• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಆರ್ಥಿಕತೆ ಕುಗ್ಗಿತು ಎಂದವರಿಗೆ ಕಹಿ ಸುದ್ದಿ, ಏರಿಕೆ ಕಾಣಲಿದೆ ಜಿಡಿಪಿ ದರ!

TNN Correspondent Posted On December 12, 2017
0


0
Shares
  • Share On Facebook
  • Tweet It

ದೆಹಲಿ: ನೋಟು ನಿಷೇಧ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ಜಾರಿಯಿಂದ ದೇಶದ ಆರ್ಥಿಕತೆ ಕುಗ್ಗಿದೆ. ನೋಡಿ ಜಿಡಿಪಿ ದರ ಕುಸಿದಿದೆ. ಇದಕ್ಕೆಲ್ಲ ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂದು ಕೇಂದ್ರ ಸರ್ಕಾರವನ್ನು ಟೀಕಿಸಿದ್ದವರಿಗೆ ಕಹಿ ಸುದ್ದಿಯೊಂದು ಅಪ್ಪಳಿಸಿದ್ದು, ಮುಂದಿನ ಎರಡು ವರ್ಷಗಳಲ್ಲಿ ಭಾರತದ ಜಿಡಿಪಿ ದರದಲ್ಲಿ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ.

ಹೌದು, ವಿಶ್ವಸಂಸ್ಥೆಯ ವರದಿ ಪ್ರಕಾರ 2018ರಲ್ಲಿ ಭಾರತದ ಜಿಡಿಪಿ ದರ ಶೇ.7.2ಕ್ಕೆ ಹಾಗೂ 2019ರಲ್ಲಿ ಶೇ.7.4ಕ್ಕೆ ಏರಿಕೆಯಾಗಲಿದೆ ಎಂದು ತಿಳಿದುಬಂದಿದ್ದು, ದೇಶದ ಆರ್ಥಿಕ ಸ್ಥಿತಿಯಲ್ಲಿ ಭಾರಿ ಸುಧಾರಣೆಯಾಗಲಿದೆ ಎನ್ನಲಾಗುತ್ತಿದೆ.

ಖಾಸಗಿ ಸೇವೆಗಳ ಬಳಕೆ, ಸಾರ್ವಜನಿಕ ಹೂಡಿಕೆ ಹಾಗೂ ಭಾರತ ಹಲವು ಕ್ಷೇತ್ರಗಳಲ್ಲಿ ಕೈಗೊಂಡಿರುವ ರಚನಾತ್ಮಕ ಸುಧಾರಣೆಗಳ ಹಿನ್ನೆಲೆಯಲ್ಲಿ ದೇಶದ ಜಿಡಿಪಿ ದರದಲ್ಲಿ ಏರಿಕೆಯಾಗಲಿದೆ ಎಂದು ವಿಶ್ವಸಂಸ್ಥೆಯ ಆರ್ಥಿಕ ಹಾಗೂ ಸಾಮಾಜಿಕ ವಿಭಾಗ (ಯುಎನ್ ಡಿಇಎಸ್ಎ) ಬಿಡುಗಡೆಗೊಳಿಸಿರುವ “ವಿಶ್ವ ಆರ್ಥಿಕ ಪರಿಸ್ಥಿತಿ ಹಾಗೂ ನಿರೀಕ್ಷೆ-2018” ಎಂಬ ವರದಿಯಲ್ಲಿ ಭಾರತದ ಜಿಡಿಪಿ ದರದ ಬೆಳವಣಿಗೆ ಬಗ್ಗೆ ಉಲ್ಲೇಖಿಸಲಾಗಿದೆ.

ದಕ್ಷಿಣ ಏಷ್ಯಾದಲ್ಲಿ ಆರ್ಥಿಕ ಪರಿಸ್ಥಿತಿ ಸಮತೋಲನ ಕಾಯ್ದುಕೊಳ್ಳಲಿದ್ದು, ಈ ಪ್ರದೇಶದ ರಾಷ್ಟ್ರಗಳಲ್ಲಿ ಭಾರತದ ಏರಿಕೆ ಪಾಲು ಗರಿಷ್ಠವಿರಲಿದೆ ಎಂದು ಸಹ ತಿಳಿಸಲಾಗಿದೆ. ಪ್ರಸ್ತುತ ಭಾರತದ ಜಿಡಿಪಿ ದರ ಶೇ.6.7ರಷ್ಟಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search