• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತೀಸ್ತಾ ಸೆತಲ್ವಾಡ್ ಅರ್ಜಿ ತಿರಸ್ಕರಿಸಿದ ಸುಪ್ರೀಂ, ಬ್ಯಾಂಕ್ ಖಾತೆ ಸ್ಥಗಿತ ಹಿಂಪಡೆತ ಇಲ್ಲ

TNN Correspondent Posted On December 15, 2017
0


0
Shares
  • Share On Facebook
  • Tweet It

ದೆಹಲಿ: ಹಣ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಸಿಲುಕಿಕೊಂಡಿದ್ದ ಸಾಮಾಜಿಕ ಚಳವಳಿಗಾರ್ತಿ ತೀಸ್ತಾ ಸೆತಲ್ವಾಡ್ ಗೆ ಹಿನ್ನಡೆಯಾಗಿದ್ದು, ಅರ್ಜಿಯನ್ನು ಸುಪ್ರೀಂ ಕೋರ್ಟ್  ತಿರಸ್ಕರಿಸಿದೆ.

ಸಾರ್ವಜನಿಕರ ಹಣ ದುರುಪಯೋಗಪಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ 2015ರಲ್ಲಿ ಅಪರಾಧ ವಿಭಾಗದ ಪೊಲೀಸರು ತೀಸ್ತಾ ಸೆತಲ್ವಾಡ್, ಆಕೆಯ ಗಂಡ ಜಾವೇದ್ ಆನಂದ್ ಹಾಗೂ ಇವರು ನಡೆಸುತ್ತಿದ್ದ ಎನ್ ಜಿಒದ ಬರೋಬ್ಬರಿ ಆರು ಬ್ಯಾಂಕ್ ಖಾತೆ ಸ್ಥಗಿತಗೊಳಿಸಲಾಗಿತ್ತು.

ಹಣ ದುರ್ಬಳಕೆ ಮಾಡಿಕೊಂಡಿಲ್ಲ ಹಾಗಾಗಿ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿರುವುದನ್ನು ಹಿಂಪಡೆಯಬೇಕು ಎಂದು ತೀಸ್ತಾ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಕಾರಣ ತೀಸ್ತಾಗೆ ಹಿನ್ನಡೆಯಾಗಿದೆ. ಅಲ್ಲದೆ, ಗುಜರಾತ್ ಹೈಕೋರ್ಟ್ ಸಹ ತೀಸ್ತಾ ಸೆತಲ್ವಾಡ್ ಅರ್ಜಿ ತಿರಸ್ಕರಿಸಿದೆ.

2002ರಲ್ಲಿ ಗುಜರಾತಿನ ಗೋಧ್ರಾದಲ್ಲಿ ನಡೆದ ಗಲಭೆ ಬಳಿಕ ತೀಸ್ತಾ ಸೆತಲ್ವಾಡ್ ಸಾಮಾಜಿಕ ಚಳವಳಿಗಾರ್ತಿಯಾಗಿ ರೂಪುಗೊಂಡಿದ್ದರಲ್ಲದೆ, ಪ್ರಧಾನಿ ನರೇಂದ್ರ ಮೋದಿ (ಆಗ ಗುಜರಾತ್ ಮುಖ್ಯಮಂತ್ರಿ) ಅವರ ವಿರುದ್ಧ ಅಭಿಯಾನವನ್ನೇ ಆರಂಭಿಸಿದ್ದರು.

ಅಲ್ಲದೆ, 2002ರ ಗೋಧ್ರಾ ಗಲಭೆಯ ಸಂತ್ರಸ್ತರಿಗೆ ನೆರವಾಗಲು ಎನ್ ಜಿಒ ಸ್ಥಾಪಿಸಿದ್ದರು. ಆದರೆ ಹೀಗೆ ಎನ್ ಜಿಒ ಸ್ಥಾಪಿಸಿ, ಅದಕ್ಕೆ ಬಂದ ದೇಣಿಗೆ ಹಣ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಅಪರಾಧ ವಿಭಾಗದ ಪೊಲೀಸರು ತೀಸ್ತಾ ಸೆತಲ್ವಾಡ್ ಅವರಿಗೆ ಸಂಬಂಧಿಸಿದ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿದ್ದರು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ

  • Privacy Policy
  • Contact
© Tulunadu Infomedia.

Press enter/return to begin your search