• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಲವಂತದ ಮತಾಂತರದ ಗೊತ್ತುವಳಿ ಹೊರಡಿಸಿದ ರಾಜಸ್ಥಾನ ಹೈ ಕೋರ್ಟ್..

TNN Correspondent Posted On December 16, 2017
0


0
Shares
  • Share On Facebook
  • Tweet It

ಜೈಪುರ: ರಾಜಸ್ಥಾನದ ಇತ್ತೀಚೆಗೆ ಬಲವಂತದ ಮತಾಂತರದ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ, ಇದಕ್ಕೆ ಕಡಿವಾಣ ಹಾಕಲು ರಾಜಸ್ಥಾನ ಹೈಕೋರ್ಟ್ ನಿರ್ದೇಶನ ನೀಡಿದ್ದು, ಬಲವಂತದ ಮತಾಂತರದ ವಿರುದ್ಧ ಗೊತ್ತುವಳಿ ಹೊರಡಿಸಿದೆ.

ಬಲವಂತಾದ ಮತಾಂತರ ಹಾಗೂ ಮತಾಂತರಗೊಳಿಸಿ ಮದುವೆಯಾಗುವ ನಿದರ್ಶನಗಳ ಕುರಿತು ಯಾವುದೇ ದೂರು ದಾಖಲಾದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಉಚ್ಚ ನ್ಯಾಯಾಲಯ ಸೂಚಿಸಿದ್ದು, ಮುಸ್ಲಿಂ ಮೂಲಭೂತವಾದಿಗಳಿಗೆ ನಿದ್ದೆ ಕೆಡಿಸಿದೆ.

ಯಾವುದೇ ಮತಾಂತರಗಳು ನಡೆದ ಕುರಿತು ಮಾಹಿತಿ ಇದ್ದರೆ ಕೂಡಲೇ ಆಯಾ ಜಿಲ್ಲಾಧಿಕಾರಿ ಅಥವಾ ತಾಲೂಕು ಆಡಳಿತದ ಗಮನಕ್ಕೆ ತನ್ನಿ. ಮತಾಂತರಗೊಳಿಸಿ ಮದುವೆಯಾದ ಒಂದೇ ವಾರದಲ್ಲಿ ಜಿಲ್ಲಾಧಿಕಾರಿ ನೋಟಿಸ್ ನೀಡಲಿದ್ದಾರೆ ಎಂದು ಜನರಿಗೂ ಕೋರ್ಟ್ ನಿರ್ದೇಶನ ನೀಡಿದೆ.

ಪಾಯಲ್ ಸಾಂಘ್ವಿ ಎಂಬ 22 ವರ್ಷದ ಯುವತಿ ಫಯಾಜ್ ಮೋದಿ ಎಂಬ ಮುಸ್ಲಿಂ ಯುವಕನ ಜತೆ ಮದುವೆಯಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಯುವತಿಯ ಸಹೋದರ ಚಿರಾಗ್ ಸಾಂಘ್ವಿ, ಮತಾಂತರ ಮಾಡಿ ಮದುವೆ ಮಾಡಿಸುವ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟಿಗೆ ಹೇಬಿಯಸ್ ಕಾರ್ಪಸ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಗೊತ್ತುವಳಿ ಹೊರಡಿಸಿದೆ.

ರಾಜಸ್ಥಾನ ಸರ್ಕಾರ ಸಹ ಮತಾಂತರ ತಡೆಯುವ ನಿಟ್ಟಿನಲ್ಲಿ 2006ರಲ್ಲೇ ರಾಜಸ್ಥಾನ ಧರ್ಮ ಸ್ವತಂತ್ರತಾ ಕಾಯಿದೆ ಅಂಗೀಕರಿಸಿ ರಾಷ್ಟ್ರಪತಿಯವರಿಗೆ ಸಲ್ಲಿಸಿದೆಯಾದರೂ, ಇನ್ನೂ ಜಾರಿಯಾಗಿಲ್ಲ. ಆದರೂ ರಾಜಸ್ಥಾನ ಹೈಕೋರ್ಟ್ ಹೊರಡಿಸಿರುವ ಗೊತ್ತುವಳಿಯಿಂದ ಮತಾಂತರಕ್ಕೆ ಕಡಿವಾಣ ಬೀಳಲಿದೆ ಎಂದು ವಿಶ್ಲೇಷಿಸಲಾಗಿದೆ.

0
Shares
  • Share On Facebook
  • Tweet It




Trending Now
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
  • Popular Posts

    • 1
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search