• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹೇಳಿ ಹೇಳಿ ಸಾಕಾದ ನಂತರ ಮುಸ್ಲಿಂ ಯುವಕರು ಈದ್ ದಿನ ಮಾಡಿದ್ದೇನು!

TNN Correspondent Posted On July 6, 2017
0


0
Shares
  • Share On Facebook
  • Tweet It

ಬೈಕಂಪಾಡಿ ಕೈಗಾರಿಕಾ ಪ್ರದೇಶದ ಪರಿಸ್ಥಿತಿಯನ್ನು ನೋಡಿದರೆ ಅದು ಸಣ್ಣ ಕೆರೆಯ ಲೆವೆಲ್ಲಿಗೆ ತಿರುಗಿರುವುದು ಸ್ಪಷ್ಟ. ಮೊದಲೇ ಹೊಂಡ ಗುಂಡಿಗಳಿಂದ ಕೂಡಿದ ಪ್ರದೇಶ. ಅಲ್ಲಿ ರಸ್ತೆ ಚೆನ್ನಾಗಿರುವುದೇ ಒಂದು ಪವಾಡ. ಬೇಸಿಗೆಯಲ್ಲಿ ವಾಹನ ಚಾಲಕರು ರಸ್ತೆಯಲ್ಲಿ ಇರುವ ಗುಂಡಿಗಳನ್ನು ತಪ್ಪಿಸಿ ವಾಹನ ಚಲಾಯಿಸುತ್ತಿದ್ದರೆ ಮಳೆಗಾಲದಲ್ಲಿ ಅದೇ ಗುಂಡಿಗಳಲ್ಲಿ ನೀರು ತುಂಬಿ ಇವರಿಗೆ ಅದು ರಸ್ತೆಯೊ, ಗುಂಡಿಯೊ ಎಂದು ಗೊತ್ತಾಗದ ಪರಿಸ್ಥಿತಿ ನಿಮರ್ಾಣವಾಗಿದೆ.
ಅಲ್ಲಿನ ರಸ್ತೆಗಳು ಈ ಪರಿಸ್ಥಿತಿಗೆ ಬರಲು ಮುಖ್ಯ ಕಾರಣ ಕನರ್ಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ. ಕೈಗಾರಿಕಾ ಪ್ರದೇಶಕ್ಕೆ ಹೋಗುವ ರಸ್ತೆ ಜೋಕಟ್ಟೆಯನ್ನು ತಲುಪುದರೊಳಗೆ ನೀವು ಲೆಕ್ಕವಿಲ್ಲದಷ್ಟು ಗುಂಡಿಗಳನ್ನು ದಾಟಿ ಹೋಗಬೇಕಾಗುತ್ತದೆ. ಅದರೊಂದಿಗೆ ಅಲ್ಲಿ ಚರಂಡಿಗಳು ಸಮರ್ಪಕವಾಗಿ ಇಲ್ಲದಿರುವುದು ಕೂಡ ನೀರು ರಸ್ತೆಯ ಮೇಲೆ ನಿಲ್ಲಲು ಕಾರಣ. ಇನ್ನು ದೀಪಕ್ ಪೆಟ್ರೋಲ್ ಪಂಪ್, ಪೊಲೀಸ್ ಠಾಣೆಗೆ ಸಂಪಕರ್ಿಸುವ ರಸ್ತೆಗಳು ಕೂಡ ಹೊಂಡ ಗುಂಡಿಗಳ ಆವಾಸ ಸ್ಥಾನವಾಗಿರುವುದರಿಂದ ಕೃತಕ ನೆರೆ ಇಲ್ಲಿ ಸವರ್ೇ ಸಾಮಾನ್ಯ.
ಇಲ್ಲಿ ವಿಷಯ ಏನೆಂದರೆ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿ ಸಾಕಷ್ಟು ಸಮಯ ಕಳೆದಿದೆ. ಆದರೆ ಇಲ್ಲಿಯ ತನಕ ಯಾವುದೇ ಅಭಿವೃದ್ಧಿ ಆಗದೇ ಇರಲು ಜನಪ್ರತಿನಿಧಿಗಳ ಇಚ್ಚಾಶಕ್ತಿಯೇ ಕಾರಣ. ಇಲ್ಲಿ ಕೆಳಮುಖ ರಸ್ತೆಗಳೇ ಜಾಸ್ತಿ ಇರುವುದರಿಂದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ಬೇಕಾಗುತ್ತದೆ, ಅದರ ಕೊರತೆ ಕೂಡ ಕಾಣುತ್ತದೆ ಎಂದು ಸ್ಥಳೀಯ ವರ್ತಕರು ಹೇಳುತ್ತಾರೆ. ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯರಸ್ತೆಯ ಕಥೆ ವ್ಯಥೆ ಇವತ್ತು ನಿನ್ನೆಯದ್ದಲ್ಲ. ಅತ್ಯಂತ ಹೆಚ್ಚು ಆದಾಯ ತರುವ ಕೈಗಾರಿಕಾ ಪ್ರದೇಶದ ರಸ್ತೆಗಳು ಯಾವತ್ತಿಗೂ ಹೆಚ್ಚು ಚೆನ್ನಾಗಿರಬೇಕಿತ್ತು. ಆದರೆ ವಿಷಯ ಎಂದರೆ ಈ ರಸ್ತೆಯಷ್ಟು ನಿರ್ಲಕ್ಷ್ಯಕ್ಕೆ ಒಳಗಾದ ರಸ್ತೆ ಇಡೀ ಮಂಗಳೂರು ತಾಲೂಕಿನಲ್ಲಿ ಬೇರೆ ಇರಲಿಕ್ಕಿಲ್ಲ. ಹಾಗಂತ ಈ ರಸ್ತೆಯ ಕಥೆ ಯಾರಿಗೂ ಗೊತ್ತಿಲ್ಲ ಎಂದಲ್ಲ. ಆದರೆ ಇಲ್ಲಿಯ ತನಕ ಯಾವುದೇ ಜನಪ್ರತಿನಿಧಿಯಾಗಲಿ, ಶಾಸಕರಾಗಲಿ, ಸಚಿವರಾಗಲಿ, ಸಂಸದರಾಗಲಿ ಈ ರಸ್ತೆಯಲ್ಲಿ ಯಾವತ್ತಿಗೂ ಶಾಶ್ವತವಾಗಿರುವ ಗುಂಡಿ, ಹೊಂಡಗಳಿಗೆ ಶಾಶ್ವತ ಪರಿಹಾರ ಹುಡುಕುವ ಕೆಲಸ ಮಾಡಿಲ್ಲ. ಒಂದು ವೇಳೆ ಮಾಡಿದರೂ ಅದು ಜಾರಿಗೆ ಬಂದಿಲ್ಲ. ಆದ್ದರಿಂದ ಇನ್ನು ಕಾಯುವುದು ಬೇಡಾ ಎಂದುಕೊಂಡ ಅಲ್ಲಿನ ಸ್ಥಳೀಯ ಯುವಕರು ಯೋಜನೆ ಹಮ್ಮಿಕೊಂಡರು.
ಮುಸ್ಲಿಮರ ಪವಿತ್ರ ದಿನ ಮುಸಲ್ಮಾನ ಬಾಂಧವ ಯುವಕರು ಶ್ರಮದಾನದ ಮೂಲಕ ಅದಕ್ಕೆ ಪರಿಹಾರ ಕಂಡುಕೊಂಡರು. ಈದ್ ದಿನ ಯಾವುದಾದರೂ ಒಳ್ಳೆಯ ಕೆಲಸ ಮಾಡಬೇಕೆನ್ನುವ ಅವರ ಉದ್ದೇಶ ಈ ಮೂಲಕ ಈಡೇರಿದೆ. ಇಲ್ಲಿನ ಕೈಗಾರಿಕೋದ್ಯಮಿಗಳು, ರಿಕ್ಷಾ ಸಂಘಟನೆಗಳು, ಸ್ಥಳೀಯ ನಾಗರಿಕ ಸಮಿತಿಗಳ ಪ್ರಮುಖರು ಕನರ್ಾಟಕ ಕೈಗಾರಿಕಾ ಅಭಿವೃದ್ಧಿ ಬೋಡರ್್ಗೆ ದಶಕದಿಂದ ಮಾಡಿಕೊಂಡು ಬಂದಿರುವ ಮನವಿಗೆ ಪರಿಹಾರ ಸಿಗದೇ ಇದ್ದ ಕಾರಣ ಅನಿವಾರ್ಯವಾಗಿ ನಾವೆ ಈ ಕೆಲಸಕ್ಕೆ ಮುಂದಾಗಬೇಕಾಯಿತು ಎನ್ನುವುದು ಈ ಯುವಕರ ಮಾತು. ಹಲವು ಮನವಿ, ಪ್ರತಿಭಟನೆ, ಮುತ್ತಿಗೆಗಳಿಂದ ಆಗದ ಕೆಲಸ ಗಾಂಧಿಗಿರಿಯೊಂದಿಗೆ ಸಮಾಪನಗೊಂಡಿದೆ. ಹಾಗೆಂದು ಎಲ್ಲಾ ಸಮಸ್ಯೆ ಪರಿಹಾರವಾಗಿದೆ ಎಂದಲ್ಲ. ಅಂಗರಗುಂಡಿ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ನಿಂತಿದ್ದ ಕೆಸರು, ಮಣ್ಣು ತೆಗೆದು ಸುಗಮ ಸಂಚಾರಕ್ಕೆ ಅನುಮ ಮಾಡಿಕೊಡುವ ಮೂಲಕ ಯುವಕರು ಉದಾತ್ತ ಮೇಲ್ಪಂಕ್ತಿಯನ್ನು ಹಾಕಿಕೊಟ್ಟರು.

 

0
Shares
  • Share On Facebook
  • Tweet It




Trending Now
6 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 6 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      6 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search