• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಲವಂತದ ಮತಾಂತರದ ಗೊತ್ತುವಳಿ ಹೊರಡಿಸಿದ ರಾಜಸ್ಥಾನ ಹೈ ಕೋರ್ಟ್..

TNN Correspondent Posted On December 16, 2017


  • Share On Facebook
  • Tweet It

ಜೈಪುರ: ರಾಜಸ್ಥಾನದ ಇತ್ತೀಚೆಗೆ ಬಲವಂತದ ಮತಾಂತರದ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ, ಇದಕ್ಕೆ ಕಡಿವಾಣ ಹಾಕಲು ರಾಜಸ್ಥಾನ ಹೈಕೋರ್ಟ್ ನಿರ್ದೇಶನ ನೀಡಿದ್ದು, ಬಲವಂತದ ಮತಾಂತರದ ವಿರುದ್ಧ ಗೊತ್ತುವಳಿ ಹೊರಡಿಸಿದೆ.

ಬಲವಂತಾದ ಮತಾಂತರ ಹಾಗೂ ಮತಾಂತರಗೊಳಿಸಿ ಮದುವೆಯಾಗುವ ನಿದರ್ಶನಗಳ ಕುರಿತು ಯಾವುದೇ ದೂರು ದಾಖಲಾದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಉಚ್ಚ ನ್ಯಾಯಾಲಯ ಸೂಚಿಸಿದ್ದು, ಮುಸ್ಲಿಂ ಮೂಲಭೂತವಾದಿಗಳಿಗೆ ನಿದ್ದೆ ಕೆಡಿಸಿದೆ.

ಯಾವುದೇ ಮತಾಂತರಗಳು ನಡೆದ ಕುರಿತು ಮಾಹಿತಿ ಇದ್ದರೆ ಕೂಡಲೇ ಆಯಾ ಜಿಲ್ಲಾಧಿಕಾರಿ ಅಥವಾ ತಾಲೂಕು ಆಡಳಿತದ ಗಮನಕ್ಕೆ ತನ್ನಿ. ಮತಾಂತರಗೊಳಿಸಿ ಮದುವೆಯಾದ ಒಂದೇ ವಾರದಲ್ಲಿ ಜಿಲ್ಲಾಧಿಕಾರಿ ನೋಟಿಸ್ ನೀಡಲಿದ್ದಾರೆ ಎಂದು ಜನರಿಗೂ ಕೋರ್ಟ್ ನಿರ್ದೇಶನ ನೀಡಿದೆ.

ಪಾಯಲ್ ಸಾಂಘ್ವಿ ಎಂಬ 22 ವರ್ಷದ ಯುವತಿ ಫಯಾಜ್ ಮೋದಿ ಎಂಬ ಮುಸ್ಲಿಂ ಯುವಕನ ಜತೆ ಮದುವೆಯಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಯುವತಿಯ ಸಹೋದರ ಚಿರಾಗ್ ಸಾಂಘ್ವಿ, ಮತಾಂತರ ಮಾಡಿ ಮದುವೆ ಮಾಡಿಸುವ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟಿಗೆ ಹೇಬಿಯಸ್ ಕಾರ್ಪಸ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಗೊತ್ತುವಳಿ ಹೊರಡಿಸಿದೆ.

ರಾಜಸ್ಥಾನ ಸರ್ಕಾರ ಸಹ ಮತಾಂತರ ತಡೆಯುವ ನಿಟ್ಟಿನಲ್ಲಿ 2006ರಲ್ಲೇ ರಾಜಸ್ಥಾನ ಧರ್ಮ ಸ್ವತಂತ್ರತಾ ಕಾಯಿದೆ ಅಂಗೀಕರಿಸಿ ರಾಷ್ಟ್ರಪತಿಯವರಿಗೆ ಸಲ್ಲಿಸಿದೆಯಾದರೂ, ಇನ್ನೂ ಜಾರಿಯಾಗಿಲ್ಲ. ಆದರೂ ರಾಜಸ್ಥಾನ ಹೈಕೋರ್ಟ್ ಹೊರಡಿಸಿರುವ ಗೊತ್ತುವಳಿಯಿಂದ ಮತಾಂತರಕ್ಕೆ ಕಡಿವಾಣ ಬೀಳಲಿದೆ ಎಂದು ವಿಶ್ಲೇಷಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
Tulunadu News September 22, 2023
ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
Tulunadu News September 15, 2023
Leave A Reply

  • Recent Posts

    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
    • ಆ ನಿರೂಪಕ ಇದ್ದರೆ ಬರಲ್ಲ ಎನ್ನುವುದು ಶೂರತನವೇ?
    • ಏನಂತ ಚೈತ್ರಾಳಿಗೆ ಅಷ್ಟು ಹಣ ಕೊಟ್ರು ಪೂಜಾರಿ!?
    • ಉತ್ತರಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಶಿಕ್ಷಣ
    • ಭಾರತ್ ಮಾತಾ ಕೀ ಜೈ ಎಂದು ಮೀಡಿಯಾ ಸೆಂಟರ್ ನಲ್ಲಿ ಉದ್ಘೋಷಣೆ!
    • ಈ ಬಾರಿ ಮಹಿಷ ದಸರಾ ಯಾಕೆ ನಡೆಯಬೇಕು!
    • ಸೌದಿಗೆ ಇಂಧನ ಶಕ್ತಿ ತುಂಬಲಿರುವ ಭಾರತ!
    • ಚೈತ್ರಾ ಕುಂದಾಪುರ ಬಂಧನದ ಹಿಂದಿನ ಕಥೆ ಏನು?
  • Popular Posts

    • 1
      ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search