• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಗಾಂಧಿ ಭೂಕಂಪ ಹೇಳಿಕೆಗೆ ಮೋದಿ ಹೇಗೆ ಟಾಂಗ್ ಕೊಟ್ಟರು ಗೊತ್ತಾ?

TNN Correspondent Posted On December 12, 2017
0


0
Shares
  • Share On Facebook
  • Tweet It

ದೆಹಲಿ: ರಾಹುಲ್ ಗಾಂಧಿ ಭೂಕಂಪ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸರಿಯಾಗಿಯೇ ಟಾಂಗ್ ನೀಡಿದ್ದು, “ಕೊನೆಗೂ ಭೂಕಂಪವಾಗಿದೆ, ಪ್ರಾಯಶಃ ಭೂತಾಯಿ ಸಿಟ್ಟಾಗಿರಬೇಕು” ಎಂದು ಪರೋಕ್ಷವಾಗಿ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದಾರೆ.

ಉತ್ತರಾಖಂಡ, ದೆಹಲಿ ಸೇರಿ ಹಲವೆಡೆ ಭೂಕಂಪವಾದ ಕುರಿತು ಸಂಸತ್ತಿನ ಮುಂಗಡಪತ್ರ ಅಧಿವೇಶನದಲ್ಲಿ ಮಾತನಾಡಿದ ಮೋದಿ, ಭೂಕಂಪದ ಉದಾಹರಣೆ ನೀಡಿಯೇ ರಾಹುಲ್ ಗಾಂಧಿಯವರನ್ನು ಟೀಕಿಸಿದರು. ನಾನು ಸಂಸತ್ತಿನಲ್ಲಿ ಮಾತನಾಡಿದರೆ ಭೂಕಂಪವಾಗುತ್ತದೆ ಎಂದು ಹಿಂದೆ ರಾಹುಲ್ ಗಾಂಧಿ ಹೇಳಿದ್ದರು.

ಅಲ್ಲದೆ ಭೂಕಂಪ ಸಂಭವಿಸಿದ ರಾಜ್ಯಗಳಲ್ಲಿ ರಕ್ಷಣೆ ಒದಗಿಸಲು ಸಹ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಆಯಾ ರಾಜ್ಯ ಸರ್ಕಾರಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

ಮೊದಲು ಜನ ನಾವು ಕಳೆದುಕೊಂಡಿದ್ದು ಎಷ್ಟು ಎಂದು ನನ್ನನ್ನು ಪ್ರಶ್ನಿಸುತ್ತಿದ್ದರು. ಆದರೆ ಈಗ ಮೋದಿ ಅವರೇ ಎಷ್ಟು ತಂದಿದ್ದೀರಿ ಎಂದು ಪ್ರಶ್ನಿಸುತ್ತಾರೆ. ಅಷ್ಟರಮಟ್ಟಿಗೆ ಜನ ಜಾಗೃತರಾಗಿದ್ದಾರೆ. ಅಷ್ಟಕ್ಕೂ ಸ್ಕ್ಯಾಮ್ ಎಂಬ ಪದದಲ್ಲಿ ಸೇವೆ ಹುಡುಕಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ದೇಶದ ಆರ್ಥಿಕ ಸ್ಥಿತಿ ಉತ್ತಮವಾಗಿದ್ದಾಗಲೇ ನೋಟು ನಿಷೇಧ ಮಾಡಿದೆವು. ಇಷ್ಟಕ್ಕೂ ನಮ್ಮ ದೇಹ ಸದೃಢವಾಗಿದ್ದಾಗಲೇ ತಾನೆ ಆಪರೇಷನ್ ಮಾಡೋದು? ಅದಕ್ಕಾಗಿಯೇ ನೋಟು ನಿಷೇಧಿಸಿ ಕಪ್ಪು ಹಣ ಹೊರತೆಗೆದೆವು ಎಂದು ಮೋದಿ ನೋಟು ನಿಷೇಧದ ಕುರಿತು ಹೇಳಿದರು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search