• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬ್ರಹ್ಮಪುತ್ರ ನದಿ ನೀರು ಹರಿಯುವುದನ್ನು ತಡೆದ ಚೀನಾ ಕುತಂತ್ರ ಬಯಲು!

TNN Correspondent Posted On December 14, 2017


  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಅರುಣಾಚಲ ಪ್ರದೇಶದ ಸಿಯಾಂಗ್ ನದಿ ಹೊಲಸಾಗಲು ಚೀನಾ ಕಾರಣ ಎಂಬ ಆರೋಪ ಕೇಳಿಬಂದಿದ್ದ ಬೆನ್ನಲ್ಲೇ ಚೀನಾದ ಮತ್ತೊಂದು ಕರಾಳ ಮುಖ ಬಯಲಾಗಿದೆ.

ಇತ್ತೀಚಿನ ಸ್ಯಾಟಲೈಟ್ ಚಿತ್ರಗಳ ಪ್ರಕಾರ ಚೀನಾದಿಂದ ಭಾರತಕ್ಕೆ ಬರುವ ಬ್ರಹ್ಮಪುತ್ರ ನದಿಯ ನೀರನ್ನು ಚೀನಾ ತಡೆದಿದೆ ಹಾಗೂ ಕೆಲವು ಭಾಗದಲ್ಲಿ ನೀರು ಬೇರೆಡೆ ಹರಿಸುತ್ತಿದೆ ಎಂದು ತಿಳಿದುಬಂದಿದೆ.

ಸ್ಯಾಟಲೈಟ್ ಚಿತ್ರಗಳ ಸಮೂಹ ತಜ್ಞ (ನಿವೃತ್ತ) ಕರ್ನಲ್ ವಿನಾಯಕ್ ಭಟ್ ಈ ಕುರಿತು ಮಾಹಿತಿ ನೀಡಿದ್ದು, ಚೀನಾ ಬ್ರಹ್ಮಪುತ್ರ ನದಿಯ ನೀರನ್ನು ಸಂಪೂರ್ಣವಾಗಿ ತಡೆದಿದೆ. ಭಾರತದ ಪ್ರದೇಶ ತಲುಪುವ 60 ಕಿ.ಮೀ. ಮೊದಲೇ ಚೀನಾ ಡ್ಯಾಂ ಒಂದನ್ನು ಕಟ್ಟಿ ನೀರು ತಡೆದಿದೆ. ಅಲ್ಲದೆ, ಕೆಲವಡೆ ಭಾರತಕ್ಕೆ ಹರಿಯುವ ನೀರನ್ನು ಗುಡ್ಡಗಾಡು ಪ್ರದೇಶಕ್ಕೆ ಹರಿಬಿಡುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದರಿಂದ ಭಾರತಕ್ಕೆ ಹರಿದು ಬರುವ ಭಾರಿ ಪ್ರಮಾಣದ ನೀರಿಗೆ ಕುತ್ತು ಬಿದ್ದಿದೆ. ಇದು ಹೀಗೆಯೇ ಮುಂದುವರಿದರೆ ದೇಶದ ಇಡೀ ಕೃಷಿ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ.

ಇನ್ನು ಗಡಿಭಾಗದಲ್ಲಂತೂ ಜನ ನೀರು ಕುಡಿಯಲು ಸಹ ಪರದಾಡಬೇಕಾಗುತ್ತದೆ. ಪ್ರಾಣಿ, ಪಕ್ಷಿಗಳಿಗೂ ತೊಂದರೆಯಾಗಲಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಖ್ಯಾತಿ, ಒಂದು ಪ್ರದೇಶ, ಒಂದು ರಸ್ತೆ ಯೋಜನೆಗೆ ಭಾರತದ ವಿರೋಧ ಸೇರಿ ಹಲವು ಕಾರಣಗಳಿಂದ ನಮ್ಮ ವಿರುದ್ಧ ಹೋರಾಡಲು ತಾಕತ್ತಿಲ್ಲದ ಚೀನಾ ಹೀಗೆ ಹಿಂಬಾಗಿಲಿನಿಂದ ಕುತಂತ್ರ ಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

 

ವರದಿ, ಚಿತ್ರಕೃಪೆ- ಇಂಡಿಯಾ ಟುಡೇ

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search