• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಗೆ ನುಂಗಲಾರದ ತುತ್ತಾದ ಗುಜರಾತ್ ಫಲಿತಾಂಶ

TNN Correspondent Posted On December 19, 2017
0


0
Shares
  • Share On Facebook
  • Tweet It

‘ಅಕ್ಕಿ ಮೇಲಾಸೆ ಬೀಗರ ಮೇಲೆ ಪ್ರೀತಿ’ ಉತ್ತರ ಕರ್ನಾಟಕದ ಪ್ರಸಿದ್ಧ ಗಾದೆ ಇದು. ಈ ಗಾದೆ ಇದೀಗ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್ ಗೆ ಎದುರಾಗಿರುವ ಸ್ಥಿತಿ. ಅತ್ತ ಇವಿಎಂ ನ್ನು ದೂಷಿಸಬೇಕೆಂದರೆ ತಕ್ಕ ಮಟ್ಟಿಗೆ ಕಾಂಗ್ರೆಸ್ ಸೀಟ್ ಗಳು ಬಂದಿವೆ. ವಿಜಯೋತ್ಸವ ಆಚರಿಸಬೇಕು ಎಂದರೆ ಬಹುಮತಕ್ಕೆ ಬೇಕಾದ ಸ್ಥಾನಗಳು ಬಂದಿಲ್ಲ. ಆದ್ದರಿಂದ ಬಿಜೆಪಿ ಗೆಲುವನ್ನು ವಿರೋಧಿಸಲು ಯಾವುದೇ ಬತ್ತಳಿಕೆ ಇಲ್ಲದೇ ಕಾಂಗ್ರೆಸ್ ಯುವರಾಜ್ ರಾಹುಲ್ ಗಾಂಧಿ ದೆಹಲಿಯ 10 ಜನಪಥ್ ಮನೆಯಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿದ್ದಾರೆ ಎಂಬ ಮಾಹಿತಿ ಇದೆ.

ತಮ್ಮ ಮೂಗಿನ ನೇರಕ್ಕೆ ಚುನಾವಣೆ ಆಯೋಗವನ್ನು ಶಪಿಸಿದ್ದ ಕಾಂಗ್ರೆಸ್ ಮತ್ತು  ಸಾಥಿಗಳಾದ ಜಿಗ್ನೇಶ್ ಮೇವಾನಿ, ಅಲ್ಪೇಶ್ ಠಾಕೂರ್ ಮತ್ತು ಹಾರ್ದಿಕ್ ಪಟೇಲ್ ಗೆ ಇದೀಗ ಫಲಿತಾಂಶ ಹೇಗೆ ಸ್ವೀಕರಿಸಬೇಕು ಎಂಬ ಗಾಡ ಚಿಂತೆ ಮೂಡಿದೆ. ಇದೇ ಅಲ್ಲವೇ ಪ್ರಜಾಪ್ರಭುತ್ವದ ಸೌಂದರ್ಯ.

ಕಾಂಗ್ರೆಸ್ ಮತ್ತು ತಂಡ ಮೋದಿ ಹಾಗೂ ಬಿಜೆಪಿ ವಿರುದ್ಧ ಹೋರಾಟ, ಹಾರಾಟ, ದೂಷಣೆ ಮಾಡಿದರೂ ಕೊನೆಗೆ ಪ್ರಜ್ಞಾವಂತ ಗುಜರಾತ್ ಮತದಾರ ಮೋದಿಗೆ ಜೈ ಅಂದಿದ್ದಾನೆ. ಜಿಎಸ್ ಟಿಯನ್ನು ಪ್ರಬಲವಾಗಿ ಬಳಸಿಕೊಂಡು ಉದ್ಯಮಿಗಳನ್ನು ಎತ್ತಿಕಟ್ಟಲು ಪ್ರಯತ್ನಿಸಿದರೂ ಅವರು ಕೂಡ ಮೋದಿಗೆ ಜೈ ಅಂದಿದ್ದಾರೆ. ಅದಕ್ಕೆ ಹೆಚ್ಚು ಉದ್ಯಮಿಗಳೇ ಇರುವ ಸುರತ್ ನ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ನೋಟ್ ಬ್ಯಾನ್ ನ್ನು ವಿರೋಧಿಸಿದ ಎಲ್ಲ ಪಕ್ಷಗಳಿಗೂ ಜನರು ಪಂಚ ರಾಜ್ಯಗಳಲ್ಲಿ ತಕ್ಕ ಉತ್ತರ ನೀಡಿದ್ದಾರೆ. ಅಲ್ಲಿಗೆ  ಬತ್ತಳಿಕೆ ಖಾಲಿ ಮಾಡಿ ಕುಳಿತುಕೊಂಡಿರುವ ಕಾಂಗ್ರೆಸ್ ಇದೀಗ ಅಕ್ಷರಶಃ ಬೀದಿಗೆ ಬಿದ್ದಿದೆ ಎಂದರೆ ಅಚ್ಚರಿಯಾಗಲಾಗದು.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search