• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಕನಸಿಗೆ ಎಳ್ಳುನೀರು ಮೋದಿ ಒರೆಸಿದರು ಜನರ ಕಣ್ಣೀರು..!

ದಿವ್ಯಾ ಕಾಸರಗೋಡು Posted On December 19, 2017
0


0
Shares
  • Share On Facebook
  • Tweet It

ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ನಂತರ ಬಿಜೆಪಿ ತಳಮಟ್ಟದ ಕಾರ್ಯಕರ್ತರಿಂದ ಹಿಡಿದು ರಾಷ್ಟ್ರಮಟ್ಟದ ನಾಯಕರು ವಿಜಯೋತ್ಸವದಲ್ಲಿ ಮಿಂದೆದ್ದರು. ಅತ್ತ ಗೆಲುವಿನ ಕಹಳೆ ಮೊಳಗುತ್ತಲೇ ದೆಹಲಿಯಲ್ಲಿ ಅಮಿತ್ ಶಾ ಸಹಸ್ರಾರು ಕಾರ್ಯಕರ್ತರ ಮಧ್ಯೆ ನಿಂತು ಸಿಹಿ ಹಂಚಿ ಸಂಭ್ರಮಿಸಿದರು. ಆದರೆ ಪ್ರಧಾನ ಸೇವಕ ಪ್ರಜಾಪ್ರಭುತ್ವದ ದೇಗುಲದಲ್ಲಿ ವಿರೋಧ ಪಕ್ಷಗಳ ಮಾತು ಆಲಿಸುತ್ತಿದ್ದರು. ಅದೇ ಅಲ್ಲವೇ ಪ್ರಧಾನ ಸೇವಕನ ಲಕ್ಷಣ.

ಇಡೀ ರಾಷ್ಟ್ರಾಧ್ಯಂತ ಬಿಜೆಪಿ ಮುಖಂಡರು ವಿಜಯದ ಗುಂಗಿನಲ್ಲಿ ನಾನಾ ಲೆಕ್ಕಾಚಾರ ಹಾಕುತ್ತಾ ಕುಳಿತ್ತಿದ್ದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತ್ರ ಕಾರ್ಯಕರ್ತರಿಗೆ ಒಂದೆರಡು ಸ್ಫೂರ್ತಿಯ ಮಾತುಗಳನ್ನಾಡಿ, ಮತದಾರರಿಗೆ ವಂದನೆ ಸಲ್ಲಿಸಿ ವಿಜಯದ ಸಂಭ್ರವನ್ನು ಮುಗಿಸಿದ್ದರು. ಗೆದ್ದ ಖುಷಿಯಲ್ಲಿ ಅವರು ಪಕ್ಷದ ಮುಖಂಡರ ಜತೆ ಪಾರ್ಟಿ ಮಾಡದೇ ನೊಂದವರ ಕಣ್ಣೀರು ಒರೆಸಲು ತಡರಾತ್ರಿಯೇ ದೆಹಲಿ ಬಿಟ್ಟಿದ್ದರು. ಅತ್ತ ಕಾಂಗ್ರೆಸ್ ಮುಕ್ತ ಭಾರತಕ್ಕೆ ಮುನ್ನುಡಿ ಬರೆದು, ಇತ್ತ ಕೇರಳ, ತಮಿಳುನಾಡು, ಲಕ್ಷದ್ವೀಪದಲ್ಲಿ ಓಖಿ ಸಂಕಷ್ಟಕ್ಕೆ ಒಳಗಾಗಿದ್ದ ಜನರ ಕಣ್ಣೀರು ಒರೆಸಲು ಮಂಗಳೂರಿನತ್ತ ಧಾವಿಸಿದ್ದರು.

