• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೋರಾಟಕ್ಕೆ ಮಣಿದ ಕಾಂಗ್ರೆಸ್, ಮೇಸ್ತ ಸಾವಿನ ಪ್ರಕರಣ ಸಿಬಿಐಗೆ

TNN Correspondent Posted On December 14, 2017
0


0
Shares
  • Share On Facebook
  • Tweet It

ಬೆಂಗಳೂರು: ಹೊನ್ನಾವರದ ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ಪ್ರಕರಣ ಖಂಡಿಸಿ ಹೊನ್ನಾವರ ಸೇರಿ ಸುತ್ತಲಿನ ತಾಲೂಕುಗಳಲ್ಲಿ ಭಾರಿ ವಿರೋಧ ಹಾಗೂ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೊನೆಗೂ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಮಣಿದಿದೆ.

ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದ್ದು, ಜನರ ಹೋರಾಟದ ಎದುರು ಸರ್ಕಾರ ಮಂಡಿಯೂರಿದೆ.

ಪರೇಶ್ ಮೇಸ್ತ ಅವರ ಕುಟುಂಬದವರ ಒತ್ತಡದ ಹಿನ್ನೆಲೆಯಲ್ಲಿ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸುತ್ತಿದ್ದೇವೆ ಎಂದು ಪರಪ್ಪನ ಅಗ್ರಹಾರದ ಬಳಿ ಗೃಹ ಸಚಿವ ರಾಮಲಿಂಗಾರೆಡ್ಡಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಅವರು ಸಹ ಒಪ್ಪಿಗೆ ನೀಡಿದ್ದು, ಸಮರ್ಪಕ ತನಿಖೆಯಾಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಪ್ರಕರಣ ಸಿಬಿಐಗೆ ವಹಿಸಿದ ಕುರಿತು ಮಾತನಾಡುವ ನೆಪದಲ್ಲಿ ಬಿಜೆಪಿಯನ್ನು ಟೀಕಿಸಿದ ರಾಮಲಿಂಗಾರೆಡ್ಡಿ ಅವರು, “ಚುನಾವಣೆ ಹತ್ತಿರವಾಗುತ್ತಿರುವ ಕಾರಣ ಬಿಜೆಪಿಯವರಿಗೆ ಸೋಲಿನ ಭೀತಿ ಕಾಡುತ್ತಿದೆ. ಹಾಗಾಗಿ ಅವರು ಜನರ ಭಾವನೆ ಕೆರಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಹಾಗಾಗಿಯೇ ಹೊನ್ನಾವರ ಹಾಗೂ ಶಿರಸಿಯಲ್ಲಿ ಗಲಾಟೆ ನಡೆಯಲು ಕಾರಣವಾಯಿತು ಎಂದು ಹೇಳಿದ್ದಾರೆ.

ಹೊನ್ನಾವರದಲ್ಲಿ ಡಿ.6ರಂದು ಕಣ್ಮರೆಯಾಗಿ ಬಳಿಕ ಶವವಾಗಿ ಪತ್ತೆಯಾಗಿದ್ದ ಪರೇಶ್ ಸಹಜವಾಗಿ ಮೃತಪಟ್ಟಿಲ್ಲ. ಈ ಕುರಿತು ತನಿಖೆಯಾಗಬೇಕು ಎಂದು ಪರೇಶ್ ತಂದೆ ಕಮಲಾಕರ್ ಆಗ್ರಹಿಸಿದ್ದರು.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search