• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್ ಗೆ ನುಂಗಲಾರದ ತುತ್ತಾದ ಗುಜರಾತ್ ಫಲಿತಾಂಶ

TNN Correspondent Posted On December 19, 2017


  • Share On Facebook
  • Tweet It

‘ಅಕ್ಕಿ ಮೇಲಾಸೆ ಬೀಗರ ಮೇಲೆ ಪ್ರೀತಿ’ ಉತ್ತರ ಕರ್ನಾಟಕದ ಪ್ರಸಿದ್ಧ ಗಾದೆ ಇದು. ಈ ಗಾದೆ ಇದೀಗ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್ ಗೆ ಎದುರಾಗಿರುವ ಸ್ಥಿತಿ. ಅತ್ತ ಇವಿಎಂ ನ್ನು ದೂಷಿಸಬೇಕೆಂದರೆ ತಕ್ಕ ಮಟ್ಟಿಗೆ ಕಾಂಗ್ರೆಸ್ ಸೀಟ್ ಗಳು ಬಂದಿವೆ. ವಿಜಯೋತ್ಸವ ಆಚರಿಸಬೇಕು ಎಂದರೆ ಬಹುಮತಕ್ಕೆ ಬೇಕಾದ ಸ್ಥಾನಗಳು ಬಂದಿಲ್ಲ. ಆದ್ದರಿಂದ ಬಿಜೆಪಿ ಗೆಲುವನ್ನು ವಿರೋಧಿಸಲು ಯಾವುದೇ ಬತ್ತಳಿಕೆ ಇಲ್ಲದೇ ಕಾಂಗ್ರೆಸ್ ಯುವರಾಜ್ ರಾಹುಲ್ ಗಾಂಧಿ ದೆಹಲಿಯ 10 ಜನಪಥ್ ಮನೆಯಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿದ್ದಾರೆ ಎಂಬ ಮಾಹಿತಿ ಇದೆ.

ತಮ್ಮ ಮೂಗಿನ ನೇರಕ್ಕೆ ಚುನಾವಣೆ ಆಯೋಗವನ್ನು ಶಪಿಸಿದ್ದ ಕಾಂಗ್ರೆಸ್ ಮತ್ತು  ಸಾಥಿಗಳಾದ ಜಿಗ್ನೇಶ್ ಮೇವಾನಿ, ಅಲ್ಪೇಶ್ ಠಾಕೂರ್ ಮತ್ತು ಹಾರ್ದಿಕ್ ಪಟೇಲ್ ಗೆ ಇದೀಗ ಫಲಿತಾಂಶ ಹೇಗೆ ಸ್ವೀಕರಿಸಬೇಕು ಎಂಬ ಗಾಡ ಚಿಂತೆ ಮೂಡಿದೆ. ಇದೇ ಅಲ್ಲವೇ ಪ್ರಜಾಪ್ರಭುತ್ವದ ಸೌಂದರ್ಯ.

ಕಾಂಗ್ರೆಸ್ ಮತ್ತು ತಂಡ ಮೋದಿ ಹಾಗೂ ಬಿಜೆಪಿ ವಿರುದ್ಧ ಹೋರಾಟ, ಹಾರಾಟ, ದೂಷಣೆ ಮಾಡಿದರೂ ಕೊನೆಗೆ ಪ್ರಜ್ಞಾವಂತ ಗುಜರಾತ್ ಮತದಾರ ಮೋದಿಗೆ ಜೈ ಅಂದಿದ್ದಾನೆ. ಜಿಎಸ್ ಟಿಯನ್ನು ಪ್ರಬಲವಾಗಿ ಬಳಸಿಕೊಂಡು ಉದ್ಯಮಿಗಳನ್ನು ಎತ್ತಿಕಟ್ಟಲು ಪ್ರಯತ್ನಿಸಿದರೂ ಅವರು ಕೂಡ ಮೋದಿಗೆ ಜೈ ಅಂದಿದ್ದಾರೆ. ಅದಕ್ಕೆ ಹೆಚ್ಚು ಉದ್ಯಮಿಗಳೇ ಇರುವ ಸುರತ್ ನ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ನೋಟ್ ಬ್ಯಾನ್ ನ್ನು ವಿರೋಧಿಸಿದ ಎಲ್ಲ ಪಕ್ಷಗಳಿಗೂ ಜನರು ಪಂಚ ರಾಜ್ಯಗಳಲ್ಲಿ ತಕ್ಕ ಉತ್ತರ ನೀಡಿದ್ದಾರೆ. ಅಲ್ಲಿಗೆ  ಬತ್ತಳಿಕೆ ಖಾಲಿ ಮಾಡಿ ಕುಳಿತುಕೊಂಡಿರುವ ಕಾಂಗ್ರೆಸ್ ಇದೀಗ ಅಕ್ಷರಶಃ ಬೀದಿಗೆ ಬಿದ್ದಿದೆ ಎಂದರೆ ಅಚ್ಚರಿಯಾಗಲಾಗದು.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search