಿಸಲು ಪಿಎಫ್ ಐ ಆರ್ಥಿಕ ಸಹಾಯ ಮಾಡುತ್ತಿರುವ ಸ್ಫೋಟಕ ಸಂಗತಿಯನ್ನು ಆ ಮಾಧ್ಯಮ ಬಹಿರಂಗಗೊಳಿಸಿದೆ. ಪಿಎಫ್ ಐನ ಹಿಂದೆ ಪಾಕಿಸ್ತಾನದ ನಿಷೇಧಿತ ಸಂಘಟನೆಗಳ ಕರಿನೆರಳು ಇರುವುದನ್ನು ನ್ಯಾಶನಲ್ ಇನ್ವೆಸ್ಟಿಗೇಶನ್ ಏಜೆನ್ಸಿ ಈ ಮೊದಲೇ ಕೇಂದ್ರ ಸರಕಾರಕ್ಕೆ ಮಾಹಿತಿ ಕೊಟ್ಟಿದೆ.

ಭಾರತದ ವಿರೋಧಿ ಸಂಘಟನೆಗಳೊಂದಿಗೆ ಜಿಗ್ನೇಶ್ ಕೈಜೋಡಿಸುವ ಮೂಲಕ ಏನನ್ನು ಸಾಧಿಸಲು ಹೊರಟಿದ್ದಾರೆ ಎನ್ನುವುದನ್ನು ಗುಜರಾತಿನ ಜನರೇ ನಿರ್ಧರಿಸಬೇಕು. ಇದೇ ಜಿಗ್ನೇಶ್ ಕಳೆದ ವರ್ಷ ಕರ್ನಾಟಕದ ಉಡುಪಿಗೂ ಬಂದಿದ್ದನ್ನು ಸ್ಮರಿಸಬಹುದು. ಪೇಜಾವರ ಶ್ರೀಗಳ ವಿರುದ್ಧ ಬಹಿರಂಗ ಭಾಷಣ ಮಾಡಿದ ಜಿಗ್ನೇಶ್ ಉಡುಪಿ ಚಲೋ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ. ಉಡುಪಿ ಶ್ರೀಕೃಷ್ಣಮಠಕ್ಕೆ ಮುತ್ತಿಗೆ ಹಾಕುವುದಾಗಿ ಆವತ್ತು ಘೋಷಿಸಿದ್ದ. ಈತನೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮಾಧ್ಯಮ ಕಾರ್ಯದರ್ಶಿ ದಿನೇಶ್ ಅಮಿನಮಟ್ಟು ಕೂಡ ವೇದಿಕೆ ಹಂಚಿಕೊಂಡಿದ್ದರು. ಇಬ್ಬರದ್ದೂ ಒಂದೇ ರೀತಿಯ ಚಿಂತನೆಯಾಗಿದ್ದ ಕಾರಣ ಜಿಗ್ನೇಶ್ ಗೆ ದಿನೇಶ್ ಅಮೀನಮಟ್ಟು ಬೆಂಬಲ ಕೊಟ್ಟಿದ್ದು ಆಶ್ಚರ್ಯ ತಂದಿರಲಿಲ್ಲ. ಆದರೆ ಇತ್ತೀಚಿನ ಗುಜರಾತಿನಲ್ಲಿ ನಡೆಯುತ್ತಿರುವ ಬೆಳವಣಿಗೆ ಗಮನಿಸುವಾಗ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ಸಿನ ಮಣಿಶಂಕರ್ ಅಯ್ಯರ್ ಪಾಕಿಸ್ತಾನದ ನಿಷೇಧಿತ ಸಂಘಟನೆಗಳೊಂದಿಗೆ ಕೈಜೋಡಿಸಿದ್ದಾರೆ ಎನ್ನುವ ಆಘಾತಕಾರಿ ಸುದ್ದಿಯನ್ನು ಸ್ವತ: ಪ್ರಧಾನಮಂತ್ರಿಗಳು ಹೇಳಿದ್ದಾರೆ. ಇತ್ತ ಜಿಗ್ನೇಶ್ ಗೆಲುವಿಗೆ ಸಹಕಾರಿಯಾಗಲಿ ಎಂದು ಕಾಂಗ್ರೆಸ್ ಅಭ್ಯರ್ಥಿಯನ್ನು ನಿಲ್ಲಿಸದೇ ಇರುವುದು, ಜಿಗ್ನೇಶ್ ಪಿಎಫ್ ಐಯೊಂದಿಗೆ ಕೈ ಜೋಡಿಸಿರುವುದು, ಅಯ್ಯರ್ ಪಾಕಿಸ್ತಾನದ ನಾಯಕರೊಂದಿಗೆ ಮಾತುಕತೆ ನಡೆಸಿರುವುದು ನೋಡಿದರೆ ಜಿಗ್ನೇಶ್ ಗೂ, ಕಾಂಗ್ರೆಸ್ ಗೂ, ಪಿಎಫ್ ಐಗೂ, ಪಾಕಿಸ್ತಾನಿ ಸಂಘಟನೆಗೂ ಒಳಗೊಳಗೆ ಲಿಂಕ್ ಇರುವುದು ಯಾರಿಗಾದರೂ ಸುಲಭವಾಗಿ ಅರ್ಥವಾಗುತ್ತದೆ. ಇಂತಹ ಜಿಗ್ನೇಶ್ ಮೇವಾನಿ ಗುಜರಾತಿನಲ್ಲಿ ಚುನಾವಣೆ ಮುಗಿದ ಬಳಿಕ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಪರ ಚುನಾವಣಾ ಪ್ರಚಾರ ನಡೆಸಿದರೆ ಆಶ್ಚರ್ಯವಿಲ್ಲ. ಈಗಾಗಲೇ ದಿನೇಶ್ ಅಮೀನಮಟ್ಟು ಅವರೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ಜಿಗ್ನೇಶ್ ಕಾಂಗ್ರೆಸ್ಸ್ ತನಗೆ ಗುಜರಾತಿನಲ್ಲಿ ಮಾಡಿದ ಸಹಾಯಕ್ಕೆ ಋಣ ಸಲ್ಲಿಸಲು ಕರ್ನಾಟಕದಲ್ಲಿ ಅದರ ಪರ ಪ್ರಚಾರ ಮಾಡಲಿದ್ದಾರೆ ಎನ್ನುವ ಮಾಹಿತಿ ಹೊರಗೆ ಬಂದಿದೆ. ಈ ಮೂಲಕ ಪಿಎಫ್ ಐ ಫಂಡ್ ಕೂಡ ಕಾಂಗ್ರೆಸ್ಸಿನ ಚುನಾವಣಾ ಪ್ರಚಾರಕ್ಕೆ ಬಳಕೆಯಾಗುವ ಎಲ್ಲಾ ಸಾಧ್ಯತೆಗಳು ಸ್ಪಷ್ಟವಾಗಿದೆ. ಪಾಕಿಸ್ತಾನಿ ಸಂಘಟನೆಗಳ ಮತ್ತು ಪಿಎಫ್ ಐನ ಹಣ ಜಿಗ್ನೇಶ್ ಮೂಲಕ ದಿನೇಶ್ ಅಮೀನ್ ಮಟ್ಟು ಅವರ ಕೈ ಸೇರಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಬಳಕೆಯಾದರೆ ಅದಕ್ಕಿಂತ ದೊಡ್ಡ ಗಂಡಾಂತರ ಬೇರೆ ಇಲ್ಲ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Naresh Shenoy January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Naresh Shenoy January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search