• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೀತಿ ಸಂಹಿತೆ ಉಲ್ಲಂಘನೆ, ರಾಹುಲ್ ಗಾಂಧಿಗೆ ಶೋಕಾಸ್ ನೋಟಿಸ್!

TNN Correspondent Posted On December 14, 2017


  • Share On Facebook
  • Tweet It

ಗಾಂಧಿನಗರ: ಇಷ್ಟು ದಿನ ಹಾಸ್ಯಾಸ್ಪದ ಹೇಳಿಕೆ ಹಾಗೂ ಪ್ರಮಾದಗಳಿಂದಲೇ ಸುದ್ದಿಯಲ್ಲಿರುತ್ತಿದ್ದ ರಾಹುಲ್ ಗಾಂಧಿ ಅವರು ಈಗ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಇಂದಿನಿಂದ ಗುಜರಾತಿನಲ್ಲಿ ಎರಡನೇ ಹಾಗೂ ಕೊನೆಯ ಹಂತದ ಚುನಾವಣೆ ನಡೆಯುವ ಹಿಂದಿನ ದಿನವೇ ಗುಜರಾತಿ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಚುನಾವಣೆ ಆಯೋಗ ರಾಹುಲ್ ಗಾಂಧಿ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಡಿ.18ರೊಳಗೆ ಈ ಕುರಿತು ಪ್ರತಿಕ್ರಿಯಿಸಬೇಕು ಹಾಗೂ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ನಿಮ್ಮ ವಿರುದ್ಧ ಕ್ರಮವೇಕೆ ತೆಗೆದುಕೊಳ್ಳಬಾರದು ಎಂದು ಚುನಾವಣೆ ಆಯೋಗ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಸಂದರ್ಶನ ಪ್ರಸಾರ ಮಾಡಿದ ಟಿವಿ ಚಾನೆಲ್ ವಿರುದ್ಧ ಎಫ್ಐಆರ್ ದಾಖಲಿಸಲು ಸಹ ಆಯೋಗ ಸೂಚನೆ ನೀಡಿದೆ.

ಗುಜರಾತಿನ ಸಮಾಚಾರ್ ಟಿವಿ ಎಂಬ ಸುದ್ದಿವಾಹಿನಿಗೆ ಸಂದರ್ಶನ ನೀಡಿದ್ದ ರಾಹುಲ್ ಗಾಂಧಿ, “ಈ ಚುನಾವಣೆ ರಾಹುಲ್ ಗಾಂಧಿ ಹಾಗೂ ನರೇಂದ್ರ ಮೋದಿ ನಡುವೆ ನಡೆಯುತ್ತಿಲ್ಲ. ಇದು ಗುಜರಾತಿನ ಜನರಿಗಾಗಿ, ಅವರ ಧ್ವನಿಗಾಗಿ ನಡೆಯುತ್ತಿರುವ ಚುನಾವಣೆ. ಅವರು (ಬಿಜೆಪಿ) ಸತ್ಯಾಂಶದ ಕುರಿತು ಮಾತನಾಡುತ್ತಿಲ್ಲ. ಗುಜರಾತಿನ ಅಭಿವೃದ್ಧಿಯ ಕುರಿತು ಇಲ್ಲಿ ಮಾತೇ ಇಲ್ಲ” ಎಂದು ಟೀಕಿಸಿದ್ದರು. ಆದರೆ ಈಗ ಕಾನೂನು ಉಲ್ಲಂಘಿಸಿ ರಾಹುಲ್ ಗಾಂಧಿಯವರೇ ಟೀಕೆಗೆ ಗ್ರಾಸವಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search