• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚೀನಾಕ್ಕೆ ಸೆಡ್ಡು ಈಶಾನ್ಯ ರಾಜ್ಯಗಳಿಗೆ ಮೋದಿ 90 ಸಾವಿರ ಕೋಟಿ ಕೊಡುಗೆ

TNN Correspondent Posted On December 17, 2017


  • Share On Facebook
  • Tweet It

ಶಿಲ್ಲಾಂಗ್: ಈಶಾನ್ಯ ರಾಜ್ಯಗಳ ವಿಚಾರದಲ್ಲಿ ಪದೇ ಪದೆ ಖ್ಯಾತೆ ತೆಗೆಯುವ ಚೀನಾ ಪ್ರಧಾನಿ ನರೇಂದ್ರ ಮೋದಿ ಇಂದು ಭಾರಿ ಶಾಕ್ ನೀಡಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ ಅಭಿವೃದ್ಧಿಗೆ ವಿರೋಧ ವ್ಯಕ್ತಡಿಸುತ್ತಿದ್ದ ಚೀನಾ ತಕ್ಕ ಉತ್ತರ ನೀಡಿರುವ ಮೋದಿ ಈಶಾನ್ಯ ರಾಜ್ಯಗಳಲ್ಲಿ ರಸ್ತೆ ಅಭಿವೃದ್ಧಿಗಾಗಿ 90 ಸಾವಿರ ಕೋಟಿ ರೂಪಾಯಿ ನೀಡಿದ್ದಾರೆ.

ರಸ್ತೆ ಮತ್ತು ರಾಜ್ಯ, ರಾಷ್ಟ್ರ ಹೆದ್ದಾರಿಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಕೊಡುಗೆ ನೀಡಿದ್ದಾರೆ. ಈ ಮೂಲಕ ಚೀನಾಕ್ಕೆ ಪರೋಕ್ಷವಾಗಿ ಸೆಡ್ಡುವ ಹೊಡೆಯುವ ದೂರದೃಷ್ಟಿಯು ನರೇಂದ್ರ ಮೋದಿ ಹೊಂದಿದ್ದಾರೆ. ಗುಡಗಾಡು ಪ್ರದೇಶಗಳೇ ಹೆಚ್ಚಾಗಿರುವ ಈಶಾನ್ಯ ರಾಜ್ಯಗಳಲ್ಲಿ ಸಾರಿಗೆ ಸಮಸ್ಯೆ ತೀವ್ರವಾಗಿದ್ದು ಅದನ್ನು ನಿವಾರಿಸಲು ಕೇಂದ್ರ ಸರ್ಕಾರ ಕಟಿಬದ್ಧವಾಗಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.

ಮೀಜೋರಾಂನ ಐಜ್ವಾಲದಲ್ಲಿ ಶುಕ್ರವಾರ ನಡೆದ ಟೋರಿಯಲ್ ಹೈಡ್ರೋ ಎಲೆಕ್ಟ್ರಿಕ್ ಪ್ರೋಜೆಕ್ಟ್ ಉದ್ಘಾಟಿಸಿ ಮಾತನಾಡಿ, ನಾನು 2014ರಲ್ಲಿ ಅಧಿಕಾರ ಸ್ವೀಕರಿಸುವ ನನ್ನ ಸಚಿವರಿಗೆ ಪ್ರತಿ 15 ದಿನಕ್ಕೊಮ್ಮೆ ಒಬ್ಬರು ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡಬೇಕು ಎಂದು ಹೇಳಿದ್ದೆ. ಅದರಂತೆ ನಡೆದುಕೊಳ್ಳುತ್ತಿದ್ದೇವೆ. ನಮ್ಮ ಸಚಿವರು ಇಲ್ಲಿಗೆ ಭೇಟಿ ನೀಡಿ, ಜನರೊಂದಿಗೆ ಸಂವನ ನಡೆಸಿ, ಅವರ ನೋವಿಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.

ಈಶಾನ್ಯ ರಾಜ್ಯಗಳ ಪ್ರಮುಖ ಪಟ್ಟಣಗಳಾದ ಶಿಲ್ಲಾಂಗ್ ಮತ್ತು ತುರಾಗಳನ್ನು ಸಂಪರ್ಕಿಸಿ ಆರ್ಥಿಕ ಚೈತನ್ಯ ನೀಡುವ ಗುರಿ ಹೊಂದಲಾಗಿದೆ. ನಮ್ಮ ಧ್ಯೇಯವೇ ಸುಸಜ್ಜಿತ ಸಾಗಣೆ ವ್ಯವಸ್ಥೆ ಕಲ್ಪಿಸುವುದು ಮತ್ತು ಪರಿವರ್ತನೆ ತರುವುದು. ಈಶಾನ್ಯ ರಾಜ್ಯಗಳಲ್ಲಿ ನಾಲ್ಕು ಸಾವಿರ ಕಿ.ಲೋ ಮೀಟರ್ ಹೆದ್ದಾರಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search