• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬ್ರಹ್ಮಪುತ್ರ ನದಿ ನೀರು ಹರಿಯುವುದನ್ನು ತಡೆದ ಚೀನಾ ಕುತಂತ್ರ ಬಯಲು!

TNN Correspondent Posted On December 14, 2017


  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಅರುಣಾಚಲ ಪ್ರದೇಶದ ಸಿಯಾಂಗ್ ನದಿ ಹೊಲಸಾಗಲು ಚೀನಾ ಕಾರಣ ಎಂಬ ಆರೋಪ ಕೇಳಿಬಂದಿದ್ದ ಬೆನ್ನಲ್ಲೇ ಚೀನಾದ ಮತ್ತೊಂದು ಕರಾಳ ಮುಖ ಬಯಲಾಗಿದೆ.

ಇತ್ತೀಚಿನ ಸ್ಯಾಟಲೈಟ್ ಚಿತ್ರಗಳ ಪ್ರಕಾರ ಚೀನಾದಿಂದ ಭಾರತಕ್ಕೆ ಬರುವ ಬ್ರಹ್ಮಪುತ್ರ ನದಿಯ ನೀರನ್ನು ಚೀನಾ ತಡೆದಿದೆ ಹಾಗೂ ಕೆಲವು ಭಾಗದಲ್ಲಿ ನೀರು ಬೇರೆಡೆ ಹರಿಸುತ್ತಿದೆ ಎಂದು ತಿಳಿದುಬಂದಿದೆ.

ಸ್ಯಾಟಲೈಟ್ ಚಿತ್ರಗಳ ಸಮೂಹ ತಜ್ಞ (ನಿವೃತ್ತ) ಕರ್ನಲ್ ವಿನಾಯಕ್ ಭಟ್ ಈ ಕುರಿತು ಮಾಹಿತಿ ನೀಡಿದ್ದು, ಚೀನಾ ಬ್ರಹ್ಮಪುತ್ರ ನದಿಯ ನೀರನ್ನು ಸಂಪೂರ್ಣವಾಗಿ ತಡೆದಿದೆ. ಭಾರತದ ಪ್ರದೇಶ ತಲುಪುವ 60 ಕಿ.ಮೀ. ಮೊದಲೇ ಚೀನಾ ಡ್ಯಾಂ ಒಂದನ್ನು ಕಟ್ಟಿ ನೀರು ತಡೆದಿದೆ. ಅಲ್ಲದೆ, ಕೆಲವಡೆ ಭಾರತಕ್ಕೆ ಹರಿಯುವ ನೀರನ್ನು ಗುಡ್ಡಗಾಡು ಪ್ರದೇಶಕ್ಕೆ ಹರಿಬಿಡುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದರಿಂದ ಭಾರತಕ್ಕೆ ಹರಿದು ಬರುವ ಭಾರಿ ಪ್ರಮಾಣದ ನೀರಿಗೆ ಕುತ್ತು ಬಿದ್ದಿದೆ. ಇದು ಹೀಗೆಯೇ ಮುಂದುವರಿದರೆ ದೇಶದ ಇಡೀ ಕೃಷಿ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ.

ಇನ್ನು ಗಡಿಭಾಗದಲ್ಲಂತೂ ಜನ ನೀರು ಕುಡಿಯಲು ಸಹ ಪರದಾಡಬೇಕಾಗುತ್ತದೆ. ಪ್ರಾಣಿ, ಪಕ್ಷಿಗಳಿಗೂ ತೊಂದರೆಯಾಗಲಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಖ್ಯಾತಿ, ಒಂದು ಪ್ರದೇಶ, ಒಂದು ರಸ್ತೆ ಯೋಜನೆಗೆ ಭಾರತದ ವಿರೋಧ ಸೇರಿ ಹಲವು ಕಾರಣಗಳಿಂದ ನಮ್ಮ ವಿರುದ್ಧ ಹೋರಾಡಲು ತಾಕತ್ತಿಲ್ಲದ ಚೀನಾ ಹೀಗೆ ಹಿಂಬಾಗಿಲಿನಿಂದ ಕುತಂತ್ರ ಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

 

ವರದಿ, ಚಿತ್ರಕೃಪೆ- ಇಂಡಿಯಾ ಟುಡೇ

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search