• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಲವಂತದ ಮತಾಂತರದ ಗೊತ್ತುವಳಿ ಹೊರಡಿಸಿದ ರಾಜಸ್ಥಾನ ಹೈ ಕೋರ್ಟ್..

TNN Correspondent Posted On December 16, 2017
0


0
Shares
  • Share On Facebook
  • Tweet It

ಜೈಪುರ: ರಾಜಸ್ಥಾನದ ಇತ್ತೀಚೆಗೆ ಬಲವಂತದ ಮತಾಂತರದ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ, ಇದಕ್ಕೆ ಕಡಿವಾಣ ಹಾಕಲು ರಾಜಸ್ಥಾನ ಹೈಕೋರ್ಟ್ ನಿರ್ದೇಶನ ನೀಡಿದ್ದು, ಬಲವಂತದ ಮತಾಂತರದ ವಿರುದ್ಧ ಗೊತ್ತುವಳಿ ಹೊರಡಿಸಿದೆ.

ಬಲವಂತಾದ ಮತಾಂತರ ಹಾಗೂ ಮತಾಂತರಗೊಳಿಸಿ ಮದುವೆಯಾಗುವ ನಿದರ್ಶನಗಳ ಕುರಿತು ಯಾವುದೇ ದೂರು ದಾಖಲಾದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಉಚ್ಚ ನ್ಯಾಯಾಲಯ ಸೂಚಿಸಿದ್ದು, ಮುಸ್ಲಿಂ ಮೂಲಭೂತವಾದಿಗಳಿಗೆ ನಿದ್ದೆ ಕೆಡಿಸಿದೆ.

ಯಾವುದೇ ಮತಾಂತರಗಳು ನಡೆದ ಕುರಿತು ಮಾಹಿತಿ ಇದ್ದರೆ ಕೂಡಲೇ ಆಯಾ ಜಿಲ್ಲಾಧಿಕಾರಿ ಅಥವಾ ತಾಲೂಕು ಆಡಳಿತದ ಗಮನಕ್ಕೆ ತನ್ನಿ. ಮತಾಂತರಗೊಳಿಸಿ ಮದುವೆಯಾದ ಒಂದೇ ವಾರದಲ್ಲಿ ಜಿಲ್ಲಾಧಿಕಾರಿ ನೋಟಿಸ್ ನೀಡಲಿದ್ದಾರೆ ಎಂದು ಜನರಿಗೂ ಕೋರ್ಟ್ ನಿರ್ದೇಶನ ನೀಡಿದೆ.

ಪಾಯಲ್ ಸಾಂಘ್ವಿ ಎಂಬ 22 ವರ್ಷದ ಯುವತಿ ಫಯಾಜ್ ಮೋದಿ ಎಂಬ ಮುಸ್ಲಿಂ ಯುವಕನ ಜತೆ ಮದುವೆಯಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಯುವತಿಯ ಸಹೋದರ ಚಿರಾಗ್ ಸಾಂಘ್ವಿ, ಮತಾಂತರ ಮಾಡಿ ಮದುವೆ ಮಾಡಿಸುವ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟಿಗೆ ಹೇಬಿಯಸ್ ಕಾರ್ಪಸ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಗೊತ್ತುವಳಿ ಹೊರಡಿಸಿದೆ.

ರಾಜಸ್ಥಾನ ಸರ್ಕಾರ ಸಹ ಮತಾಂತರ ತಡೆಯುವ ನಿಟ್ಟಿನಲ್ಲಿ 2006ರಲ್ಲೇ ರಾಜಸ್ಥಾನ ಧರ್ಮ ಸ್ವತಂತ್ರತಾ ಕಾಯಿದೆ ಅಂಗೀಕರಿಸಿ ರಾಷ್ಟ್ರಪತಿಯವರಿಗೆ ಸಲ್ಲಿಸಿದೆಯಾದರೂ, ಇನ್ನೂ ಜಾರಿಯಾಗಿಲ್ಲ. ಆದರೂ ರಾಜಸ್ಥಾನ ಹೈಕೋರ್ಟ್ ಹೊರಡಿಸಿರುವ ಗೊತ್ತುವಳಿಯಿಂದ ಮತಾಂತರಕ್ಕೆ ಕಡಿವಾಣ ಬೀಳಲಿದೆ ಎಂದು ವಿಶ್ಲೇಷಿಸಲಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search