• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇವಿಎಂ ಹ್ಯಾಕ್ ಎನ್ನುತ್ತಿರುವ ಸಿದ್ದರಾಮಯ್ಯ ಕಾಂಗ್ರೆಸ್ ನೇತೃತ್ವದ ಪಂಜಾಬ್ ಸಿಎಂ ಮಾತು ಕೇಳಿ

TNN Correspondent Posted On December 18, 2017
0


0
Shares
  • Share On Facebook
  • Tweet It

ದೆಹಲಿ: ದೇಶಾದ್ಯಂತ ಬಿಜೆಪಿ ಜಯಭೇರಿ ಬಾರಿಸುತ್ತಿರುವುದರಿಂದ ಕಂಗೆಟ್ಟಿರುವ ಕಾಂಗ್ರೆಸ್ ಮತ್ತು ಇತರೆ ಪಕ್ಷಗಳು ತಮ್ಮ ನೆಲೆ ಉಳಿಸಿಕೊಳ್ಳಲು ಮತ್ತು ಸೋಲಿಗೆ ನೆಪ ಹುಡುಕಾಡಲು ಮತಯಂತ್ರ ದುರ್ಬಳಕೆಯ ಆರೋಪ ಮಾಡುತ್ತಿದ್ದಾರೆ. ವಿಶೇಷವಾಗಿ ಕಾಂಗ್ರೆಸ್ ಅಂಡು ಸುಟ್ಟ ಬೆಕ್ಕಿನಂತಾಡುತ್ತಿದೆ. ಇತ್ತ ಕರ್ನಾಟಕದಲ್ಲಿ ಸಿದ್ದರಾಮಯ್ಯ ಕೂಡ ಇವಿಎಂ ಬಳಕೆ ಬೇಡ ಎಂದು ಸೋಲಿಗೆ ಮುಂಚೆಯೇ ಗೀಳಿಡುತ್ತಿದ್ದಾರೆ. ಆದರೆ ಇವರೆಲ್ಲರಿಗೂ ಮಾದರಿಯಾಗುವಂತೆ, ಪಂಜಾಬ್ ನಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿರುವ ಮಾತು ಸದಾ ಸ್ಮರಣೀಯ ಅದನ್ನು ನಮ್ಮ ಸಿದ್ದರಾಮಯ್ಯ ಸೇರಿ ಇಡೀ ಕಾಂಗ್ರೆಸ್ ಪಾಳಯ ಒಮ್ಮೆ ಕೇಳಿಸಿಕೊಳ್ಳಲೇಬೇಕು.

‘ಮತಯಂತ್ರಗಳು ಹ್ಯಾಕ್ ಆಗುತ್ತಿದ್ದರೇ ನಾನು ಇಂದು ಅಧಿಕಾರಕ್ಕೇ ಏರುತ್ತಿರಲಿಲ್ಲ. ಹ್ಯಾಕ್ ಆಗುತ್ತದೆ ಎಂಬುದು ಸುಳ್ಳು.

ಇದು ಏಪ್ರೀಲ್ ನಲ್ಲಿ ಪಂಚರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ಮತ್ತು ಕಾಂಗ್ರೆಸ್ ಒಂದು ರಾಜ್ಯದಲ್ಲಿ ಅಧಿಕಾರಕ್ಕೇರಿದಾಗ ಬಿಜೆಪಿ ವಿರುದ್ಧ ಕೈಮಾಡಿದ ಆರೋಪಕ್ಕೆ ಅವರದ್ದೇ ಪಕ್ಷದ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ ಮಾತು.

ಕೇಂದ್ರ ಕಾನೂನು ಮಾಜಿ ಸಚಿವ ವೀರಪ್ಪ ಮೋಯ್ಲಿ ನಂತರ ಮತಯಂತ್ರಗಳ ದುರ್ಬಳಕೆ ಆರೋಪ ಸರಿಯಲ್ಲ ಎಂದು ಹೇಳುತ್ತಿರುವ ಮತ್ತೊಬ್ಬ ಹಿರಿಯ ಮುಖಂಡ ಅಮರಿಂದರ್ ಸಿಂಗ್.

ಪಂಜಾಬ್ ನಲ್ಲಿ ಕಾಂಗ್ರೆಸ್ ಅಮರಿಂದರ್ ಸಿಂಗ್ ನೇತೃತ್ವದಲ್ಲಿ 117 ಸ್ಥಾನಗಳಲ್ಲಿ 77 ಸ್ಥಾನಗಳನ್ನು ಪಡೆಯುವ ಮೂಲಕ ಆಡಲಿತದ ಚುಕ್ಕಾಣಿ ಹಿಡಿಯಿತು. ಆದರೆ ಈ ವೇಳೆ ನಾಲ್ಕು ರಾಜ್ಯದಲ್ಲಿ ಸೋತ ಕಾರಣಕ್ಕೆ ಹಲವು ಕೈ ಮುಖಂಡರು ಬಿಜೆಪಿ ವಿರುದ್ಧ ಮತಯಂತ್ರವನ್ನು ಚುನಾವಣೆ ಆಯೋಗದ ಮೂಲಕ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದವು. ಆದರೆ ಅವರಿಗೆ ಪಂಜಾಬ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಮತಯಂತ್ರದಲ್ಲಿ ನಡೆದಿರುವ ಮತ ಪ್ರಕ್ರಿಯೆಯಲ್ಲಿಯೇ ಎಂಬ ಸಣ್ಣ ಜ್ಞಾನವೂ ಇಲ್ಲದಂತೆ ವರ್ತಿಸಿದ್ದರು. ಅಲ್ಲದೇ ಬ್ಯಾಲೆಟ್ ಪೇಪರ್ ಮೂಲಕ ಮತದಾನ ಪ್ರಕ್ರಿಯೆ ನಡೆಸಬೇಕು ಎಂದು ಆಗ್ರಹಿಸಿದರು.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search