ಸೋಮವಾರ ರಾತ್ರಿ ವಿಜಯದ ನುಡಿಗಳನ್ನಾಡಿದ ನರೇಂದ್ರ ಮೋದಿ ನೇರ ಓಖಿ ಚಂಡಮಾರುತ್ತದ ಹೊಡೆತಕ್ಕೆ ತತ್ತರಿಸಿದ ಲಕ್ಷಾಂತರ ಜನರ ಕಣ್ಣೀರು ಒರೆಸಲು ಕರಾವಳಿಯತ್ತ ನಡೆದಿದ್ದರು. ರಾತ್ರಿ 12 ಗಂಟೆಗೆ ಮಂಗಳೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡುವ ಮೂಲಕ ಸರಳತೆ ಮೆರೆಯುವುದರೊಂದಿಗೆ, ನಾನು ಪ್ರಧಾನ ಸೇವಕ ಎಂಬುದನ್ನು ಸಾಬೀತು ಮಾಡಿದ್ದರು.

ನಿತ್ಯ ನಿದ್ರೆ ಬಿಟ್ಟು ವಿಜಯೋತ್ಸವದ ಗುಂಗಿನಲ್ಲಿ ಉಳಿಯದೇ ನೊಂದವರ ನೋವು, ನಲಿವು ಆಲಿಸಲು ಮುಂದಾಗಿದ್ದು, ಜನರ ಮನ ತಟ್ಟತ್ತದೆ ಎಂಬುದಕ್ಕೆ ಮೋದಿ ಸ್ವಾಗತಕ್ಕೆ ಮಂಗಳೂರಿನಲ್ಲಿ ರಾತ್ರಿ 12 ಗಂಟೆಗೆ ಸಹಸ್ರಾರು ಜನರು ಜಯಘೋಷಗಳೊಂದಿಗೆ ಸ್ವಾಗತಕ್ಕೆ ನಿಲ್ಲುತ್ತಾರೆ. ಹೆಣ್ಣು ಗಂಡು, ಯುವಕರು ಸೇರಿ ಜಯಘೋಷ ಮೊಳಗಿಸಿದ್ದೇ ಸಾಕ್ಷಿ.

ದೇಶದ ಸಮಸ್ಯೆಗಳನ್ನು ಚರ್ಚಿಸಬೇಕಾದ ಸಂಸತ್ ಅಧಿವೇಶನ ನಡೆಯುವ ವೇಳೆ ವಿದೇಶಿ ಯಾತ್ರೆಗೆ ಹೋಗುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎದುರು ನಮ್ಮ ಹೆಮ್ಮೆಯ ಪ್ರಧಾನಿ ಮಾದರಿಯಾಗಿ ನಿಲ್ಲುತ್ತಾರೆ. ಇಂತಹ ಸಣ್ಣ ಸಂಗತಿಗಳು ದೇಶದ ಪ್ರಧಾನ ಸೇವಕ ನರೇಂದ್ರ ಮೋದಿ ಅವರ ಮೇಲಿನ ಅಭಿಮಾನವನ್ನು ಹೆಚ್ಚಿಸುತ್ತದೆ. ಅದೇ ಅಲ್ಲವೇ ಬಿಜೆಪಿಯನ್ನು ಭಾರತದಾದ್ಯಂತ ವಿಜಯದ ಕಹಳೆಯನ್ನು ಮೊಳಗಿಸಿದರೇ, ವಿಶ್ವಾದ್ಯಂತ ಭಾರತದ ತಾಕತ್ತನ್ನು ಬಿಂಬಿಸುತ್ತಿದೆ. ನೋವಿಗೆ ಮಿಡಿಯುವ ಪ್ರಧಾನ ಸೇವಕನನ್ನು ನಾವು ಬೆಂಬಲಿಸದೇ, ವಿದೇಶಕ್ಕೆ ಹೋಗಿ ಮಜಾ ಮಾಡಿ ಬರುವ ವ್ಯಕ್ತಿಯನ್ನು ನಾವು ಬೆಂಬಲಿಸಲಾದೀತೇ?

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
ದಿವ್ಯಾ ಕಾಸರಗೋಡು February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
ದಿವ್ಯಾ ಕಾಸರಗೋಡು January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search