• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಮಾನಾಥ ರೈ ಬಂಡವಾಳ ಬಯಲು, ಶಾಲೆ ಮಕ್ಕಳ ಅನ್ನ ಕಸಿದುಕೊಂಡಿದ್ದು ಸಾಬೀತು

TNN Correspondent Posted On December 13, 2017


  • Share On Facebook
  • Tweet It

ಮಂಗಳೂರು: ಡಾ.ಕಲಡ್ಕ ಪ್ರಭಾಕರ ಭಟ್ಟರ ನೇತೃತ್ವದ ಶಾಲೆಗಳಿಗೆ ಕೊಲ್ಲುರು ದೇವಳದಿಂದ ನೀಡುತ್ತಿದ್ದ ಅನ್ನದಾನ ಕಸಿದುಕೊಂಡ ರಮಾನಾಥ ರೈಮುಖವಾಡ ಇದೀಗ ಬಯಲಾಗಿದೆ. ಅನ್ನ ಸ್ಥಗಿತಗೊಳಿಸುವಲ್ಲಿ ನನ್ನ ಪಾತ್ರ  ಏನು ಇಲ್ಲ ಎಂದು ಮಾಧ್ಯಮಗಳ ಎದುರು ಗೋಸುಂಬೆಯಂತೆ ನಟಿಸಿದ್ದ ರಮಾನಾಥ ರೈ ಸರ್ಕಾರಕ್ಕೆ ಬರೆದಿರುವ ಪತ್ರವನ್ನು ಬಿಜೆಪಿ ಬಹಿರಂಗಪಡಿಸಿದೆ.’

ಕಲಡ್ಕ ಪ್ರಭಾಕರ ಭಟ್ಟರ ಶಾಲೆಗಳಿಗೆ ಕೊಲ್ಲೂರು ದೇವಳದಿಂದ ನೀಡುತ್ತಿದ್ದ ಅನ್ನದಾನವನ್ನು ಸ್ಥಗಿತಗೊಳಿಸಿ ಎಂದು ಸಚಿವ ರಮಾನಾಥ ರೈ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರ ಕುಮ್ಮಕ್ಕಿನಿಂದಲೇ ಸರ್ಕಾರ ಅನ್ನದಾನವನ್ನು ನಿಲ್ಲಿಸಿದೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಬಹಿರಂಗಪಡಿಸಿದ್ದಾರೆ.

ರಮಾನಾಥ ರೈ ಕಲಡ್ಕದಲ್ಲಿ ಪ್ರಭಾಕರ ಭಟ್ಟರ ಶಕ್ತಿಯನ್ನು ಕುಂದಿಸಲು ಸಚಿವರೈ ಅವರ ಶಾಲೆಗಳಿಗೆ ಹಣಕಾಸಿನ ನೆರವು ಸ್ಥಗಿತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹರಿಕೃಷ್ಣ ಆರೋಪಿಸಿದ್ದಾರೆ.

ಶಾಲೆಗಳಿಗೆ ಹಣಕಾಸಿನ ನೆರುವ ಸ್ಥಗಿತಗೊಳಿಸಿದಕ್ಕೆ ರಾಜ್ಯಾಧ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಸರ್ಕಾರದ ವಿರುದ್ಧ ಶಾಲೆ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಮಕ್ಕಳ ಅನ್ನಕ್ಕಾಗಿ ಭೀಕ್ಷಾಂದೇಹಿ ಚಳವಳಿ ಹಮ್ಮಿಕೊಂಡು ಅಕ್ಕಿ, ಹಣವನ್ನು ಸಂಗ್ರಹಿಸಿ ಸರ್ಕಾರದ ನೆರವು ಇಲ್ಲದೆಯೂ ಶಾಲೆ ನಡೆಸಬಲ್ಲೆವು ಎಂಬ ಸಂದೇಶವನ್ನು ನೀಡಲಾಗಿತ್ತು. ಇದೀಗ ರಮಾನಾಥ ರೈ ಕಲಡ್ಕ ಪ್ರಭಾಕರ ಭಟ್ಟರ ವಿರುದ್ಧ ನಡೆಸಿದ ಷಡ್ಯಂತ್ರ ಬಯಲಾಗಿದೆ.

  • Share On Facebook
  • Tweet It


- Advertisement -


Trending Now
ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
Tulunadu News October 3, 2023
ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
Tulunadu News October 2, 2023
Leave A Reply

  • Recent Posts

    • ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
    • ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
    • ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
    • ಶಿವಮೊಗ್ಗದಲ್ಲಿ ಬಹಿರಂಗ ತಲ್ವಾರ್ ಪ್ರದರ್ಶನ, ಭಯ ಉತ್ಪಾದಕ ಕೃತ್ಯ!
    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
  • Popular Posts

    • 1
      ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
    • 2
      ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
    • 3
      ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
    • 4
      ಶಿವಮೊಗ್ಗದಲ್ಲಿ ಬಹಿರಂಗ ತಲ್ವಾರ್ ಪ್ರದರ್ಶನ, ಭಯ ಉತ್ಪಾದಕ ಕೃತ್ಯ!
    • 5
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search