• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಲವಂತದ ಮತಾಂತರದ ಗೊತ್ತುವಳಿ ಹೊರಡಿಸಿದ ರಾಜಸ್ಥಾನ ಹೈ ಕೋರ್ಟ್..

TNN Correspondent Posted On December 16, 2017


  • Share On Facebook
  • Tweet It

ಜೈಪುರ: ರಾಜಸ್ಥಾನದ ಇತ್ತೀಚೆಗೆ ಬಲವಂತದ ಮತಾಂತರದ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ, ಇದಕ್ಕೆ ಕಡಿವಾಣ ಹಾಕಲು ರಾಜಸ್ಥಾನ ಹೈಕೋರ್ಟ್ ನಿರ್ದೇಶನ ನೀಡಿದ್ದು, ಬಲವಂತದ ಮತಾಂತರದ ವಿರುದ್ಧ ಗೊತ್ತುವಳಿ ಹೊರಡಿಸಿದೆ.

ಬಲವಂತಾದ ಮತಾಂತರ ಹಾಗೂ ಮತಾಂತರಗೊಳಿಸಿ ಮದುವೆಯಾಗುವ ನಿದರ್ಶನಗಳ ಕುರಿತು ಯಾವುದೇ ದೂರು ದಾಖಲಾದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಉಚ್ಚ ನ್ಯಾಯಾಲಯ ಸೂಚಿಸಿದ್ದು, ಮುಸ್ಲಿಂ ಮೂಲಭೂತವಾದಿಗಳಿಗೆ ನಿದ್ದೆ ಕೆಡಿಸಿದೆ.

ಯಾವುದೇ ಮತಾಂತರಗಳು ನಡೆದ ಕುರಿತು ಮಾಹಿತಿ ಇದ್ದರೆ ಕೂಡಲೇ ಆಯಾ ಜಿಲ್ಲಾಧಿಕಾರಿ ಅಥವಾ ತಾಲೂಕು ಆಡಳಿತದ ಗಮನಕ್ಕೆ ತನ್ನಿ. ಮತಾಂತರಗೊಳಿಸಿ ಮದುವೆಯಾದ ಒಂದೇ ವಾರದಲ್ಲಿ ಜಿಲ್ಲಾಧಿಕಾರಿ ನೋಟಿಸ್ ನೀಡಲಿದ್ದಾರೆ ಎಂದು ಜನರಿಗೂ ಕೋರ್ಟ್ ನಿರ್ದೇಶನ ನೀಡಿದೆ.

ಪಾಯಲ್ ಸಾಂಘ್ವಿ ಎಂಬ 22 ವರ್ಷದ ಯುವತಿ ಫಯಾಜ್ ಮೋದಿ ಎಂಬ ಮುಸ್ಲಿಂ ಯುವಕನ ಜತೆ ಮದುವೆಯಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಯುವತಿಯ ಸಹೋದರ ಚಿರಾಗ್ ಸಾಂಘ್ವಿ, ಮತಾಂತರ ಮಾಡಿ ಮದುವೆ ಮಾಡಿಸುವ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟಿಗೆ ಹೇಬಿಯಸ್ ಕಾರ್ಪಸ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಗೊತ್ತುವಳಿ ಹೊರಡಿಸಿದೆ.

ರಾಜಸ್ಥಾನ ಸರ್ಕಾರ ಸಹ ಮತಾಂತರ ತಡೆಯುವ ನಿಟ್ಟಿನಲ್ಲಿ 2006ರಲ್ಲೇ ರಾಜಸ್ಥಾನ ಧರ್ಮ ಸ್ವತಂತ್ರತಾ ಕಾಯಿದೆ ಅಂಗೀಕರಿಸಿ ರಾಷ್ಟ್ರಪತಿಯವರಿಗೆ ಸಲ್ಲಿಸಿದೆಯಾದರೂ, ಇನ್ನೂ ಜಾರಿಯಾಗಿಲ್ಲ. ಆದರೂ ರಾಜಸ್ಥಾನ ಹೈಕೋರ್ಟ್ ಹೊರಡಿಸಿರುವ ಗೊತ್ತುವಳಿಯಿಂದ ಮತಾಂತರಕ್ಕೆ ಕಡಿವಾಣ ಬೀಳಲಿದೆ ಎಂದು ವಿಶ್ಲೇಷಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search